ಶಾಲೆಗೆ ಗೈರಾದ ವಿದ್ಯಾರ್ಥಿನಿಯರು

ಹಿಜಾಬ್‌ ನಿರ್ಬಂಧದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಇಳಿಮುಖವಾಗಿತ್ತು.

Team Udayavani, Feb 18, 2022, 6:04 PM IST

ಶಾಲೆಗೆ ಗೈರಾದ ವಿದ್ಯಾರ್ಥಿನಿಯರು

ಗದಗ: ನಗರದಲ್ಲಿ ಹಿಜಾಬ್‌ ವಿವಾದ ದಿನದಿಂದ ದಿನಕ್ಕೆ ತಾರಕ್ಕೇರುತ್ತಿದೆ. ನಗರದ ವಿವಿಧ ಶಾಲಾ-ಕಾಲೆಜುಗಳಲ್ಲಿ ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು, ಗುರುವಾರ ಶಾಲಾ-ಕಾಲೇಜಿಗೆ ಗೈರು ಹಾಜರಾಗುವ ಮೂಲಕ ತರಗತಿಗಳನ್ನು ಬಹಿಷ್ಕರಿಸಿದ್ದು, ನಗರದ ಉರ್ದು ಪ್ರೌಢಶಾಲೆಗೆ ಕೇವಲ 8 ವಿದ್ಯಾರ್ಥಿನಿಯರು ಹಾಜರಾಗಿದ್ದರು.

ನಗರದ ಪಂ.ಪುಟ್ಟರಾಜು ಕವಿಗವಾಯಿಗಳ ಬಸ್‌ ನಿಲ್ದಾಣ ಸಮೀಪದ ಉರ್ದು ಪ್ರೌಢ ಶಾಲೆಯಲ್ಲಿ ಕಳೆದ ಸೋಮವಾರ ಕೆಲ ವಿದ್ಯಾರ್ಥಿನಿಯರು ಹಾಗೂ ಪೋಷಕರು ಪ್ರತಿಭಟನೆ ನಡೆಸಿದ್ದರಿಂದ ವಿವಾದ ತೀವ್ರ ಸ್ವರೂಪ ಪಡೆದಿತ್ತು. ಬುಧವಾರ ಯಾವುದೇ ಗದ್ದಲ ಇಲ್ಲವಾಗಿತ್ತಾದರೂ, ಗುರುವಾರ ಬಹುತೇಕ ವಿದ್ಯಾರ್ಥಿನಿಯರು ಶಾಲೆಗೆ ಗೈರು ಹಾಜರಾಗಿದ್ದಾರೆ.

ಶಾಲೆಯಲ್ಲಿ 8 ರಿಂದ 10ನೇ ತರಗತಿ ವರೆಗೆ ಒಟ್ಟು 221 ವಿದ್ಯಾರ್ಥಿನಿಯರಿದ್ದು, ಈ ಪೈಕಿ ಕೇವಲ 8 ವಿದ್ಯಾರ್ಥಿನಿಯರು ಹಾಜರಾಗಿದ್ದರು. 10ನೇ ತರಗತಿಯಲ್ಲಿ 86 ವಿದ್ಯಾರ್ಥಿಗಳಲ್ಲಿ ಮೂವರು, 8ನೇ ತರಗತಿಯ 68 ವಿದ್ಯಾರ್ಥಿಗಳ ಪೈಕಿ ಐವರು ಮಾತ್ರ ಹಾಜರಾಗಿದ್ದು, 9ನೇ ತರಗತಿಯ 67 ವಿದ್ಯಾರ್ಥಿಗಳ ಪೈಕಿ ಯಾರೊಬ್ಬರೂ ಶಾಲೆಗೆ ಹಾಜರಾಗಿಲ್ಲ. ಹೀಗಾಗಿ, ಶಾಲೆಯಲ್ಲಿ ವಿದ್ಯಾರ್ಥಿಗಳಿಲ್ಲದೇ ತರಗತಿ ಕೊಠಡಿಗಳು ಬಿಕೋ ಎನ್ನುತ್ತಿದ್ದರೆ, ಮಕ್ಕಳಿಗಾಗಿ ಶಿಕ್ಷಕರು ಕಾದು ಕೂರುವಂತಾಯಿತು.

ಇನ್ನು, ಆಂಗ್ಲೋ ಉರ್ದು ಶಾಲೆಯಲ್ಲೂ ಹಿಜಾಬ್‌ ನಿರ್ಬಂಧದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಇಳಿಮುಖವಾಗಿತ್ತು. ಪ್ರೌಢಶಾಲೆ ಹಾಗೂ ಪದವಿ ಪೂರ್ವ ತರಗತಿಗಳಲ್ಲೂ ಬೆರಳೆಣಿಕೆಯಷ್ಟು ಮಾತ್ರ ವಿದ್ಯಾರ್ಥಿನಿಯರು ಗೈರಾಗಿದ್ದರು ಎಂದು ತಿಳಿದು ಬಂದಿದೆ. ಕಾಲೇಜಿನಿಂದ ವಾಪಸ್‌: ಇಲ್ಲಿನ ಹಳೇ ಕೋರ್ಟ್‌ ಕಟ್ಟಡದಲ್ಲಿರುವ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಹಿಜಾಬ್‌ಗ ಅವಕಾಶ ನೀಡದಿರುವುದನ್ನು ಖಂಡಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಮನೆಗೆ ವಾಪಸ್ಸಾದರು.

ಇದಕ್ಕೂ ಮುನ್ನ ಕಾಲೇಜಿಗೆ ಪ್ರವೇಶಿಸಲು ಅನುಮತಿ ಕೋರಿದರು. ಅದಕ್ಕೆ ನಿರಾಕರಿಸಿದ ಪೊಲೀಸ್‌ ಸಿಬ್ಬಂದಿ, ತರಗತಿ ಕೋಣೆ ವರೆಗೂ ಹಿಜಾಬ್‌ ಧರಿಸಲು ಅವಕಾಶವಿದೆ. ಆದರೆ, ತರಗತಿಯಲ್ಲಿ ಹಿಜಾಬ್‌ಗ ಅವಕಾಶ ನೀಡಲಾಗದು. ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಮನವರಿಕೆ ಮಾಡಿಕೊಡಲು ಯತ್ನಿಸಿದರಾದರೂ ಫಲಿಸಲಿಲ್ಲ.

ತರಗತಿಯಲ್ಲೂ ಹಿಜಾಬ್‌ ಧರಿಸಲು ಅವಕಾಶ ನೀಡುವುದಾದರೆ ಮಾತ್ರ ನಾವು ಕಾಲೇಜಿಗೆ ಬರುತ್ತೇವೆ ಎಂದು ಪಟ್ಟು ಹಿಡಿದ ವಿದ್ಯಾರ್ಥಿನಿಯರು, ಹಿಜಾಬ್‌ ಬೇಡವೆಂದಾದರೆ, ನಮಗೂ ತರಗತಿ ಬೇಡ. ಮುಂದೆ ಪರೀಕ್ಷೆ ಬರೆಯದಿದ್ದರೂ, ಚಿಂತೆ ಇಲ್ಲ. ನಾವು ನಮ್ಮ ಧರ್ಮವನ್ನು ಬಿಡೆವು ಎಂದು ಕಡ್ಡಿ ಮುರಿದಂತೆ ಹೇಳಿ, ಮನೆಯತ್ತ ಹೆಜ್ಜೆ ಹಾಕಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.