ಆಕಾಶದಡಿ ಪಾಠ ಕೇಳುವ ಪ್ರಸಂಗ
Team Udayavani, Jan 1, 2020, 3:06 PM IST
ನರೇಗಲ್ಲ: ಸಚಿವ ಸಿ.ಸಿ. ಪಾಟೀಲ ತವರು ಕ್ಷೇತ್ರದಲ್ಲಿನ ಡ.ಸ. ಹಡಗಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಛಾವಣಿ ಇಲ್ಲದೇ ಸುಡುವ ಬಿಸಿಲು, ಚಳಿ, ಗಾಳಿ ಎನ್ನದೆ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆ
ನಿರ್ಲಕ್ಷವೋ ಅಥವಾ ಜನಪ್ರತಿನಿಧಿಗಳ ನಿಷ್ಕಾಳಜಿಯೋ ತಿಳಿಯದಾಗಿದೆ. ಶಾಲೆಗೆ ನಿತ್ಯ 198ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರುತ್ತಾರೆ. 11 ಕೊಠಡಿಗಳಲ್ಲಿ ಸಮಸ್ಯೆಯಿಂದ 4 ಮತ್ತು 5 ತರಗತಿಯನ್ನು ಕೂಡಿಸಿ ಪಾಠ ಮಾಡುವಸ್ಥಿತಿಯಿದೆ. ಒಟ್ಟು 11 ಕೊಠಡಿಗಳು ಇದ್ದರೂ ವಿದ್ಯಾರ್ಥಿಗಳಿಗೆ ಸಾಲುತ್ತಿಲ್ಲ. ಎರಡು ಕೊಠಡಿಗಳ ಮೇಲ್ಛಾವಣಿ ಕಿತ್ತು ಹೋಗಿರುವುದರಿಂದ ಅನಿವಾರ್ಯವಾಗಿ ಆ ಎರಡು ಕೊಠಡಿಯಲ್ಲಿ ಆಕಾಶ ನೋಡುತ್ತಾ ಪಾಠ ಕೇಳುವ ಪ್ರಸಂಗ ಕಣ್ಣ ಮುಂದೆ ನಿರ್ಮಾಣವಾಗಿದೆ.
ಈ ಶಾಲೆ ಎರಡು ಕೊಠಡಿಗಳ ಮೇಲ್ಛಾವಣಿ ಸಂಪೂರ್ಣ ಶಿಥಿಲಗೊಂಡಿತ್ತು. ಆದ್ದರಿಂದ ಇತ್ತೀಚೆಗೆ ತಾ.ಪಂ ವತಿಯಿಂದ 2 ಲಕ್ಷ ರೂ. ಅನುದಾನದಲ್ಲಿ ಈ ಶಾಲೆಗೆ ಛಾವಣಿ (ತಗಡು) ಜೋಡಣೆ ಮಾಡುವುದಕ್ಕಾಗಿ ಗುತ್ತಿಗೆ ನೀಡಿದ್ದರು. ಆದರೆ, ಗುತ್ತಿಗೆದಾರ ಕಳಪೆ ಗುಣಮಟ್ಟದ ತಗಡು ಜೋಡಣೆ ಮಾಡುವ ಸಂಧರ್ಭದಲ್ಲಿ ಶಾಲೆ ಆಡಳಿತ ಮಂಡಳಿ ವಿರೋಧ ವ್ಯಕ್ತಪಡಿಸಿ ಈ ಕೆಲಸವನ್ನು ಸ್ಥಗಿತಗೊಳಿಸಿದ್ದರು. ಗುತ್ತಿಗೆದಾರನ ಮೇಲೆ ಕ್ರಮ ಕೈಗೊಳ್ಳಬೇಕಿದ್ದ ಶಿಕ್ಷಣ ಇಲಾಖೆ ಕಂಡು ಕಾಣದ್ದಂತೆ ವರ್ತಿಸುತ್ತಿರುವುದು ವಿಪರ್ಯಾಸವಾಗಿದೆ.
ಡ.ಸ. ಹಡಗಲಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ
ಶಾಲೆಯ ಬಗ್ಗೆ ಈಗಾಗಲೇ ಇಲಾಖೆ ಗಮನಕ್ಕೆ ಬಂದಿದೆ. ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಶಾಲೆ ಮೇಲ್ಛಾವಣಿ ಕಾಮಗಾರಿ ಪ್ರಾರಂಭಿಸಲಾಗುವುದು. -ಎನ್. ನಂಜುಡಯ್ಯ, ರೋಣ ಕ್ಷೇತ್ರ ಶಿಕ್ಷಣಾಧಿಕಾರಿ
-ಸಿಕಂದರ ಎಂ. ಆರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
MUST WATCH
ಹೊಸ ಸೇರ್ಪಡೆ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ