ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ತಿಳಿವಳಿಕೆ ಅಗತ್ಯ
Team Udayavani, May 4, 2019, 2:10 PM IST
ಗದಗ: ವಿದ್ಯಾರ್ಥಿಗಳು ತಂತ್ರಜ್ಞಾನದ ತಿಳಿವಳಿಕೆಯೊಂದಿಗೆ ಅದರ ಸದ್ಬಳಕೆಯ ಕಲೆಯನ್ನೂ ಕರಗತ ಮಾಡಿಕೊಳ್ಳಬೇಕು. ವಿದ್ಯಾರ್ಥಿ ಜೀವನದ ಸವಿಯನ್ನು ಅನುಭವಿಸುವುದರ ಜೊತೆಗೆ ಅದನ್ನು ಯಶಸ್ವಿ ಜೀವನಕ್ಕೆ ಮೆಟ್ಟಿಲನ್ನಾಗಿಸಿಕೊಳ್ಳಬೇಕು ಎಂದು ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಟಿಸಿಎಸ್ ಕಂಪನಿಯ ಕರ್ನಾಟಕ ಅಕ್ಯಾಡೆಮಿಕ್ ಮಾಹಿತಿ ಕೇಂದ್ರದ ಮುಖ್ಯಸ್ಥ ಶ್ರೀನಿವಾಸ ರಾಮಾನುಜಂ ಅಭಿಪ್ರಾಯಪಟ್ಟರು.
ಸಮೀಪದ ಹುಲಕೋಟಿ ರೂರಲ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆರ್ಇಸಿ ಉತ್ಸವದ ಎರಡನೇ ದಿನವಾದ ಶುಕ್ರವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಮ್ಮ ಕಾಲೇಜು ದಿನಗಳು, ಉಪನ್ಯಾಸಕರ ಪ್ರೋತ್ಸಾಹವನ್ನು ಮೆಲುಕು ಹಾಕಿದರು.
ಟಿಸಿಎಸ್ ಮಾಹಿತಿ ಕೇಂದ್ರದ ಅಧಿಕಾರಿ ನಾಗಪ್ಪ ಬಿ. ಮಾತನಾಡಿ, ಜೀವನದಲ್ಲಿ ಯಶಸ್ಸು ಕಾಣಲು ಪ್ರತಿಯೊಬ್ಬರೂ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಶ್ರಮ ವಹಿಸಬೇಕು. ಪಠ್ಯದೊಂದಿಗೆ ಪಠ್ಯೇತರವಾಗಿ ಅಧ್ಯಯ, ಹೊಸ ಪ್ರಯೋಗಗಳ ಮೂಲಕ ಜ್ಞಾನ ಹೆಚ್ಚಿಸಿಕೊಳ್ಳಬೇಕು. ಯಾವುದೇ ವಿಚಾರದಲ್ಲಿ ಕೀಳರಿಮೆ ಹೊಂದದೇ, ಛಲ ಮತ್ತು ಆತ್ಮವಿಶ್ವಾಸದಿಂದ ಮುನ್ನುಗ್ಗಬೇಕು ಎಂದು ಸಲಹೆ ನೀಡಿದರು.
ಬೆಂಗಳೂರಿನ ಇಆರ್ಪಿ ಪ್ರೋಡಕ್ಸ್ನ ಮುಖ್ಯ ಸಲಹೆಗಾರ್ತಿ ವನಿತಾ ಸತೀಶ ಮಾತನಾಡಿ, ಇಂಗ್ಲಿಷ್ ಭಾಷೆಗೆ ಜಾಗತಿಕ ಮನ್ನಣೆಯಿದ್ದು, ವಿದ್ಯಾರ್ಥಿಗಳು ಇಂಗ್ಲಿಷ್ ಭಾಷಾ ಸಂಹನ ಕೌಶಲ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕಾಲೇಜಿನ ಪ್ರಾಚಾರ್ಯ ಡಾ| ವಿ.ಎಂ. ಪಾಟೀಲ, ಆರ್ಇಸಿ ಉತ್ಸವದ ಚೇರಮನ್ ಪ್ರೊ| ಸತೀಶ ಜೆ., ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ನಾಗನಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ