ಬಸ್‌ಪಾಸ್‌ಗಾಗಿ ವಿದ್ಯಾರ್ಥಿಗಳ ನೂಕುನುಗ್ಗಲು

ನವೀಕರಣಕ್ಕೆ ಮೂರು ದಿನ ಅವಧಿ ವಿಸ್ತರಿಸಿ ಆದೇಶಿಸಿದ ಸಾರಿಗೆ ಸಂಸ್ಥೆ ; ಟಿಕೆಟ್‌ ಪಡೆದು ಸಂಚರಿಸಬೇಕೆಂಬ ಆತಂಕ

Team Udayavani, Jul 1, 2022, 3:43 PM IST

9

ಗದಗ: ಗ್ರಾಮೀಣ ಪ್ರದೇಶಗಳಿಂದ ನಗರಕ್ಕೆ ಶಾಲಾ-ಕಾಲೇಜುಗಳಿಗೆ ಆಗಮಿಸುವ ವಿದ್ಯಾರ್ಥಿಗಳು ಬಸ್‌ಪಾಸ್‌ ಪಡೆಯಲು ಗುರುವಾರ ಪರದಾಡುವಂತಾಯಿತು. ಕಾಲೇಜು ತರಗತಿಗಳನ್ನು ಬಿಟ್ಟು ಉರಿ ಬಿಸಿಲಿನಲ್ಲಿ ಬಸ್‌ಪಾಸ್‌ ಅವಧಿ ವಿಸ್ತರಿಸಲು ಹೆಣಗಾಡಿದರು.

ಹೌದು… ಬಸ್‌ಪಾಸ್‌ ಅವಧಿ ವಿಸ್ತರಣೆ ಮಾಡಿಕೊಳ್ಳಲು ಜೂ.30 ಕೊನೆಯ ದಿನವಾಗಿದ್ದರಿಂದ ಪದವಿ ಪೂರ್ವ, ಪದವಿ, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್‌ಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಸ್‌ ನಿಲ್ದಾಣಕ್ಕೆ ನುಗ್ಗಿದ್ದರಿಂದ ಕೆಲ ಹೊತ್ತು ನೂಕುನುಗ್ಗಲು ಉಂಟಾಗಿತ್ತು.

ಗದಗ ಹೊಸ ಬಸ್‌ ನಿಲ್ದಾಣ ಹಾಗೂ ಬೆಟಗೇರಿ ಬಸ್‌ ನಿಲ್ದಾಣದಲ್ಲಿ ಜಮಾಯಿಸಿದ್ದ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಸ್‌ಪಾಸ್‌ ನವೀಕರಿಸಲು ಹರಸಾಹಸ ಪಟ್ಟರು. ಗುರುವಾರ ಬಸ್‌ಪಾಸ್‌ ನವೀಕರಣಗೊಳ್ಳದಿದ್ದರೆ ಟಿಕೆಟ್‌ ಪಡೆದು ಸಂಚರಿಸಬೇಕು ಎನ್ನುವ ಆತಂಕದಲ್ಲಿದ್ದ ವಿದ್ಯಾರ್ಥಿಗಳು ಪರಿತಪಿಸಿದರು.

ಬಸ್‌ಪಾಸ್‌ ಅವಧಿ ವಿಸ್ತರಣೆಯ ಕುರಿತು ಶಾಲಾ ಆಡಳಿತ ಮಂಡಳಿ ಹಾಗೂ ಸಾರಿಗೆ ಇಲಾಖೆ ಸರಿಯಾದ ಮಾಹಿತಿ ನೀಡಲಿಲ್ಲ. ಏಕಾಏಕಿ ಜೂ.29ರಂದು ಬಸ್‌ ಪಾಸ್‌ ಅವ ಧಿ ವಿಸ್ತರಿಸಲು ಜೂ.30 ಕೊನೆಯ ದಿನ ಎಂಬ ಮಾಹಿತಿ ದೊರೆತಿದ್ದರಿಂದ ಬಹುತೇಕ ವಿದ್ಯಾರ್ಥಿಗಳು ಗುರುವಾರ ಬಸ್‌ಪಾಸ್‌ ನವೀಕರಣಕ್ಕೆ ಧಾವಿಸಿದರು ಎಂದು ವಿದ್ಯಾರ್ಥಿಗಳು ದೂರಿದರು.

ವಿದ್ಯಾರ್ಥಿಗಳು ಕಳೆದ 2021ರ ಸೆಪ್ಟೆಂಬರ್‌ನಲ್ಲಿ 10 ತಿಂಗಳ ಅವಧಿಗೆ ಬಸ್‌ ಪಾಸ್‌ ಪಡೆದಿದ್ದರು. ಜೂ. 30 ಕೊನೆಯ ದಿನವಾಗಿತ್ತು. ವಿದ್ಯಾರ್ಥಿಗಳು ಬಸ್‌ ಪಾಸ್‌ ಅವಧಿ ವಿಸ್ತರಿಸಿಕೊಳ್ಳಲು ಗುರುವಾರ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸಿದ್ದರಿಂದ ಬಸ್‌ ನಿಲ್ದಾಣದಲ್ಲಿ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಲಾಗಿತ್ತು. ಜೂ. 28ರಂದು 50 ವಿದ್ಯಾರ್ಥಿಗಳು, ಜೂ. 29ರಂದು 200 ವಿದ್ಯಾರ್ಥಿಗಳಿಗೆ ಬಸ್‌ಪಾಸ್‌ ನವೀಕರಿಸಿ ಕೊಡಲಾಗಿತ್ತು ಎಂದು ಬಸ್‌ ನಿಲ್ದಾಣದ ಅಧಿ ಕಾರಿಗಳು ಮಾಹಿತಿ ನೀಡಿದರು.

ಒಮ್ಮೆಲೆ ಧಾವಿಸಿದ್ದರಿಂದ ಗೊಂದಲ ಸೃಷ್ಟಿ

ಜೂ.25ರಂದು ಪದವಿ ಪೂರ್ವ, ಪದವಿ ಕಾಲೇಜು, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 2 ತಿಂಗಳ ಅವಧಿಗೆ ವಿಸ್ತರಿಸಲು ಆದೇಶಿಸಿತ್ತು. ಇಲ್ಲಿಯವರೆಗೆ ಸುಮ್ಮನಿದ್ದ ವಿದ್ಯಾರ್ಥಿಗಳು ಕಡೆಯ ದಿನವಾದ ಗುರುವಾರ ಒಮ್ಮೆಲೆ ಧಾವಿಸಿದ್ದರಿಂದ ಗೊಂದಲ ಸೃಷ್ಟಿಯಾಗಿತ್ತು. ಕೂಡಲೇ ಮೇಲಧಿ ಕಾರಿಗಳಿಗೆ ಮಾಹಿತಿ ನೀಡಿದ ನಂತರ ಬಸ್‌ಪಾಸ್‌ ಪಡೆಯಲು ಮೂರು ದಿನಗಳ ಕಾಲ ವಿಸ್ತರಿಸಲಾಗಿದೆ. ಮೊದಲಿನ ಪಾಸ್‌ನಲ್ಲೇ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಎನ್‌ಡಬ್ಲ್ಯೂ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ಶೀನಯ್ಯ ಉದಯವಾಣಿಗೆ ಮಾಹಿತಿ ನೀಡಿದರು.

ಕಾಲೇಜಿನಲ್ಲಿ ಬಸ್‌ಪಾಸ್‌ ಅವಧಿ ವಿಸ್ತರಣೆ ಬಗ್ಗೆ ಮಾಹಿತಿ ಇರಲಿಲ್ಲ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಬಸ್‌ಪಾಸ್‌ ಅವಧಿ ವಿಸ್ತರಣೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದರು. ಗುರುವಾರ ಬೆಳಿಗ್ಗೆ ದ್ವಿತೀಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳು ಬಸ್‌ಪಾಸ್‌ನ್ನು ಎರಡು ತಿಂಗಳ ಅವಧಿಗೆ ವಿಸ್ತರಿಸಬಹುದೆಂದು ಹೇಳಿದ್ದರಿಂದ ಗೊಂದಲ ಉಂಟಾಯಿತು. – ಮನೋಜ್‌ ಕಮ್ಮಾರ, ಸರ್ಕಾರಿ ಡಿಪ್ಲೊಮಾ

ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜುಲೈ 3ರ ವರೆಗೆ ಹಳೆಯ ಬಸ್‌ಪಾಸ್‌ ತೋರಿಸಿ ಬಸ್‌ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಮುಂದಿನ ಮೂರು ದಿನದೊಳಗಾಗಿ ವಿದ್ಯಾರ್ಥಿಗಳು ಬಸ್‌ಪಾಸ್‌ ನವೀಕರಿಸಿಕೊಳ್ಳಬಹುದಾಗಿದೆ. –ಜಿ. ಶೀನಯ್ಯ, ವಿಭಾಗೀಯ ನಿಯಂತ್ರಣಾಧಿಕಾರಿ, ಎನ್‌ಡಬ್ಲ್ಯೂ ಕೆಎಸ್‌ಆರ್‌ಟಿಸಿ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.