ಚೆನ್ನಾಗಿ ಓದಿ, ಅತ್ಯುತ್ತಮ ನರ್ಸ್‌ಗಳಾಗಿ ಹೊರಹೊಮ್ಮಿ; ಬೊಮ್ಮನಹಳ್ಳಿ

ತರಬೇತಿ ನೀಡಲು ಈಗಾಗಲೇ ಎರಡು ಆಸ್ಪತ್ರೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.

Team Udayavani, Jan 5, 2023, 6:30 PM IST

ಚೆನ್ನಾಗಿ ಓದಿ, ಅತ್ಯುತ್ತಮ ನರ್ಸ್‌ಗಳಾಗಿ ಹೊರಹೊಮ್ಮಿ; ಬೊಮ್ಮನಹಳ್ಳಿ

ಗದಗ: ಶಿಸ್ತು, ಸಮಯ ಪ್ರಜ್ಞೆ, ಪ್ರಾಮಾಣಿಕತೆ ರೂಢಿಸಿಕೊಳ್ಳುವ ಜೊತೆಗೆ ಏಕಾಗ್ರತೆಯಿಂದ ಗುಣಮಟ್ಟದ ಶಿಕ್ಷಣ ಪಡೆದು ಯುವ ವಿದ್ಯಾರ್ಥಿಗಳು ಅತ್ಯುತ್ತಮ ನರ್ಸ್‌ಗಳಾಗಿ ಹೊರಹೊಮ್ಮುವ ಮೂಲಕ ಸಂಸ್ಥೆಗೆ ಹೆಸರು ತರಬೇಕೆಂದು ಜಿಮ್ಸ್‌ ನಿರ್ದೇಶಕ ಡಾ|ಬಸವರಾಜ ಬೊಮ್ಮನಹಳ್ಳಿ ಹೇಳಿದರು.

ನಗರದ ಸಂಭಾಪೂರ ರಸ್ತೆಯಲ್ಲಿರುವ ಸಂಕನೂರ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಬುಧವಾರ ಸಂಕನೂರ ಇನ್‌ ಸ್ಟಿಟ್ಯೂಟ್‌ ಆಫ್‌ ನರ್ಸಿಂಗ್‌ ಸೈನ್ಸಸ್‌ ಕಾಲೇಜನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಜ್ಞ ವೈದ್ಯರೇ ಇಲ್ಲಿ ಶಿಕ್ಷಣದ ಪಾಠ ಬೋಧಿಸುತ್ತಿರುವುದು ಇಲ್ಲಿನ ವಿದ್ಯಾರ್ಥಿಗಳ ಸುದೈವ. ವೃತ್ತಿಪರ ಶಿಕ್ಷಣವಾದ ಬಿಎಸ್‌ಸಿ ನರ್ಸಿಂಗ್‌ ನಾಲ್ಕು ವರ್ಷದ ಶಿಕ್ಷಣವಾಗಿದ್ದು, ಅಂದಿನ ಅಭ್ಯಾಸವನ್ನು ಅಂದೇ ಪೂರ್ಣಗೊಳಿಸಬೇಕು. ವ್ಯಸನಗಳಿಂದ ದೂರವಿದ್ದು, ಆರೋಗ್ಯ ಕಾಯ್ದುಕೊಂಡು ಮಾನವೀಯತೆ, ಸೇವಾ ಮನೋಭಾವನೆಯಿಂದ ಆರೋಗ್ಯ ಸೇವೆ ಮಾಡುವ ಮೂಲಕ ವಿದ್ಯಾರ್ಥಿಗಳು ತಮ್ಮ ಭವಿಷ್ಯ ಉಜ್ವಲ ಗೊಳಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಸಂಕನೂರ ಇನ್‌ಸ್ಟಿಟ್ಯೂಟ್‌ ಆಫ್‌ ನರ್ಸಿಂಗ್‌ ಸೈನ್ಸಸ್‌ ಕಾಲೇಜು ಸಂಸ್ಥಾಪಕ ಅಧ್ಯಕ್ಷ ಹಾಗೂ ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಮಾತನಾಡಿ, ನೈಪುಣ್ಯತೆ, ಕೌಶಲ್ಯಯುಕ್ತ ನಸ್‌ ìಗಳ ಕೊರತೆ ಇದ್ದು, ಯುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ನರ್ಸಿಂಗ್‌ ಶಿಕ್ಷಣ ಹಾಗೂ ತರಬೇತಿ ನೀಡಿ ವೃತ್ತಿಗೆ ಸಜ್ಜುಗೊಳಿಸುವ ಉದ್ದೇಶ ಸಂಸ್ಥೆಯದ್ದಾಗಿದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ನಿತ್ಯ ಅಭ್ಯಾಸ ಮಾಡಿ ಬಿಎಸ್‌ಸಿ ನರ್ಸಿಂಗ್‌ ಪದವಿ ಪೂರ್ಣಗೊಳಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯರಾಗಿ ಮೊದಲ ಬಾರಿಗೆ ಆಯ್ಕೆಯಾದಾಗ ಪದವೀಧರರಿಗೆ ಉದ್ಯೋಗ ಮಾಹಿತಿ ಕೇಂದ್ರ ಆರಂಭಿಸಿ ತಮ್ಮ ಕ್ಷೇತ್ರದ ಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳಗಳನ್ನು ಮಾಡಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲಾಗಿದೆ. ನಸಿಂಗ್‌ ಕಾಲೇಜು ಕಟ್ಟಡ ಹಾಗೂ ಹಾಸ್ಟೆಲ್‌ಗ‌ಳ ನಿರ್ಮಾಣಕ್ಕೆ ಈಗಾಗಲೇ ಜಮೀನು ಖರೀದಿಸಲಾಗಿದೆ. ಅಲ್ಲಿ ನರ್ಸಿಂಗ್‌ ಕಾಲೇಜು ಸ್ಥಾಪಿಸಲಾಗುವುದು. ಪಾಠ ಬೋಧನೆ ಕೊಠಡಿ, ಅತ್ಯುತ್ತಮ ಗ್ರಂಥಾಲಯ, ನುರಿತ ಶಿಕ್ಷಕ ವರ್ಗವಿದ್ದು, ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಈಗಾಗಲೇ ಎರಡು ಆಸ್ಪತ್ರೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಸಮಸ್ಯೆ ಎದುರಾದರೂ ವಿದ್ಯಾರ್ಥಿಗಳು ತಮ್ಮನ್ನು
ಸಂಪರ್ಕಿಸಬೇಕೆಂದು ಹೇಳಿದರು.

ಡಾ| ಸಂಜಯ ಪೀರಾಪೂರ ಮಾತನಾಡಿ, ನರ್ಸಿಂಗ್‌ ಶಿಕ್ಷಣದಲ್ಲಿ ನೈಪುಣ್ಯತೆ ನೀಡಲು ಕಾಲೇಜು ಸಜ್ಜುಗೊಂಡಿದ್ದು, ಇಲ್ಲಿ ನಾಲ್ಕು ವರ್ಷಗಳ ಕಾಲ ತರಬೇತಿ ಹೊಂದುವ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವಿದೆ ಎಂದರು.

ಡಾ|ಶ್ವೇತಾ ಸಂಕನೂರ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಪ್ರಾಮಾಣಿಕತೆ, ದೂರದೃಷ್ಟಿಯ ಮೂಲಕ ನರ್ಸಿಂಗ್‌ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕೆಂದರು. ಪ್ರಾಚಾರ್ಯೆ ಮೀನಾಕ್ಷಿ ದೇವಾಂಗಮಠ ಮಾತನಾಡಿದರು. ಡಾ| ಪ್ರಕಾಶ ಸಂಕನೂರ, ಸುಭಾಸ ಸಂಕನೂರ, ಅಂದಪ್ಪ ಸಂಕನೂರ, ಡಾ| ಗುರುಪ್ರಸಾದ, ಎನ್‌.ವಿ. ಜೋಶಿ, ವಿ.ಎಂ. ಹಿರೇಮಠ ಬಿ.ವೈ. ಸೋಮಣ್ಣವರ, ಬಿ.ಎಲ್‌. ಚೌಹಾಣ್‌, ಜಗದೀಶ ನರಗುಂದ ಪಿ.ಬಿ. ಬಂಡಿ, ಡಾ|ಆದಿತ್ಯ ಗೋಡಕಿಂಡಿ, ಡಾ|ಸಂದೀಪ ಕವಳಿಕಾಯಿ, ಡಾ|ವಿದ್ಯಾ ಚಿಂತಾಮಣಿ, ಡಾ| ಸತ್ತರಖಾನ್‌, ಶಿಕ್ಷಕರ ಸಂಘಟನೆ ಅಧ್ಯಕ್ಷರು, ವಿವಿಧ ಕಾಲೇಜುಗಳ ಪ್ರಾಚಾರ್ಯರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ವಿನ್ಸೆಂಟ್‌ ಪಾಟೀಲ ಸ್ವಾಗತಿಸಿದರು.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.