ಸಂಪೂರ್ಣ ಲಾಕ್‌ಡೌನ್‌ ಜಾರಿಯೇ ಸೂಕ್ತ

­ನಿಯಂತ್ರಣವಾಗದ ಜನ ಸಂಚಾರ-ಸೋಂಕಿನ ಪ್ರಮಾಣ ಹಿನ್ನೆಲೆಯಲ್ಲಿ ಕೇಳಿ ಬಂದ ಕೂಗು

Team Udayavani, May 19, 2021, 3:55 PM IST

cats

ಗದಗ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿನ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ನಗರ ಹಾಗೂ ಹಳ್ಳಿ ಹಳ್ಳಿಗೂ ಸೋಂಕು ಹಬ್ಬಿದ್ದರಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಮತ್ತೂಂದೆಡೆ ಕೊರೊನಾ ಕರ್ಫ್ಯೂ ಜಾರಿಗೊಂಡು 20ಕ್ಕೂ ಹೆಚ್ಚು ದಿನಗಳು ಕಳೆದರೂ, ಜನಸಂಚಾರ ಹಾಗೂ ಸೋಂಕಿನ ಪ್ರಮಾಣವೂ ಇಳಿಕೆಯಾಗುತ್ತಿಲ್ಲ. ಹೀಗಾಗಿ ಸಂಪೂರ್ಣ ಲಾಕ್‌ಡೌನ್‌ ಜಾರಿಗೆ ಸಾರ್ವಜನಿಕರ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಹೌದು. ಜಿಲ್ಲೆಯಲ್ಲಿ ದಿನಕಳೆದಂತೆ ಸೋಂಕಿತರ ಸಂಖ್ಯೆ ಗಗನಮುಖೀಯಾಗಿದೆ. ಕೋವಿಡ್‌ ಸೋಂಕು ತಡೆಗಾಗಿ ಸರಕಾರ ಹಲವು ಉಪಕ್ರಮಗಳನ್ನು ಕೈಗೊಂಡಿದೆ. ಸೋಂಕಿನ ಲಕ್ಷಣವುಳ್ಳವರನ್ನು ಪರೀಕ್ಷೆಗೊಳಪಡಿಸುವುದು, ಚಿಕಿತ್ಸೆ ಹಾಗೂ ಸೋಂಕಿನ ಸರಪಳಿ ತುಂಡರಿಸಲು ಕೊರೊನಾ ಕರ್ಫ್ಯೂ ಮೂಲಕ ಜನ ಸಂಚಾರ ತಡೆಗೆ ಕ್ರಮ ವಹಿಸಿದೆ. ಆದರೂ, ದಿನದಿಂದ ದಿನಕ್ಕೆ ಸೋಂಕಿತರ ಪ್ರಮಾಣ ಏರುಮುಖವಾಗಿರುವುದು ಆತಂಕಕಾರಿ ಬೆಳವಣಿಗೆ.

ಅಗತ್ಯ ವಸ್ತುಗಳ ನೆಪದಲ್ಲಿ ಓಡಾಟ: ಜನರ ನಿತ್ಯ ಜೀವನಕ್ಕೆ ತೊಂದರೆಯಾಗದಂತೆ ಸರಕಾರ ಕರ್ಫ್ಯೂ ಜಾರಿಗೊಳಿಸಿದೆ. ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳು ಹಾಗೂ ಮನೆ ಮುಂದೆಯೇ ಬರುವ ತರಕಾರಿ ಖರೀದಿಸಲು ಅನುವು ಮಾಡಿಕೊಟ್ಟಿದೆ. ಆದರೆ ನಾನಾ ಕಾರಣಗಳಿಂದ ಸಾರ್ವಜನಿಕರಿಂದ ಕಟ್ಟುನಿಟ್ಟಾಗಿ ನಿಯಮ ಪಾಲನೆಯಾಗುತ್ತಿಲ್ಲ. ದಿನಸಿ ಖರೀದಿ ವೇಳೆ ಸಾರ್ವಜನಿಕರು ಸಾಮಾಜಿಕ ಅಂತರ ಪಾಲಿಸದೇ, ಅಂಗಡಿಗಳ ಎದುರು ಗುಂಪು ಗೂಡುವುದು, ಬಡಾವಣೆಗಳಲ್ಲಿ ತರಕಾರಿ ಮಾರಾಟಗಾರರು ಮನೆ ಮನೆಗೆ ತೆರಳದೇ ಆಯಕಟ್ಟಿನ ಸ್ಥಳದಲ್ಲೇ ನಿಲ್ಲುತ್ತಿರುವುದು, ತರಕಾರಿ ಖರೀದಿಗೆ ಮುಗಿ ಬೀಳುವುದೇ ಸಮಸ್ಯೆಗೆ ಕಾರಣ ಎನ್ನಲಾಗಿದೆ.

ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ವಿವಿಧ ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲೂ ದಿನವಿಡೀ ಜನ ಸಂಚಾರ ಮುಂದುವರಿದಿದೆ. ಹಣ್ಣು ಖರೀದಿ, ಆಸ್ಪತ್ರೆ, ಔಷಧ ಖರೀದಿ ಹೆಸರಲ್ಲಿ ದಿನವಿಡೀ ಓಡಾಡುವವರ ಸಂಖ್ಯೆ ಕಡಿಮೆ ಇಲ್ಲ. ಇಂತಹದ್ದೇ ಕಾರಣಗಳಿಂದ ಗದಗ-ಬೆಟಗೇರಿ ಅವಳಿ ನಗರದಲ್ಲಿ ಸೋಂಕು ತೀವ್ರವಾಗಿ ಹರಡುತ್ತಿದೆ ಎಂಬುದು ತಜ್ಞರ ಅಭಿಪ್ರಾಯ.

ವಲಸಿಗರು ತಂದ ಆಪತ್ತು: ಇನ್ನು ಗ್ರಾಮೀಣ ಪ್ರದೇದಲ್ಲೂ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಹಳ್ಳಿಗಳಲ್ಲಿ ದೇವಸ್ಥಾನಗಳ ಕಟ್ಟೆ, ಛಾವಡಿ ಹಾಗೂ ಇನ್ನಿತರೆ ಪ್ರದೇಶಗಳಲ್ಲಿ ಯುವಜನರು ಗುಂಪು ಗೂಡುತ್ತಿದ್ದಾರೆ. ಈಗಾಗಲೇ ಬೆಂಗಳೂರು, ಮಂಗಳೂರು, ಮುಂಬೈ ಸೇರಿದಂತೆ ವಿವಿಧೆಡೆಯಿಂದ ಮರಳಿರುವ ಜನರಿಂದ ಗ್ರಾಮದಲ್ಲಿ ಸೋಂಕು ಹರಡುತ್ತಿದೆ. ಪರ ಊರಿಂದ ಬಂದವರು ಕೆಲ ದಿನಗಳ ಮಟ್ಟಿಗೆ ಮನೆಯಲ್ಲೇ ಉಳಿದುಕೊಳ್ಳಬೇಕೆಂಬ ನಿಯಮ ಪಾಲಿಸುತ್ತಿಲ್ಲ. ಅಂತಹ ವರಿಂದಲೇ ಸೋಂಕು ಹರಡುತ್ತಿದೆ ಎನ್ನಲಾಗಿದೆ.

ಪಾಸಿಟಿವ್‌ ವ್ಯಕ್ತಿಗಿಲ್ಲ ಸೀಲ್‌: ಕಳೆದ ವರ್ಷ ಕೋವಿಡ್‌ ಕ್ವಾರಂಟೈನ್‌ನಲ್ಲಿರುವ, ಸೋಂಕಿತರ ಸಂಪರ್ಕದಲ್ಲಿರುವ ವ್ಯಕ್ತಿಗಳ ಕೈಗೆ ಸೀಲ್‌ ಹಾಕಲಾಗುತ್ತಿತ್ತು. ಆದರೆ ಈ ಬಾರಿ ಅಂತಹ ಕ್ರಮವಿಲ್ಲ. ಹೋಂ ಐಸೋಲೇಷನ್‌ನಲ್ಲಿರುವವರು, ಸೋಂಕಿತರ ಪ್ರಥಮ ಸಂಪರ್ಕದಲ್ಲಿರುವ ಕುಟುಂಬಸ್ಥರು ಕೂಡಾ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಇದರಿಂದ ಒಬ್ಬರಿಂದ ಒಬ್ಬರಿಗೆ ಸೋಂಕು ವ್ಯಾಪಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.