ಸುಕನ್ಯಾ ಸಮೃದ್ಧಿ ಯೋಜನೆ ವರದಾನ
•ಚಿಲಝರಿ ಗ್ರಾಮದಲ್ಲಿ ನೂತನ ಅಂಚೆ ಕಚೇರಿ ಕಟ್ಟಡ ಉದ್ಘಾಟನೆ
Team Udayavani, Jun 3, 2019, 2:33 PM IST
ಗಜೇಂದ್ರಗಡ: ಚಿಲಝರಿ ಗ್ರಾಮದಲ್ಲಿ ನೂತನ ಅಂಚೆ ಕಚೇರಿ ಕಟ್ಟಡವನ್ನು ಶಾಸಕ ಕಳಕಪ್ಪ ಬಂಡಿ ಉದ್ಘಾಟಿಸಿದರು.
ಗಜೇಂದ್ರಗಡ: ಕೇಂದ್ರ ಸರ್ಕಾರ ಬೇಟಿ ಬಜಾವೊ, ಬೇಟಿ ಪಡಾವೋ ರಾಷ್ಟ್ರೀಯ ಯೋಜನೆ ಅಡಿ ಅಂಚೆ ಇಲಾಖೆ ಮೂಲಕ ಸುಕನ್ಯಾ ಸಮೃದ್ಧಿ ಹಣಕಾಸು ಉಳಿತಾಯ ಯೋಜನೆ ಜಾರಿಗೊಳಿಸಿದ್ದು, ಗ್ರಾಮೀಣರು ಹೆಚ್ಚಿನ ಪ್ರಮಾಣದಲ್ಲಿ ಇದರ ಸದುಪಯೋಗ ಪಡೆದುಕೊಳ್ಳಲು ಮುಂದಾಗಬೇಕು ಎಂದು ಶಾಸಕ ಕಳಕಪ್ಪ ಬಂಡಿ ಹೇಳಿದರು.
ಚಿಲಝರಿ ಗ್ರಾಮದಲ್ಲಿ ಗ್ರಾಪಂನ 14ನೇ ಹಣಕಾಸು ಯೋಜನೆ ಅಡಿ 1.49 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ನೂತನ ಅಂಚೆ ಕಚೇರಿ ಕಟ್ಟಡ ರವಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ನವಜಾತ ಶಿಶುವಿನಿಂದ ಹಿಡಿದು ಹತ್ತು ವರ್ಷದವರೆಗಿನ ಹೆಣ್ಣು ಮಕ್ಕಳಿಗಾಗಿಯೇ ರೂಪಿಸಲಾದ ವಿಶೇಷ ಯೋಜನೆ ಇದಾಗಿದೆ. ಹೀಗಾಗಿ ಸುಕನ್ಯಾ ಸಮೃದ್ಧಿ ಉಳಿತಾಯ ಯೋಜನೆಯನ್ನು ಎಲ್ಲರಿಗೂ ಮನವರಿಕೆ ಮಾಡಿ ಯೋಜನೆ ಫಲ ದೊರೆಯುವಂತೆ ಮಾಡಬೇಕಿದೆ ಎಂದು ಹೇಳಿದರು.
ಸ್ಪರ್ಧಾತ್ಮಕ ಮತ್ತು ತಾಂತ್ರಿಕ ಯುಗದಲ್ಲಿ ಬದಲಾಗುತ್ತಿರುವ ಜನರ ಬೇಡಿಕೆಗಳಿಗೆ ತಕ್ಕಂತೆ ಭಾರತೀಯ ಅಂಜೆ ಇಲಾಖೆ ನವೀನ ರೀತಿಯಲ್ಲಿ ವಿವಿಧ ಸೇವೆ ಹೊರ ತಂದಿದೆ. ಸಾರ್ವಜನಿಕರು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು. ಜತೆಗೆ ಗ್ರಾಮೀಣ ಜನರ ಸುರಕ್ಷತೆ ಗಮನದಲ್ಲಿಟ್ಟುಕೊಂಡು ಅಂಚೆ ಇಲಾಖೆ ಜಾರಿಗೊಳಿಸಿರುವ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕಿದೆ ಎಂದು ಹೇಳಿದರು.
ಬಿಜೆಪಿ ಮುಖಂಡ ಭಾಸ್ಕರ ರಾಯಬಾಗಿ, ಅಂಚೆ ಅಧಿಕಾರಿ ರಂಗಪ್ಪ ಚಲವಾದಿ, ಶರಣಪ್ಪ ಕಂಬಳಿ, ದತ್ತುಸಾ ಬಾಕಳೆ, ಮುತ್ತಣ್ಣ ಲಿಂಗನಗೌಡರ, ಮುತ್ತು ಕಡಗದ, ಕನಕಪ್ಪ ಮಾದರ, ಶರಣಪ್ಪ ಕಡಬಲಕಟ್ಟಿ, ಲಕ್ಷ್ಮಣ ನಾಯ್ಕರ, ಶೇಖರಪ್ಪ ಕಡಬಲಕಟ್ಟಿ, ಸುನೀಲ ಚವ್ಹಾಣ, ಅಂದಪ್ಪ ಕಡಬಲಕಟ್ಟಿ, ಶಾಂತವೀರಪ್ಪ ಕೆಲೂರ, ಮಹಾದೇವಪ್ಪ ಮಂಡಾಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
Rural Life: ಗ್ರಾಮೀಣ ಬದುಕಿನ ಮೆಲುಕು