ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಬೆಂಬಲ


Team Udayavani, May 13, 2019, 2:53 PM IST

gad-1

ರೋಣ: ಗ್ರಾಮೀಣ ಪ್ರದೇಶದ ಬಹು ಗ್ರಾಮ ಕುಡಿವ ನೀರಿನ ಯೋಜನೆ ರೋಣ ಪಟ್ಟಣಕ್ಕೂ ವಿಸ್ತರಿಸಬೇಕೆಂದು ಪುರಸಭೆ ಸದಸ್ಯರು ಮೇ 14ರಿಂದ ಪಟ್ಟಣದಲ್ಲಿ ಹಮ್ಮಿಕೊಳ್ಳಲಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದೆ.

ಪಟ್ಟಣದ ವಿವಿಧ ಬಡಾವಣೆ ರೈತರು, ಹಾಲು ಉತ್ಪಾದಕರ ಸಂಘ, ಶಿರಡಿ ಸಾಯಿಬಾಬಾ ಚಾಲಕರ ಮತ್ತು ಮಾಲಕ ಸಂಘ, ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಹೋರಾಟಕ್ಕೆ ಬೆಂಬಲ ಸೂಚಿಸಿವೆ. ಅದರಂತೆಯೇ ಪಟ್ಟಣದ ಹೊನ್ನೆತ್ತವ್ವ ದೇಗುಲದ ಆವರಣದಲ್ಲಿ ರೈತ ಸಮೂಹ ಸಭೆ ನಡೆಸಿ ಬೆಂಬಲ ಸೂಚಿಸಿದೆ.

ಹೋರಾಟಕ್ಕೆ ಪಕ್ಷಾತೀತ ಬೆಂಬಲ: ಈ ವೇಳೆ ರೈತ ಮುಖಂಡ ಬಸನಗೌಡ ಪಾಟೀಲ ಮಾತನಾಡಿ, ಪಟ್ಟಣದ ನೀರಿನ ಸಮಸ್ಯೆ ನಿವಾರಣೆಗೆ ಪುರಸಭೆ ಸರ್ವ ಸದಸ್ಯರು ಪಕ್ಷಾತೀತವಾಗಿ ತೆಗೆದುಕೊಂಡ ಹೋರಾಟದ ನಿರ್ಧಾರಕ್ಕೆ ರೋಣ ಪಟ್ಟಣದ ರೈತ ಸಮೂಹ ಒಗ್ಗಟ್ಟಾಗಿ ಅಭೂತಪೂರ್ವ ಬೆಂಬಲ ನೀಡಲಿದೆ. ಈ ಹೋರಾಟ ಯಾವುದೇ ಒಂದು ವ್ಯಕ್ತಿ, ಕುಟುಂಬ, ಪಕ್ಷಕ್ಕೆ ಸಿಮೀತವಾಗಿಲ್ಲ. ಪ್ರತಿಯೊಬ್ಬರೂ ಅವಶ್ಯವಿರುವ ನೀರಿಗಾಗಿ ಮಾಡುವ ಹೋರಾಟ ಇದಾಗಿದೆ ಎಂದು ತಿಳಿಸಿದರು.

ಪುರಸಭೆ ನಿರ್ಣಯಕ್ಕೆ ಬದ್ಧ: ಈ ನಿಟ್ಟಿನಲ್ಲಿ ಈಗಾಗಲೇ ಗ್ರಾಮೀಣ ಭಾಗದಲ್ಲಿನ ಬಹು ಗ್ರಾಮ ನೀರಿನ ಯೋಜನೆ ರೋಣ ಪಟ್ಟಣಕ್ಕೂ ವಿಸ್ತರಿಸಬೇಕು. ಈ ದಿಶೆಯಲ್ಲಿ ಪುರಸಭೆ ಸದಸ್ಯರು ತೆಗೆದುಕೊಂಡ ನಿರ್ಧಾರಕ್ಕೆ ರೋಣ ಸಮಸ್ತ ರೈತ ಸಮೂಹದ ಬೆಂಬಲವಿದ್ದು, ಅಂದು ನಡೆಯುವ ಧರಣಿಯಲ್ಲಿ ಭಾಗವಹಿಸುತ್ತೇವೆ ಎಂದರು.

ಸಿದ್ದಣ್ಣ ನವಲಗುಂದ, ಬಸಪ್ಪ ಕರಿಲಿಂಗಣ್ಣವರ, ಈರಪ್ಪ ಕೋಳಿವಾಡ, ಬಸನಗೌಡ ಮಂಗಳೂರ, ಮೈಲಾರಪ್ಪ ಕಿರೇಸೂರ, ರಾಮಣ್ಣ ದೇಶಣ್ಣವರ, ಚಂದ್ರಪ್ಪ ಆದಿ, ಮಹ್ಮದ್‌ ಮುರಿಗಿಕಟ್ಟಿ, ಶರಣಪ್ಪ ಪಲ್ಲೇದ, ಮಲ್ಲಪ್ಪ ಹವಳಪ್ಪನವರ, ಶಾಂತಪ್ಪ ಶೆಟ್ಟರ ಇತರರಿದ್ದರು.

ರೋಣ ಪಟ್ಟಣ ಅನೇಕ ವರ್ಷಗಳಿಂದ ನಿರಂತರ ನೀರಿನ ಸಮಸ್ಯೆ ಎದುರಿಸುತ್ತ ಬಂದಿದೆ. ನೀರಿನ ಸಮಸ್ಯೆಯಿಂದ ಯಾವಾಗ ಮುಕ್ತಿ ಸಿಕ್ಕಿತು ಎಂಬ ಚಿಂತೆ ರೈತ ಸಮೂಹವನ್ನು ಕಾಡುತ್ತಿತ್ತು. ಸದ್ಯ ದಿನೇ ದಿನೇ ನೀರಿನ ಸಮಸ್ಯೆ ಉಲ್ಬಣವಾಗುತ್ತಿದ್ದು, ವಾರಕ್ಕೊಮ್ಮೆ, ಹದಿನೈದು ದಿನಕ್ಕೊಮ್ಮೆ ನೀರು ಪೂರೈಕೆಯಾಗುತ್ತಿದೆ. ಆದ್ದರಿಂದ ನಿತ್ಯ ನೀರು ಪೂರೈಸುವಲ್ಲಿ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಬೇಕು. •ಬಸನಗೌಡ ಪಾಟೀಲ, ರೈತ ಮುಖಂಡ

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಕಾರ್ಗಿಲ್ ವಿಜಯೋತ್ಸವವನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಬೇಕು: ಬಸಲಿಂಗಪ್ಪ ಮುಂಡರಗಿ

Gadag; ಕಾರ್ಗಿಲ್ ವಿಜಯೋತ್ಸವವನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಬೇಕು: ಬಸಲಿಂಗಪ್ಪ ಮುಂಡರಗಿ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಗದಗ: ಏಕೀಕರಣ ಚಳವಳಿಗೆ ಹೊಸ ರೂಪ ನೀಡಿದ ವೆಂಕಟರಾಯರು-ಬಿ.ಎಲ್‌. ಪತ್ತಾರ

ಗದಗ: ಏಕೀಕರಣ ಚಳವಳಿಗೆ ಹೊಸ ರೂಪ ನೀಡಿದ ವೆಂಕಟರಾಯರು-ಬಿ.ಎಲ್‌. ಪತ್ತಾರ

ಗದಗ: ಬಿಪಿಸಿಎಲ್‌ ಕಾಮಗಾರಿ ಬಗ್ಗೆ ಹಲವು ದೂರು

ಗದಗ: ಬಿಪಿಸಿಎಲ್‌ ಕಾಮಗಾರಿ ಬಗ್ಗೆ ಹಲವು ದೂರು

ಲಕ್ಷ್ಮೇಶ್ವರ: ಹೆಸರಿಗೆ ಕೊಂಬಿನ ಹುಳು ಕೀಟಬಾಧೆ

ಲಕ್ಷ್ಮೇಶ್ವರ: ಹೆಸರಿಗೆ ಕೊಂಬಿನ ಹುಳು ಕೀಟಬಾಧೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.