‘ರನ್‌ ಫಾರ್‌ ವಿನ್‌’ ಮ್ಯಾರಥಾನ್‌ಗೆ ಬೆಂಬಲ

ಗದಗ ಹಬ್ಬದ ಚಟುವಟಿಕೆ ಜನ ಜಾಗೃತಿ ; ಗದಗ-ಬೆಟಗೇರಿಯಲ್ಲಿ 27 ಕಿ.ಮೀ ಉದ್ದದ ಗೆಲುವಿನ ಓಟ

Team Udayavani, Nov 28, 2022, 3:00 PM IST

13

ಗದಗ: ʼಗದಗ ಹಬ್ಬ’ ಚಟುವಟಿಕೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಸ್ಥಳೀಯ ಗದಗ ಸ್ಪೋರ್ಟ್ಸ್‌  ಆ್ಯಂಡ್‌ ಕಲ್ಚರಲ್‌ ಅಕಾಡೆಮಿಯಿಂದ ಬಿಜೆಪಿ ಯುವ ಮುಖಂಡ ಅನಿಲ ಮೆಣಸಿನಕಾಯಿ ನೇತೃತ್ವದಲ್ಲಿ ರವಿವಾರ ಅವಳಿ ನಗರ ಗದಗ-ಬೆಟಗೇರಿಯಲ್ಲಿ ನಡೆದ 27 ಕಿ.ಮೀ ಉದ್ದದ “ರನ್‌ ಫಾರ್‌ ವಿನ್‌’ (ಗೆಲುವಿನ ಓಟ) ಮ್ಯಾರಥಾನ್‌ಗೆ ಸಾರ್ವಜನಿಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಯಿತು.

ನಗರದ ಕಳಸಾಪುರ ರಸ್ತೆಯ ರಾಮನಗರದ ಪಾಂಡುರಂಗ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಐಪಿಎಲ್‌ ನ ಡೆಲ್ಲಿ ಡೇರ್‌ ಡೆವಿಲ್‌ ತಂಡದ ಕ್ರಿಕೆಟ್‌ ಆಟಗಾರ ಎಚ್‌.ಎಸ್‌. ಶರತ್‌ ಹಾಗೂ ಕಿರುತೆರೆ ನಟ ದೀಪಕಗೌಡ ಅವರು ಚಾಲನೆ ನೀಡಿದ ಮ್ಯಾರಥಾನ್‌ ಅವಳಿ ನಗರದ ಪ್ರತಿ ವಾರ್ಡ್‌ಗೆ ಸಂಚರಿಸಿತು.

ಅವಳಿ ನಗರದ ಪ್ರಮುಖ ರಸ್ತೆ ಸೇರಿ ವಾರ್ಡ್‌ಗಳ ಪ್ರತಿ ಗಲ್ಲಿಯಲ್ಲಿಯೂ ಮ್ಯಾರಥಾನ್‌ ಬಾವುಟಗಳು ರಾರಾಜಿಸುತ್ತಿದ್ದವು. ಕೆಲವು ವಾರ್ಡ್‌ಗಳ ಮ್ಯಾರಥಾನ್‌ ಮಾರ್ಗದಲ್ಲಿ ಮಹಿಳೆಯರು ರಂಗೋಲಿ ಹಾಕಿ ಸಿಂಗರಿಸಿ ಸ್ವಾಗತಿಸಿದರೆ, ಮತ್ತೆ ಕೆಲವೆಡೆ ಹೂವಿನ ಮಳೆಗರೆದು ತಮ್ಮ ಅಭಿಮಾನ ಹಾಗೂ ಬೆಂಬಲ ವ್ಯಕ್ತಪಡಿಸಿದ್ದು ವಿಶೇಷತೆ ಎನಿಸಿತು.

ಗದಗ ಹಬ್ಬ ಹಾಗೂ ಅನಿಲ ಮೆಣಸಿನಕಾಯಿ ಪರ ಘೋಷಣೆಗಳು ಮೊಳಗಿದವು. ಕಾರ್ಯಕರ್ತರು, ಅಭಿಮಾನಿಗಳ ಬೈಕ್‌ ಹ್ಯಾಂಡಲ್‌ಗೆ ಹಾಗೂ ಕಾರುಗಳ ಮುಂಭಾಗದಲ್ಲಿ ಮ್ಯಾರಥಾನ್‌ ಹಾಗೂ ಜಿಸಿಎಲ್‌ ಗದಗ ಹಬ್ಬದ ಬ್ಯಾನರ್‌ ರಾರಾಜಿಸಿದವು. ಗದಗ-ಬೆಟಗೇರಿಯಲ್ಲಿ ರವಿವಾರ ಇಡೀ ದಿನ ಮ್ಯಾರಥಾನ್‌ ಓಟ ಜೋರಾಗಿತ್ತು.

ಕಾರ್ಯಕರ್ತರು, ಅಭಿಮಾನಿಗಳ ನೃತ್ಯ, ಬಂಜಾರ ಸಮುದಾಯದ ಮಹಿಳೆಯರ ನೃತ್ಯ ಆಕರ್ಷಣೀಯವಾಗಿತ್ತು. ಸ್ವತಃ ಮ್ಯಾರಥಾನ್‌ ರೂವಾರಿ ಅನಿಲ ಮೆಣಸಿನಕಾಯಿ ಅವರು ಮುಳಗುಂದ ನಾಕಾದಲ್ಲಿ ಬಂಜಾರ ನೃತ್ಯಕ್ಕೆ ಹೆಜ್ಜೆಹಾಕಿ ಪ್ರೋತ್ಸಾಹಿಸಿದರು. ಕ್ರೀಡಾಜ್ಯೋತಿಯನ್ನು ಆಯಾ ವಾರ್ಡ್‌ಗಳ ಬಿಜೆಪಿ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಅದ್ಧೂರಿಯಾಗಿ ಸ್ವಾಗತಿಸಿ ಶುಭ ಹಾರೈಸಿ ಬೀಳ್ಕೊಡುತ್ತಿರುವುದು ಸಾಮಾನ್ಯವಾಗಿತ್ತು.

ಮ್ಯಾರಥಾನ್‌ ಆರಂಭಕ್ಕೂ ಮುನ್ನ 35ನೇ ವಾರ್ಡ್‌ ಪ್ರತಿನಿಧಿಸುವ ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ ಅವರು ಅನಿಲ ಮೆಣಸಿನಕಾಯಿ ಅವರಿಗೆ ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ ಭಾವಚಿತ್ರ ನೀಡಿ ಶುಭಕೋರಿದರು. ಮ್ಯಾರಥಾನ್‌ದುದ್ದಕ್ಕೂ ಗೆಲುವಿನ ಓಟ ಕೈಗೊಂಡು ಗಮನ ಸೆಳೆದರು. ಕಳಸಾಪುರ ರಿಂಗ್‌ ರಸ್ತೆ ವೃತ್ತದಿಂದ ಆರಂಭವಾದ ಮ್ಯಾರಥಾನ್‌ ಬಸವೇಶ್ವರ ಶಾಲೆ ಹಿಂಭಾಗದ ರಸ್ತೆ, ಶ್ರೀ ಅಂಬಾಭವಾನಿ ದೇವಸ್ಥಾನ, ವೀರೇಶ್ವರ ನಗರ, ಮುಳಗುಂದ ನಾಕಾ, ನರಸಾಪುರ ಮೂಲಕ ರಂಗಪ್ಪಜ್ಜನ ಮಠಕ್ಕೆ ತಲುಪಿ ಮ್ಯಾರಥಾನ್‌ ಸಮಾಪ್ತಿಗೊಂಡಿತು.

ಗದಗ ಸ್ಫೋರ್ಟ್ಸ್ ಆ್ಯಂಡ್‌ ಕಲ್ಚರಲ್‌ ಅಕಾಡೆಮಿ ಅಧ್ಯಕ್ಷ ಸಿದ್ಧಲಿಂಗೇಶ ಮೆಣಸಿನಕಾಯಿ, ನಗರಸಭೆ ಅಧ್ಯಕ್ಷೆ ಉಷಾ ದಾಸರ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸಿದ್ದಣ್ಣ ಪಲ್ಲೇದ, ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ, ಮುಖಂಡರಾದ ಎಂ.ಎಂ. ಹಿರೇಮಠ, ಜಗನ್ನಾಥಸಾ ಭಾಂಡಗೆ, ಮಹೇಶ ದಾಸರ, ವಿಜಯಲಕ್ಷ್ಮೀ ಮಾನ್ವಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಾಘವೇಂದ್ರ ಯಳವತ್ತಿ, ನಗರಸಭೆ ಸದಸ್ಯರಾದ ಅನಿಲ ಅಬ್ಬಿಗೇರಿ, ವಿನಾಯಕ ಮಾನ್ವಿ, ನಾಗರಾಜ ತಳವಾರ, ಮುತ್ತು ಮುಶಿಗೇರಿ, ಮಾಧೂಸಾ ಮೇರವಾಡೆ ಸೇರಿ ಸಾವಿರಾರು ಯುವಕರು, ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

ಹಣ್ಣು-ಎಳನೀರಿನಿಂದ ತುಲಾಭಾರ: ಮ್ಯಾರಥಾನ್‌ ಹುಯಿಲಗೋಳ ನಾರಾಯಣರಾಯರ ವೃತ್ತ (ಟಾಂಗಾಕೂಟ) ತಲುಪಿದಾಗ ಅನಿಲ ಮೆಣಸಿನಕಾಯಿ ಅವರಿಗೆ ಸೋಮೇಶ ಹಿರೇಮಠ ಸೇವಾ ಪ್ರತಿಷ್ಠಾನ ಹಾಗೂ ಅನಿಲ ಮೆಣಸಿನಕಾಯಿ ಅಭಿಮಾನಿ ಬಳಗದವರು ಹಣ್ಣು ಹಂಪಲು ಹಾಗೂ ಎಳನೀರಿನಿಂದ ವಿಶೇಷ ತುಲಾಭಾರದ ಗೌರವ ಸಲ್ಲಿಸಿದರು. ಬಳಿಕ ಇದೇ ಹಣ್ಣುಗಳನ್ನು ಮ್ಯಾರಥಾನ್‌ ಓಟದಲ್ಲಿ ಪಾಲ್ಗೊಂಡವರಿಗೆ ಹಂಚಲಾಯಿತು.

ಗದಗ ಸ್ಫೋರ್ಟ್ಸ್ ಆ್ಯಂಡ್‌ ಕಲ್ಚರಲ್‌ ಆಕಾಡೆಮಿಯಿಂದ ಈಗಾಗಲೇ ಜಿಸಿಎಲ್‌, ಗದಗ ಹಬ್ಬ ಆಯೋಜಿಸಲಾಗುತ್ತಿದೆ. ಅದರ ಭಾಗವಾಗಿ ಅವಳಿ ನಗರ ಗದಗ-ಬೆಟಗೇರಿಯಲ್ಲಿ ಕ್ರೀಡಾಪಟುಗಳಿಗೆ ಅದರಲ್ಲೂ ಮ್ಯಾರಥಾನ್‌ ಸ್ಪರ್ಧಿಗಳಿಗೆ ಒಂದು ಹೊಸ ಚೈತನ್ಯ ಮೂಡಿಸುವ ಉದ್ದೇಶದಿಂದ “ರನ್‌ ಫಾರ್‌ ವಿನ್‌’ ಆಯೋಜಿಸಲಾಗಿತ್ತು. ನಗರದ ಜನತೆ ಹಬ್ಬದ ರೀತಿ ಸಿದ್ಧತೆ ಮಾಡಿಕೊಂಡು, ಸ್ವಾಗತಿಸಿದ್ದು ಮತ್ತು ಎಲ್ಲೆಡೆ ಜನರು, ಯುವಕರಿಂದ ಸಿಕ್ಕ ಬೆಂಬಲ ನಮ್ಮ ಚಟುವಟಿಕೆ ಮತ್ತಷ್ಟು ಹೆಚ್ಚಿಸುವಂತೆ ಪ್ರೇರೇಪಿಸಿದೆ. ಅನಿಲ ಮೆಣಸಿನಕಾಯಿ, ಸಂಸ್ಥಾಪಕ ಅಧ್ಯಕ್ಷ, ಗದಗ ನ್ಪೋರ್ಟ್ಸ್ ಆ್ಯಂಡ್‌ ಕಲ್ಚರಲ್‌ ಅಕಾಡೆಮಿ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.