ಕಲ್ಲು ಹೃದಯ ಕರಗಿಸುತ್ತೆ ಸಂಗೀತ: ಸ್ವಾಮೀಜಿ

ಮುಕ್ತಿಮಂದಿರ ಧರ್ಮಕ್ಷೆ ಕ್ಷೇತ್ರದ ಪಟ್ಟಾಧ್ಯಕ್ಷರಾದ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯರ ಅಭಿಮತ

Team Udayavani, Jun 24, 2022, 12:49 PM IST

12

ಲಕ್ಷ್ಮೇಶ್ವರ: ಸಂಗೀತ ಎಲ್ಲ ಮನೋರೋಗಗಳನ್ನು ಗುಣಪಡಿಸುವ ದಿವ್ಯ ಔಷಧಿಯಾಗಿದೆ. ಕಲ್ಲು ಹೃದಯ ಕರಗಿಸುವ ಶಕ್ತಿಯುಳ್ಳ ಶುದ್ಧ ಸಂಗೀತ ಕೇಳುವುದರಿಂದ ದೇಹ ಮತ್ತು ಮನಸ್ಸು ಎರಡೂ ಉಲ್ಲಸಿತಗೊಳ್ಳುತ್ತವೆ. ಇಂದಿನ ತಾಂತ್ರಿಕ ಯುಗದ ಒತ್ತಡದ ಬದುಕಿಗೆ ಸಂಗೀತ ಅತ್ಯವಶ್ಯಕ ಎಂದು ಮುಕ್ತಿಮಂದಿರ ಧರ್ಮಕ್ಷೇತ್ರದ ಪಟ್ಟಾಧ್ಯಕ್ಷರಾದ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯರು ಹೇಳಿದರು.

ಪಂಡಿತ್‌ ಪುಟ್ಟರಾಜ ಕವಿ ಗವಾಯಿಗಳವರ ಶಿಷ್ಯ ಅಂಧ ಸಂಗೀತ ಗಾಯಕ ಮೆಹಬೂಬಸಾಬ ಹರ್ಲಾ ಪೂರ ಅವರ ನೇತೃತ್ವದಲ್ಲಿ ಪಟ್ಟಣದ ಪುರಾಣಿಕಮಠ ಲೇಔಟ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಡಾ|ಪಂ| ಪುಟ್ಟರಾಜ ಗವಾಯಿಗಳ ಕೃಪಾ ಸಂಗೀತಾಲಯ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಶುಭಾಶೀರ್ವಚನ ನೀಡಿದರು.

ಸಂಗೀತ ಮಕ್ಕಳಿಗೆ ಸಂಸ್ಕಾರ ಕಲಿಸುವ ಸಾಧನವಾಗಿದೆ. ತೀವ್ರಗತಿಯಲ್ಲಿ ಬೆಳೆಯುತ್ತಿರುವ ಪಟ್ಟಣದಲ್ಲಿ ಸಂಗೀತ ಶಾಲೆಯ ಅವಶ್ಯಕತೆಯಿತ್ತು. ಇದೀಗ ಗಾನ ಗಂಧರ್ವ ಪಂಡಿತ್‌ ಪುಟ್ಟರಾಜ ಗವಾಯಿಗಳವರ ಹೆಸರಲ್ಲಿ ಅಂಧ ಕಲಾವಿದ ಹರ್ಲಾಪೂರದ ಮೆಹಬೂಬಸಾಬ್‌ ಅವರಿಂದ ಸಂಗೀತ ಶಾಲೆ ಪ್ರಾರಂಭಗೊಳ್ಳುತ್ತಿರುವುದು ಸಂತಸದ ಸಂಗತಿ ಎಂದರು.

ಪಟ್ಟಣ ಸೇರಿ ತಾಲೂಕಿನ ಸಂಗೀತಾಸಕ್ತರು ಈ ಸಂಗೀತ ಶಾಲೆಯ ಶ್ರೇಯೋಭಿವೃದ್ಧಿಗೆ ಕೈ ಜೋಡಿಸ ಬೇಕು ಮತ್ತು ಮಕ್ಕಳಿಗೆ ಸಂಗೀತದ ಶಿಕ್ಷಣ ಕಲ್ಪಿಸಬೇಕೆಂದರು.

ಸಾನ್ನಿಧ್ಯ ವಹಿಸಿದ್ದ ವೀರೇಶ್ವರ ಪುಣ್ಯಾಶ್ರಮದ ಡಾ|ಪಂ| ಶ್ರೀ ಕಲ್ಲಯ್ಯಜ್ಜನವರು ಶುಭ ಹಾರೈಸಿ ಮಾತನಾಡಿ, ಹುಟ್ಟು ಕುರುಡರಾದ ಮೆಹಬೂಬ ಸಾಬ್‌ ಅವರು ಮುಸ್ಲಿಮರಾಗಿದ್ದರೂ ವಿಭೂತಿ, ರುದ್ರಾಕ್ಷಿ ಧಾರಣೆಯಿಂದ ಪುಟ್ಟರಾಜ ಋಷಿಗಳ ಕೃಪಾಶೀರ್ವಾದಿಂದ ಸಂಗೀತ ಸರಸ್ವತಿಯನ್ನು ಒಲಿಸಿಕೊಂಡಿದ್ದಾರೆ. ತಾವು ಕಲಿತ ವಿದ್ಯೆಯನ್ನು ಇತರರಿಗೆ ಕಲಿಸುವ ಮತ್ತು ಆ ಮೂಲಕ ಪುಟ್ಟರಾಜ ಗವಾಯಿಗಳ ಹೆಸರುಳಿಸುವ ಕಾರ್ಯಕ್ಕೆ ಮುಂದಾಗಿರುವುದು ಹಮ್ಮೆಯ ಸಂಗತಿ ಎಂದರು.

ಸಂಗೀತ ಕ್ಷೇತ್ರವನ್ನು ಪ್ರೀತಿಸುವ, ಪ್ರೋತ್ಸಾಹಿಸಿ ಪೋಷಿಸುವ ಮನಸ್ಸು ನಮ್ಮೆಲ್ಲರದ್ದಾಗಬೇಕು. ಜೊತೆಗೆ ಸರಕಾರದ ಪ್ರೋತ್ಸಾಹ ಇಂತಹ ಕಲಾವಿದರಿಗೆ ಇನ್ನಷ್ಟು ಅವಶ್ಯಕವಾಗಿದೆ. ಸಂಗೀತ ಸೇವೆಗಾಗಿಯೇ ಜೀವನ ಮುಡಿಪಾಗಿಟ್ಟ ಕಲಾವಿದರು ಮತ್ತು ಪೋಷಕರನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ ಎಂದರು.

ಗಂಜಿಗಟ್ಟಿ ಶಿವಲಿಂಗೇಶ್ವರ ಶಿವಾಚಾರ್ಯ ಮಹಾ ಸ್ವಾಮಿಗಳು, ಹೂವಿನ ಶಿಗ್ಲಿಯ ಚನ್ನವೀರ ಮಹಾ ಸ್ವಾಮಿಗಳು ಮಾತನಾಡಿ, ಸಂಗೀತ ಮತ್ತು ನಾಟಕ ಕ್ಷೇತ್ರಕ್ಕೆ ಲಕ್ಷ್ಮೇಶ್ವರದ ಕೊಡುಗೆ ಅಪಾರವಾಗಿದೆ. ಈ ನಿಟ್ಟಿನಲ್ಲಿ ಅಂಧ ಸಂಗೀತ ಕಲಾವಿದರಿಂದ ಸಂಗೀತ ಸೇವೆ ನಡೆಯುತ್ತಿರುವುದು ಸಂತಸ ತಂದಿದೆ. ಎಲ್ಲ ಧರ್ಮ, ಜಾತಿ ಮೀರಿದ ಸಂಗೀತ ದೇವರನ್ನು ಕಾಣಲು ಇರುವ ಏಕೈಕ ಸುಲಭ ಮಾರ್ಗ ಎಂದರೆ ತಪ್ಪಾಗದು. ಸಂಗೀತ ಮನಸ್ಸಿನ ಆನಂದವನ್ನು ಇಮ್ಮಡಿಗೊಳಸುತ್ತದೆ. ಸಂಗೀತಕ್ಕೆ ಒಲಿಯದ ಮನವಿಲ್ಲ. ಪಶುಪಕ್ಷಿಗಳು, ಗಿಡ ಮರಗಳು ಕೂಡಾ ಸಂಗೀತವನ್ನು ಸವಿಯಬಲ್ಲವು. ಸಂಗೀತಕ್ಕೆ ಎಲ್ಲವನ್ನೂ ಗೆಲ್ಲಬಲ್ಲ ಶಕ್ತಿಯಿದೆ. ಅಂತಹ ವಾತಾವರಣ ಸೃಷ್ಟಿಸುವ ಸಂಗೀತ ಕಲಾವಿದರು ಮತ್ತು ಶಾಲೆಗಳನ್ನು ಪ್ರೋತ್ಸಾಹಿಸಬೇಕೆಂದರು.

ಹಿರಿಯ ಗಾಯಕ ಉಸ್ತಾದ ಹುಮಾಯೂನ್‌ ಹರ್ಲಾಪೂರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ಗಳಾಗಿ ಶಾಸಕರಾದ ರಾಮಣ್ಣ ಲಮಾಣಿ, ಮಾಜಿ ಶಾಸಕ ಜಿ.ಎಂ.ಮಹಾಂತಶೆಟ್ಟರ, ರಾಮಕೃಷ್ಣ ದೊಡ್ಡಮನಿ, ಪುರಸಭೆ ಅಧ್ಯಕ್ಷೆ ಅಶ್ವಿ‌ನಿ ಅಂಕಲಕೋಟಿ, ಉಪಾಧ್ಯಕ್ಷೆ ಮಂಜವ್ವ ನಂದೆಣ್ಣವರ, ಶಿವಾನಂದ ಬೆಂತೂರ, ಬಸಣ್ಣ ಬೆಟಗೇರಿ, ಪುರಾಣಿಕಮಠ ಸಹೋದರರು, ಡಾ|ಚಂದ್ರು ಲಮಾಣಿ, ಪೀರಸಾಬ ಕೌತಾಳ, ಮೆಹಬೂಬ್‌ಸಾಬ ಕುಟುಂಬಸ್ಥರಿದ್ದರು.

ಕಲಾವಿದ ಶಂಭಯ್ಯ ಹಿರೇಮಠ ನಿರೂಪಿಸಿದರು. ಅನೇಕರು ಸಂಗೀತ ಶಾಲೆ ನಿರ್ಮಾಣಕ್ಕೆ ಅಳಿಲು ಸೇವೆ ಸಲ್ಲಿಸಿದರು. ಅಂಧ ಸಂಗೀತ ಕಲಾವಿದ ಮೆಬಬೂಬಸಾಬ್‌ ಹರ್ಲಾಪೂರ ಪ್ರಾರ್ಥನಾ ಸಂಗೀತ ನೀಡಿ ತನ್ನ ಸಂಗೀತ ಸೇವೆಗೆ ಕೈ ಜೋಡಿಸಬೇಕೆಂದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.