ಗದುಗಿಗೆ ಒಂದೇ ಸ್ಥಾನ ಮುನ್ನಡೆ

•31ನೇ ಸ್ಥಾನಕ್ಕೆ ತೃಪಿ •ಸುಧಾರಿಸದ ಎಸ್ಸೆಸ್ಸೆಲ್ಸಿ ಫಲಿತಾಂಶ •ಈಡೇರದ ಜಿಲ್ಲಾಡಳಿತ ಮಹದಾಸೆ

Team Udayavani, May 1, 2019, 12:20 PM IST

GADAGA-1-TDY..

ಗದಗ: ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಜ| ತೋಂಟದಾರ್ಯ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆ ಶಿಕ್ಷಕರು ಸಿಹಿ ತಿನಿಸಿ ಅಭಿನಂದಿಸಿದರು.

ಗದಗ: ಕಳೆದ ವಾರವಷ್ಟೇ ಪ್ರಕಟಗೊಂಡಿರುವ ಪಿಯುಸಿ ಫಲಿತಾಂಶದಲ್ಲಿ ಗದಗ 10 ಸ್ಥಾನಗಳನ್ನು ಕುಸಿದು 26ನೇ ಸ್ಥಾನಕ್ಕೆ ಜಾರಿದ್ದರೆ, ಮಂಗಳವಾರ ಪ್ರಕಟವಾದ ಎಸ್‌ಸ್‌ಎಲ್ಸಿ ಫಲಿತಾಂಶದಲ್ಲಿ ಕೇವಲ ಒಂದು ಸ್ಥಾನ ಮುನ್ನಡೆ ಸಾಧಿಸಿ ಕೊನೆಯ 31ನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ. ಜಿಲ್ಲೆಯ ಎಸ್‌ಎಸ್‌ಎಲ್ಸಿ ಫಲಿತಾಂಶ ಸುಧಾರಿಸಬೇಕು ಎಂಬ ಜಿಲ್ಲಾಡಳಿತದ ಮಹದಾಸೆ ಕೈಗೂಡದೇ ಅಧಿಕಾರಿಗಳು ಮತ್ತೂಮ್ಮೆ ತಲೆ ತಗ್ಗಿಸುವಂತಾಗಿದೆ.

2018-19ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷಾ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, ಗದಗ ಜಿಲ್ಲೆಗೆ ಶೇ.74.07ರಷ್ಟು ಫಲಿತಾಂಶ ಬಂದಿದೆ. ಕಳೆದ ಶೈಕ್ಷಣಿಕ ವರ್ಷ ಶೇ. 67.05ರಷ್ಟು ಫಲಿತಾಂಶದೊಂದಿಗೆ 32ನೇ ಸ್ಥಾನಲ್ಲಿದ್ದ ಜಿಲ್ಲೆಯು, ಈ ಬಾರಿ ಶೇ.7.32ರಷ್ಟು ಪ್ರಗತಿಯೊಂದಿಗೆ ಶೇ. 74.84ರಷ್ಟು ಮಕ್ಕಳು ತೇರ್ಗಡೆಯಾಗಿದ್ದು, ರಾಜ್ಯ ಮಟ್ಟದಲ್ಲಿ ಒಂದು ಸ್ಥಾನ ಜಿಗಿತದೊಂದಿಗೆ 31ನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.

ಬಾಲಕಿಯದ್ದೇ ಮೇಲುಗೈ: 2018-19ನೇ ಸಾಲಿಗೆ ನಡೆದ ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯ 286 ಶಾಲೆಗಳ ಒಟ್ಟು 15,069 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 12888 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 4423 ಬಾಲಕ ಹಾಗೂ 5222 ಬಾಲಕಿಯರು ಸೇರಿದಂತೆ ಒಟ್ಟು 9,645(ಶೇ.74.84) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಶೇ. 96.45ರಷ್ಟು ವಿದ್ಯಾರ್ಥಿನಿಯರು ಪಾಸಾಗುವ ಮೂಲಕ ಮೇಲುಗೈ ಸಾಧಿಸಿದ್ದಾರೆ.

ಅದರಲ್ಲಿ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದಿದ್ದ 10,122 ವಿದ್ಯಾರ್ಥಿಗಳಲ್ಲಿ 7,267(ಶೇ.71.79) ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಆಂಗ್ಲ ಮಾಧ್ಯಮದಲ್ಲಿ ಪರೀಕ್ಷೆ ಬರೆದ 2,343 ವಿದ್ಯಾರ್ಥಿಗಳಲ್ಲಿ 2,140 ಮಕ್ಕಳು ಉತ್ತೀರ್ಣರಾಗಿದ್ದಾರೆ. ಉರ್ದು ಮಾಧ್ಯಮದಲ್ಲಿ ಪರೀಕ್ಷೆ ಎದುರಿಸಿದ 423 ಮಕ್ಕಳಲ್ಲಿ 238 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಜಿಲ್ಲೆಯ 1,866 ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಲ್ಲಿ 1,295, ಪರಿಶಿಷ್ಟ ವರ್ಗದ 761ರಲ್ಲಿ 552 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಗದಗ ಜಿಲ್ಲೆಯ 12 ಸರಕಾರಿ, 2 ಅನುದಾನಿತ ಹಾಗೂ 4 ಅನುದಾನ ರಹಿತ ಪ್ರೌಢಶಾಲೆಗಳು ಈ ಬಾರಿ ಶೇ. 100ರಷ್ಟು ಫಲಿತಾಂಶ ಸಾಧಿಸುವ ಮೂಲಕ ಗಮನ ಸೆಳೆದಿವೆ. ಆದರೆ, ಯಾವುದೇ ಶಾಲೆ ಶೂನ್ಯ ಸಾಧನೆ ಮಾಡದಿದ್ದರೂ ಹಲವು ಸರಕಾರಿ ಮತ್ತು ಅನುದಾನ ರಹಿತ ಶಾಲೆಗಳು ಕಳಪೆ ಸಾಧನೆ ತೋರಿವೆ ಎಂದು ಹೇಳಲಾಗಿದೆ.

ಫಲಿಸದ ಶಿಕ್ಷಕರ ಪ್ರಯತ್ನ: ಪ್ರಸಕ್ತ ವರ್ಷದ ಎಸ್‌ಎಸ್‌ಎಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಜಿಲ್ಲಾಡಳಿತ, ಶಿಕ್ಷಣ ಇಲಾಖೆಯು ಹಲವಾರು ಕಾರ್ಯಕ್ರಮ ಹಮ್ಮಿಕೊಂಡಿತ್ತು. ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ, ಸಂವಾದ, ವಿಷಯಗಳ ಪುನರಾವರ್ತನೆ, ಗಣಿತ, ವಿಜ್ಞಾನ, ಇಂಗ್ಲಿಷ್‌ ವಿಷಯಗಳಿಗೆ ವಿಶೇಷ ತರಬೇತಿ ಹಮ್ಮಿಕೊಳ್ಳಲಾಗಿತ್ತು.

ಜೊತೆಗೆ ಕಡಿಮೆ ಫಲಿತಾಂಶ ಪಡೆದ ಶಾಲೆಗಳನ್ನು ಗುರುತಿಸಿ ಅವುಗಳನ್ನು ಅಧಿಕಾರಿಗಳಿಗೆ ದತ್ತು ನೀಡುವ, ಡಿಸೆಂಬರ್‌ನಲ್ಲಿ ವಿಶೇಷ ಪರೀಕ್ಷೆ ಕೂಡ ನಡೆಸಲಾಗಿತ್ತು. ವಿದ್ಯಾರ್ಥಿಗಳ ಗ್ರಹಿಕೆ ಆಧಾರದ ಮೇಲೆ ಪ್ರತ್ಯೇಕ, ವಿಶೇಷವಾಗಿ ಪಾಠ ಬೋಧನೆಗೆ ಕ್ರಮ ಜನರುಗಿಸಲಾಗಿತ್ತು. ಮನೆಮನೆಗೆ ಭೇಟಿ ನೀಡಿ, ಮಕ್ಕಳ ಓದಿನ ಬಗ್ಗೆ ಕಾಳಜಿ ವಹಿಸಲು ಪಾಲಕರಿಗೂ ಮಾರ್ಗದರ್ಶನ ನೀಡಲಾಗಿತ್ತು. ಈ ಎಲ್ಲ ಪ್ರಯತ್ನಗಳ ಮಧ್ಯೆಯೂ ನಿರೀಕ್ಷೆ ಫಲಿತಾಂಶ ಬಂದಿಲ್ಲ.

ಅಲ್ಲದೇ, 2017-18ನೇ ಸಾಲಿನಲ್ಲಿ ಫಲಿತಾಂಶ ಸುಧಾರಣೆಗಾಗಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿತ್ತು. ಆದರೆ, ಈ ಬಾರಿ ಜಿಲ್ಲಾ ಉಪನಿರ್ದೇಶಕರ ವರ್ಗಾವಣೆ, ದೀರ್ಘ‌ ಕಾಲದವರೆಗೆ ಪ್ರಭಾರ ಮತ್ತಿತರೆ ಕಾರಣಗಳಿಂದಾಗಿ ಶಿಕ್ಷಕರ ಮೇಲಿನ ಹಿಡಿತ ಸಡಿಲಗೊಂಡಿತ್ತು. ಅಲ್ಲದೇ, ಶಿಕ್ಷಕರ ಕೊರತೆ, ಓದಿಗಿಂತ ಮೊಬೈಲ್ ಮೇಲಿನ ಮಕ್ಕಳ ಆಸಕ್ತಿಯೇ ಕಡಿಮೆ ಫಲಿತಾಂಶಕ್ಕೆ ಕಾರಣವೂ ಹೌದು ಎಂಬುದು ಇಲಾಖೆಯ ಉನ್ನತ ಅಧಿಕಾರಿಗಳು ಹೇಳಿಕೆ.

40ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ಸದ್ಯದಲ್ಲೇ ಕಾರಣ ಕೇಳಿ ನೋಟಿಸ್‌ ಜಾರಿ ಮಾಡುತ್ತೇನೆ. ಅದು ಅನುದಾನಿತವಾಗಿದ್ದರೆ ಅನುದಾನವನ್ನು ಏಕೆ ಹಿಂಪಡೆಯಬಾರದು ಎಂದು, ಖಾಸಗಿಯಾಗಿದ್ದರೆ ಪರವಾನಗಿ ಯಾಕೆ ರದ್ದುಗೊಳಿಸಬಾರದು ಹಾಗೂ ಸರಕಾರಿ ಶಾಲೆಗಳಲ್ಲಿ ಶೇ. 20ಕ್ಕಿಂತ ಫಲಿತಾಂಶ ಪಡೆದ ವಿಷಯವಾರು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ನೋಟಿಸ್‌ ನೀಡುತ್ತೇವೆ. ಅದರೊಂದಿಗೆ ಮುಂದಿನ ವರ್ಷದ ಫಲಿತಾಂಶ ಟಾಪ್‌-20 ಒಳಗಡೆ ತರಬೇಕೆಂಬ ಉದ್ದೇಶದಿಂದ 20 ಅಂಶಗಳ ಕಾರ್ಯಕ್ರಮ ರೂಪಿಸಿದ್ದು, ಜೂನ್‌ ಆರಂಭದಿಂದಲೇ ಅದನ್ನು ಅನುಷ್ಠಾನಕ್ಕೆ ತರಲು ಪ್ರಯತ್ನಿಸಲಾಗುವುದು.-ಎನ್‌.ಎಚ್. ನಾಗೂರ, ಡಿಡಿಪಿಐ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.