ಮನೆ ಮನೆ ಸಮೀಕ್ಷೆಗೆ ಶಿಕ್ಷಕರ ಸಾಥ್
Team Udayavani, Apr 26, 2020, 5:30 PM IST
ಸಾಂದರ್ಭಿಕ ಚಿತ್ರ
ಗದಗ: ಹಲವು ಮುಂಜಾಗ್ರತಾ ಕ್ರಮಗಳ ಮಧ್ಯೆಯೂ ಜಿಲ್ಲೆಯಲ್ಲಿ ನಾಲ್ಕು ಪ್ರಕರಣಗಳು ಕೋವಿಡ್ 19 ದೃಢಪಟ್ಟಿವೆ. ಇದರಿಂದ ಮತ್ತಷ್ಟು ಕ್ರಮಗಳನ್ನು ಬಿಗಿಗೊಳಿಸಿರುವ ಜಿಲ್ಲಾಡಳಿತ ನಗರ ಹಾಗೂ ಪಟ್ಟಣ ಪ್ರದೇಶದಲ್ಲಿ ಪ್ರತಿ ಮನೆ ಸದಸ್ಯರ ಸಂಪೂರ್ಣ ವಿವರ ಸಂಗ್ರಹಿಸಲು ಸಮೀಕ್ಷೆಗೆ ಮುಂದಾಗಿದೆ.
ಜಿಲ್ಲೆಯಲ್ಲಿ ಕೋವಿಡ್ 19 ಸಂಪೂರ್ಣ ನಿವಾರಣೆಗಾಗಿ ಯುದ್ಧೋಪಾದಿಯಲ್ಲಿ ಕ್ರಮಕೈಗೊಂಡ ಜಿಲ್ಲಾಡಳಿತ ನಗರ ಹಾಗೂ ಪಟ್ಟಣ ಪ್ರದೇಶದ ನಿವಾಸಿಗಳ ಸಮಗ್ರ ಮಾಹಿತಿ ಕಲೆ ಹಾಕುತ್ತಿದೆ. ಸಭೆಯಲ್ಲೂ ಚರ್ಚೆಯಾಗಿತ್ತು: ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ಬೆಳಗಾವಿ ವಲಯದ ಐಜಿಪಿ ರಾಘವೇಂದ್ರ ಸುಹಾಸ್ ಅವರು ಅಧಿಕಾರಿಗಳೊಂದಿಗೆ ನಡೆಸಿ, ಗ್ರಾಮೀಣ ಭಾಗದಲ್ಲಿ ಆಶಾ ಕಾರ್ಯಕರ್ತೆಯರ ಮೂಲಕ ಸಮೀಕ್ಷೆ ನಡೆಸಲಾಗುತ್ತಿದೆ. ಆದರೆ ನಗರ ಪ್ರದೇಶದಲ್ಲಿ ಆಶಾ, ಆರೋಗ್ಯ ಸಹಾಯಕಿಯರ ಕೊರತೆಯಿಂದ ಸಮೀಕ್ಷೆ ಅಷ್ಟಾಗಿ ನಡೆಯುತ್ತಿಲ್ಲ. ರಂಗನವಾಡ ಹೊರತುಪಡೆಸಿ, ಅಕ್ಕಪಕ್ಕದ ವಾರ್ಡ್ಗಳಲ್ಲೂ ಸಮೀಕ್ಷೆ ನಡೆದಿಲ್ಲ ಎಂಬ ಚರ್ಚೆ ಗಂಭೀರತೆ ಪಡೆದಿತ್ತು. ಇದರ ಬೆನ್ನಲ್ಲೇ ರಾಜ್ಯ ಸರಕಾರ ಸಮೀಕ್ಷೆಗೆ ಆದೇಶಿಸಿದ್ದರಿಂದ ಜಿಲ್ಲಾಡಳಿತ ಸರಕಾರಿ ಹಾಗೂ ಅನುದಾನಿತ ಶಾಲೆಗಳ ಶಿಕ್ಷಕರನ್ನು ಬಳಸಿಕೊಂಡು ಸಮೀಕ್ಷೆಗೆ ಚಾಲನೆ ನೀಡಿದೆ.
ಯಾವ್ಯಾವ ಮಾಹಿತಿ: ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ 35 ವಾರ್ಡ್ ಗಳಲ್ಲಿ ಸುಮಾರು 200 ಜನ ಶಿಕ್ಷಕರು, ಆಶಾ ಕಾರ್ಯಕರ್ತೆ ಅಥವಾ ಆರೋಗ್ಯ ಸಹಾಕಿಯರ ಜೊತೆಗೂಡಿ ಶನಿವಾರ ಸಮೀಕ್ಷೆ ಆರಂಭಿಸಿದ್ದಾರೆ. ಪ್ರತಿಯೊಂದು ಮನೆಗೂ ಭೇಟಿ ನೀಡಿ, ಮನೆಯಲ್ಲಿರುವ ಸದಸ್ಯರ ವಿವರ, ಸಂಪರ್ಕ ಸಂಖ್ಯೆ, ಕಳೆದ ಮೂರು ತಿಂಗಳಲ್ಲಿ ಪ್ರಯಾಣಿಸಿದ ವಿವರ ಹಾಗೂ ಅವರಲ್ಲಿನ ಕಾಯಿಲೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈ ಮೂಲಕ ಕೋವಿಡ್-19 ಅಪಾಯಕ್ಕೆ ಒಳಗಾಗುವವರನ್ನು ಗುರುತಿಸಿ, ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಳ್ಳುವುದು ಇದರ ಮೂಲ ಉದ್ದೇಶ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ