ಮುಖದ ಸೌಂದರ್ಯಕ್ಕೆ ಕಾಂತಿಯ ಹಲ್ಲುಗಳೇ ಭೂಷಣ
ಪುಟ್ಟ ವಯಸ್ಸಿನಲ್ಲಿ ಹಲ್ಲುಗಳಲ್ಲಿ ಹುಳುಕು ಉಂಟಾಗುವ ಸಾಧ್ಯತೆಗಳೇ ಹೆಚ್ಚು.
Team Udayavani, Jan 7, 2022, 4:51 PM IST
ಗದಗ: ಹಲ್ಲುಗಳ ಸ್ವಚ್ಛತೆ, ಸುರಕ್ಷತೆ ಯಿಂದ ಉತ್ತಮ ಆರೋಗ್ಯ ಪಡೆಯ ಬಹುದಾಗಿದೆ. ಮುಖದ ಸೌಂದರ್ಯಕ್ಕೆ ಕಾಂತಿಯುಕ್ತ ಹಲ್ಲುಗಳೇ ಭೂಷಣ ಎಂದು ಡಾ|ಆರ್.ಬಿ.ಉಪ್ಪಿನ ಅವರು ಹೇಳಿದರು.
ಗದಗ-ಬೆಟಗೇರಿ ರೋಟರಿ ಕ್ಲಬ್ ದಿಂದ ತಾಲೂಕಿನ ಹರ್ತಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಉಚಿತ ದಂತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಟೂಥ್ಬ್ರಷ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಚಿಕ್ಕ ವಯಸ್ಸಿನಲ್ಲಿ ದಂತಗಳ ರಕ್ಷಣೆ ಅವಶ್ಯಕವಾಗಿದೆ. ಪುಟ್ಟ ವಯಸ್ಸಿನಲ್ಲಿ ಹಲ್ಲುಗಳಲ್ಲಿ ಹುಳುಕು ಉಂಟಾಗುವ ಸಾಧ್ಯತೆಗಳೇ ಹೆಚ್ಚು. ಅದನ್ನು ತಡೆಗಟ್ಟಲು ವಿದ್ಯಾರ್ಥಿಗಳು ಪ್ರತಿದಿನ ಬೆಳಗ್ಗೆ ಹಾಗೂ ರಾತ್ರಿ ಮಲಗುವ ಮುನ್ನ ಹಲ್ಲುಗಳನ್ನು ಸ್ವಚ್ಛಗೊಳಿಸುವ ರೂಢಿ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ರೋಟರಿ ಕ್ಲಬ್ ಅಧ್ಯಕ್ಷ ಅರವಿಂದಸಿಂಗ್ ಬ್ಯಾಳಿ, ರೋಟರಿ ಕ್ಲಬ್ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸುತ್ತಿದೆ.
ಮಕ್ಕಳಿಗೆ ಹಲ್ಲುಗಳ ಸ್ವಚ್ಛತೆ, ಅವುಗಳ ಉಪಯೋಗ ಮುಂತಾದ ತಿಳಿವಳಿಕೆಯ ಕಾರ್ಯ ಕ್ರಮಗಳನ್ನು ಕ್ಲಬ್ ವತಿಯಿಂದ ಆಯೋಜನೆ ಮಾಡುತ್ತಿದ್ದು, ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಶಾಲಾ ಮುಖ್ಯೋಪಾಧ್ಯಾಯ ಕೆ.ಎಫ್.ಹಳಾಳ ಹಾಗೂ ಎಸ್.ಪಿ. ಹಿರೇಮಠ ಮಾತನಾಡಿ, ಮಕ್ಕಳು ಆರೋಗ್ಯದಿಂದಿರಲು ಸ್ವಚ್ಛತೆ, ಉತ್ತಮ ಆಹಾರ ಸೇವನೆ ಅವಶ್ಯಕವಾಗಿದೆ. ಅದರೊಂದಿಗೆ ಹಲ್ಲುಗಳ ರಕ್ಷಣೆ ಪ್ರಮುಖವಾಗಿದೆ. ಪ್ರತಿದಿನ ಊಟದ ಮೊದಲು ಹಾಗೂ ಊಟದ ನಂತರ ಹಲ್ಲು ಸ್ವಚ್ಛಗೊಳಿಸುವ ಪ್ರಕ್ರಿಯೆ ರೂಢಿಸಿಕೊಂಡರೆ ಆರೋಗ್ಯ ಉತ್ತಮವಾಗಿರುವುದರ ಜೊತೆಗೆ ಹಲ್ಲುಗಳು ಹುಳುಕಿನ ಬಾಧೆಯಿಂದ ರಕ್ಷಣೆಗೊಳ್ಳುತ್ತವೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಇದೇ ವೇಳೆ ಶಾಲಾ ಮಕ್ಕಳ ದಂತ ತಪಾಸಣಾ ಶಿಬಿರ ನಡೆಯಿತು. ರೊಟೇರಿಯನ್ ಎಸ್.ಎಸ್. ಹೊಸಳ್ಳಿಮಠ, ಜಿ.ಎಂ.ಅಣ್ಣಿಗೇರಿ, ಸಿ.ಎಸ್.ಬಾರಿಗಿಡದ, ಹಾಗೂ ಶಿಕ್ಷಕರಾದ ಟಿ.ಎಸ್.ಬಡ್ನಿ, ಆರ್. ಕೆ.ಕುದರಿಯವರ, ಸುವಾಸಿನಿ ಬಿರಾದಾರ, ವಿ.ಎಚ್.ಬಿಂಕದಕಟ್ಟಿ, ಹಾಗೂ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು. ಎಚ್.ಎಚ್.ಹಳ್ಳಿಕೇರಿ ಸ್ವಾಗತಿಸಿ, ಕ್ಲಸ್ಟರ್ ಸಿಆರ್ಪಿ ಐ.ಎ.ಗಾಡಗೋಳಿ ನಿರೂಪಿಸಿ, ವಿ.ಆರ್.ಕೇರಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?