ತವರು ಜಿಲ್ಲೆಗೆ ತೆಲಂಗಾಣ ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನರ ನೆರವು
Team Udayavani, May 29, 2021, 6:05 PM IST
ಗದಗ: ತೆಲಂಗಾಣದಲ್ಲಿ ಪಶು ವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆಗೈದ ಆರೋಪಿಗಳನ್ನು ಎನ್ಕೌಂಟರ್ ಮಾಡುವ ಮೂಲಕ ದೇಶದ ಗಮನ ಸೆಳೆದಿದ್ದ ಹಿರಿಯ ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನರ ಅವರು, ತವರು ಜಿಲ್ಲೆಗೆ ಎದುರಾಗಿರುವ ಕೋವಿಡ್ ಸಂಕಷ್ಟಕ್ಕೆ ಮನ ಮಿಡಿದಿದ್ದಾರೆ.
ಗದಗ ಜಿಲ್ಲೆಗೆ ಸುಮಾರು 40 ಲಕ್ಷ ಮೌಲ್ಯದ ವೈದ್ಯಕೀಯ ಸಾಮಗ್ರಿಗಳನ್ನು ಒದಗಿಸುವ ಮೂಲಕ ಸಹಾಯಹಸ್ತ ಚಾಚಿದ್ದಾರೆ.
ಆಕ್ಸಿಜನ್ ಕಾನ್ಸಂಟ್ರೇಟರ್ (22), ಆಕ್ಸಿಜನ್ ಸಿಲಿಂಡರ್ (84), ಕೋವಿಡ್ ಕಿಟ್ (2000), ಮಾಸ್ಕ್ (20000), ಸ್ಯಾನಿಟೈಸರ್ (200 ಲೀಟರ್), ಫೇಸ್ಶೀಲ್ಡ್ (1000), ರೆಮಿಡಿಸಿವಿಯರ್ (24 ಯುನಿಟ್) ಸೇರಿದಂತೆ ಇತರ ಔಷಧ ಸಾಮಗ್ರಿಗಳನ್ನು ಗದಗ ಜಿಲ್ಲಾಡಳಿತಕ್ಕೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಹಿರಿಯ ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನರ ಅವರ ಸಹೋದರ ಹುಬ್ಬಳ್ಳಿಯ ಸಾಯಿ ಮಲ್ಟಿಸ್ಪೇಷಾಲಿಟಿ ಕ್ಲಿನಿಕ್ನ ಡಾ|ಎಂ.ಸಿ.ಸಜ್ಜನರ ಅವರು ಶುಕ್ರವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಪಂ ಸಿಇಒ ಭರತ್ ಎಸ್. ಅವರಿಗೆ ವೈದ್ಯಕೀಯ ಔಷ ಧ ಸಾಮಗ್ರಿಗಳನ್ನು ಹಸ್ತಾಂತರಿಸಿದರು.