ಬಿಡಾಡಿ ದನಗಳಿಗೂ ತಪ್ಪಿಲ್ಲ ನೀರಿನ ಗೋಳು


Team Udayavani, May 17, 2019, 4:14 PM IST

gadaga-tdy-2..

ಗದಗ: ಹೆಚ್ಚುತ್ತಿರುವ ತಾಪದಿಂದ ದಾಹ ತೀರಿಸಿಕೊಳ್ಳಲು ನಳಕ್ಕೆ ಬಾಯಿವೊಡ್ಡಿರುವ ಮೂಕ ಜೀವಿಗಳು.

ಗದಗ: ಗದಗ- ಬೆಟಗೇರಿ ಅವಳಿ ನಗರದ ವಿವಿಧೆಡೆ ರಸ್ತೆ ವಿಭಜಕಗಳ ಮಧ್ಯೆ ನೆಟ್ಟಿರುವ ಸಸಿಗಳನ್ನು ಉಳಿಸಿಕೊಳ್ಳಲು ನಗರಸಭೆ ತೋರುವಷ್ಟು ಕಾಳಜಿಯನ್ನು ಬೀಡಾಡಿ ದನಗಳ ದಾಹ ತೀರಿಸುವತ್ತ ಗಮನ ಹರಿಸುತ್ತಿಲ್ಲ. ಹೀಗಾಗಿ ಪ್ರಾಣಿಗಳು ಬಿಸಿಲಿನ ಬೇಗೆಯಿಂದ ದೇಹ ತಣಿಸಿಕೊಳ್ಳಲು ಪೋಲಾಗುವ ನಳ ಹಾಗೂ ರಸ್ತೆಗಳಲ್ಲಿ ನಿಂತ ನೀರಿಗೆ ಬಾಯಿವೊಡ್ಡುವಂತಾಗಿದೆ.

ಹೌದು, ಸತತ ಬರಗಾಲ ಹಾಗೂ ಮಳೆ ಕೊರತೆಯಿಂದಾಗಿ ಬಿಸಿಲಿನ ತಾಪ ದಿನಗಳೆದಂತೆ ಹೆಚ್ಚುತ್ತಿದೆ. ಕಳೆದ ಹದಿನೈದು ದಿನಗಳಿಂದ ಉಷ್ಣಾಂಶ ಗರಿಷ್ಠ 38ರಿಂದ 40 ಡಿಗ್ರಿ ಸೆಲ್ಸಿಯಸ್‌ ವರೆಗೆ ದಾಖಲಾಗುತ್ತಿದೆ. ಬಿಸಿಲಿನ ತಾಪದಿಂದ ತಪ್ಪಿಸಿಕೊಳ್ಳಲು ಜನಸಾಮಾನ್ಯರು ಎಳೆ ನೀರು, ತಂಪು ಪಾನೀಯಗಳಿಗೆ ಮೊರೆ ಹೋಗುತ್ತಿದ್ದಾರೆ. ಆದರೆ, ಬಿರು ಬಿಸಿಲಿನಿಂದ ಪ್ರಾಣಿಗಳಿಗೆ ಕುಡಿಯುವ ನೀರು ಸಿಗದೇ ಅನುಭವಿಸುವ ಸಂಕಷ್ಟ ಅವುಗಳಿಗೇ ಗೊತ್ತು.

ಆಗಾಗ ನಗರಸಭೆ ನಡೆಸಿದ ಬೀಡಾಡಿ ದನಗಳ ಕಾರ್ಯಾಚರಣೆಯಿಂದಾಗಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಇತ್ತೀಚೆಗೆ ಬೀಡಾಡಿ ದನಗಳ ಸಂಖ್ಯೆ ಭಾಗಶಃ ಕಡಿಮೆಯಾಗಿವೆ. ಆ ಪೈಕಿ ಬಹುತೇಕ ಮಾಲೀಕರಿಗೆ ಸೇರಿವೆ. ಆದರೆ, ಮಾಲೀಕರ ಮನೆಗಳಲ್ಲಿ ಜಾಗ, ಮೇವಿನ ಕೊರತೆಯಿಂದಾಗಿ ಸೂರ್ಯೋದಯವಾಗುತ್ತಿದ್ದಂತೆ ದನಗಳು ಬೀದಿಗೆ ಬರುತ್ತಿವೆ. ಹೀಗಾಗಿ ನೂರಾರು ದನಗಳು ಹಸಿವು, ದಾಹ ತೀರಿಸಿಕೊಳ್ಳಲು ಪರಿತಪಿಸುವಂತಾಗಿದೆ.

ನಗರಸಭೆ ನೀರಿನ ತೊಟ್ಟಿಗಳು ಮಾಯ!:

ಕೆಲ ವರ್ಷಗಳ ಹಿಂದೆ ಗದಗ- ಬೆಟಗೇರಿ ಅವಳಿ ನಗರದಲ್ಲಿ ಬೀಡಾಡಿ ದನಗಳ ಅನುಕೂಲಕ್ಕಾಗಿ ನಗರಸಭೆಯಿಂದ ಹಳೇ ಬಸ್‌ ನಿಲ್ದಾಣ, ವೀರೇಶ್ವರ ಗ್ರಂಥಾಲಯ, ಒಕ್ಕಲಗೇರಿ, ಧೋಬಿ ಘಾಟ, ಭೀಷ್ಮ ಕೆರೆ, ಮಹೇಂದ್ರಕರ ಸರ್ಕಲ್, ಪಾಲಾ-ಬಾದಾಮಿ ರಸ್ತೆ, ಬೆಟಗೇರಿ ಸೇರಿದಂತೆ ಸುಮಾರು 8-10 ಕಡೆ ನೀರಿನ ತೊಟ್ಟಿ ಇರಿಸಲಾಗಿತ್ತು. ಅದರೊಂದಿಗೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಇಲಾಖೆಯಿಂದಲೇ ನೀರಿನ ತೊಟ್ಟಿ ಇಡಲಾಗಿತ್ತು. ಬೇಸಿಗೆ ದಿನಗಳಲ್ಲಿ ಎಲ್ಲ ನೀರಿನ ತೊಟ್ಟಿಗಳನ್ನೂ ನಗರಸಭೆ ಟ್ಯಾಂಕರ್‌ ಮೂಲಕ ನೀರು ತುಂಬಿಸಲು ವಿಶೇಷ ಒತ್ತು ನೀಡಲಾಗುತ್ತಿತ್ತು. ಆ ಪೈಕಿ ನಗರಸಭೆ ಅಳವಡಿಸಿದ್ದ ನೀರಿನ ತೊಟ್ಟಿಗಳು ಸಿಮೆಂಟಿನದ್ದಾಗಿದ್ದರಿಂದ ರೈಲ್ವೆ ನಿಲ್ದಾಣ ಸಮೀಪದ ದುರ್ಗಾ ದೇವಿ ದೇವಸ್ಥಾನದ ಬಳಿ ಅಳವಡಿಸಿರುವ ತೊಟ್ಟಿ ಹೊರತಾಗಿ ಬಹುತೇಕ ಮಾಯವಾಗಿವೆ ಎಂಬುದು ನಗರಸಭೆ ಮೂಲಗಳ ಹೇಳಿಕೆ.

ಇನ್ನು ರೈಲ್ವೆ ಇಲಾಖೆ ಕಾಮಗಾರಿಯೊಂದರ ನಿಮಿತ್ತ ನಿಲ್ದಾಣದ ಬಳಿ ತೊಟ್ಟಿಯನ್ನೂ ಧ್ವಂಸಗೊಳಿಸಿದ್ದರಿಂದ ಬೀಡಾಡಿ ದನಗಳೊಂದಿಗೆ ಅಲ್ಲಿನ ಟಾಂಗಾಗಳ ಕುದುರೆಗಳೂ ಕುಡಿಯುವ ನೀರಿನ ಸಮಸ್ಯೆ ಎದುರಿಸುವಂತಾಗಿದೆ. ಟಾಂಗಾ ಕುದುರೆಗಳ ನೀರಿನ ದಾಹ ತೀರಿಸಿಲು ಆನತಿ ದೂರದ ದುರ್ಗಾದ ದೇವಿ ದೇವಸ್ಥಾನದ ಬಳಿ ತೊಟ್ಟಿಗೆ ಕರೆತರುತ್ತಾರೆ ಎಂದು ಹೇಳಲಾಗಿದೆ.

ಆದರೆ, ಬೆಟಗೇರಿ ಬಸ್‌ ನಿಲ್ದಾಣ, ಸೆಟ್ಲಮೆಂಟ್, ಸ್ಟೇಷನ್‌ ರಸ್ತೆ, ಗಾಂಧಿ ವೃತ್ತ, ಶಾನಭಾಗ ಹೋಟೆಲ್ ಭಾಗದಲ್ಲಿ ಇಂದಿಗೂ ಹೆಚ್ಚಾಗಿ ಬೀಡಾಡಿ ದನಗಳು ಬೀಡು ಬಿಡುತ್ತಿವೆ. ಆಯಾ ಭಾಗದಲ್ಲಿ ಪ್ರಾಣಿಗಳು ದಾಹ ನೀಗಿಸಿಕೊಳ್ಳಲು ಯಾವುದೇ ವ್ಯವಸ್ಥೆಯಿಲ್ಲದೇ, ಪರದಾಡುವಂತಾಗಿದೆ. ಇನ್ನು ರಸ್ತೆಗಳಲ್ಲಿ ಬೀಡಾಡಿ ದನಗಳ ಅಡ್ಡಾದಿಡ್ಡಿ ಓಡಾಟದಿಂದ ವಾಹನ ಸವಾರರಿಗೆ ಸಂಚಕಾರ ತಂದೊಡ್ಡುತ್ತಿವೆ ಎಂಬುದು ಗಮನಾರ್ಹ.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.