2ಎ ಮೀಸಲಿಗೆ ಸಾಂವಿಧಾನಾತ್ಮಕ ಹೋರಾಟ

ಪೂರ್ಣಕುಂಭದೊಂದಿಗೆ ಭಾಗವಹಿಸಿದ್ದ ಸಮಾಜದ ಮಹಿಳೆಯರು ಮೆರಗು ತಂದರು.

Team Udayavani, Feb 22, 2022, 6:10 PM IST

2ಎ ಮೀಸಲಿಗೆ ಸಾಂವಿಧಾನಾತ್ಮಕ ಹೋರಾಟ

ಲಕ್ಷ್ಮೇಶ್ವರ: ವೀರರಾಣಿ ಕಿತ್ತೂರು ಚನ್ನಮ್ಮ, ಕೆಳದಿ ಚನ್ನಮ್ಮ, ಅಕ್ಕಮಹಾದೇವಿ, ಬೆಳವಡಿ ಮಲ್ಲಮ್ಮ, ಮೈಲಾರ ಮಹಾದೇವಪ್ಪ, ಕಂಬಳಿ ಸಿದ್ಧಪ್ಪರಂತಹ ಅನೇಕರು ಪಂಚಮಸಾಲಿ ಸಮಾಜದ ಹೆಮ್ಮೆಯಾಗಿದ್ದಾರೆ. ತಾಯಂದಿರು ಮಕ್ಕಳಿಗೆ ಇಂತಹ ಪುಣ್ಯ ಪುರುಷರ ಬದುಕು, ಜೀವನ ಮೌಲ್ಯಗಳನ್ನು ರೂಢಿಸಬೇಕೆಂದು ಹರಿಹರ ಪೀಠದ ವಚನಾನಂದ ಸ್ವಾಮಿಗಳು ಹೇಳಿದರು.

ಲಕ್ಷ್ಮೇಶ್ವರ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಯಲ್ಲಾಪುರ ಗ್ರಾಮ ಘಟಕ, ಮಹಿಳಾ ಘಟಕಗಳ ಉದ್ಘಾಟನೆ, ಕಿತ್ತೂರು ಚನ್ನಮ್ಮನವರ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಿದ ನಂತರ ನಡೆದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು. ಸಂಘಟನೆಯಲ್ಲಿ ಸರ್ವಶಕ್ತಿ ಅಡಗಿದ್ದು, ಸಮಾಜ ಸಂಘಟನೆಯಾದರೆ ನ್ಯಾಯಯುತ, ಕಾನೂನು ಬದ್ಧ ಬೇಡಿಕೆಗಳು ಈಡೇರಲು ಸಾಧ್ಯ ಎಂದರು.

ತಾಯಂದಿರು ಮಕ್ಕಳಿಗೆ ಶಿಕ್ಷಣ, ಸಂಸ್ಕಾರ ಕಲಿಸಬೇಕು. ಸಮಾಜದ ಸಂಘಟನೆ, ಶ್ರೇಯೋಭಿವೃದ್ಧಿಗಾಗಿ ಸಮಾಜದ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ಪರಸ ರ ಭಿನ್ನಾಭಿಪ್ರಾಯ, ಕಾಲು ಜಗ್ಗುವ ಪ್ರವೃತ್ತಿ ಬಿಡಬೇಕು. ಸಮಾಜ ನಮಗೇನು ಮಾಡಿದೆ ಎನ್ನದೇ ಸಮಾಜಕ್ಕೆ ನನ್ನ ಕೊಡುಗೆ ಏನು? ಎಂಬ ಆತ್ಮ ವಿಮರ್ಶೆ ಎಲ್ಲರದ್ದಾಗಬೇಕು ಎಂದರು.

ಪಂಚಮಸಾಲಿ ಸಮಾಜದ ಶ್ರೇಯೋಭಿವೃದ್ಧಿ, ಕಷ್ಟ-ಸುಖದಲ್ಲಿ ಭಾಗಿಯಾಗಲು ಹರಿಹರ ಪೀಠ ಸದಾ ಸಿದ್ಧವಿದೆ. ಪೀಠದಲ್ಲಿ ಸಮಾಜದ ಬಡ, ಪ್ರತಿಭಾವಂತ ಮಕ್ಕಳಿಗೆ ತ್ರಿವಿಧ ದಾಸೋಹದ ಜತೆಗೆ ಆರೋಗ್ಯ, ಆಧ್ಯಾತ್ಮ ಸೇರಿ ಪಂಚ ದಾಸೋಹ ಸೇವೆ ನಡೆಯುತ್ತಿದ್ದು, ಸಮಾಜ ಬಾಂಧವರು ತನು ಮನಧನದ ಸಹಾಯ-ಸಹಕಾರ ನೀಡಬೇಕಿದೆ ಎಂದರು.

ಫೆ.27ರಂದು ಸರ್ಕಾರವೇ ಕೆಳದಿ ಚನ್ನಮ್ಮನ 350ನೇ ಪಟ್ಟಾಧಿಕಾರ ಸಮಾರಂಭವನ್ನು ಸಂಭ್ರಮದಿಂದ ಆಚರಿಸಲು ಮನವಿ ಮಾಡಲಾಗಿದೆ. ಬರುವ ಎಪ್ರಿಲ್‌ ತಿಂಗಳಲ್ಲಿ ಕೋವಿಡ್‌ ಕಾರಣದಿಂದ ಮುಂದೂಡಲ್ಪಟ್ಟಿದ ಹರ ಜಾತ್ರೆ ನಡೆಸಲು ತೀರ್ಮಾನಿಸಲಾಗಿದೆ. ಪಂಚಮಸಾಲಿ ಮತ್ತು ಇತರೇ ಸಮಾಜ ಬಾಂಧವರೂ ಹರಜಾತ್ರೆಗೆ ಆಗಮಿಸಬೇಕೆಂದು ಮನವಿ ಮಾಡಿದರು.

ರಾಜ್ಯ ಮಹಿಳಾ ಸಂಘದ ಪ್ರಧಾನ ಕಾರ್ಯದರ್ಶಿ ವಸಂತ ಹುಲ್ಲತ್ತಿ ಮಹಿಳಾ ಘಟಕ ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಅಧ್ಯಕ್ಷ ಮಂಜುನಾಥ ಮಾಗಡಿ, ಸಮಾಜದ ಬೆಳಕಾಗಿ ಕಾರ್ಯನಿರ್ವಹಿಸುತ್ತಿರುವ ಹರಿಹರ ಪೀಠಕ್ಕೆ ಸಮಾಜ ಬಾಂಧವರು ತನು, ಮನ, ಧನ ಸೇವೆಗೆ ಸನ್ನದ್ಧರಾಗೋಣ ಎಂದರು. ಕಾರ್ಯಕ್ರಮದಲ್ಲಿ ಸಮಾಜದ ರೈತರು, ನೌಕರರು, ನಿವೃತ್ತ ಶಿಕ್ಷಕರು, ಗಣ್ಯರು, ಮಹಿಳೆಯರು ಸೇರಿ 150ಕ್ಕೂ ಹೆಚ್ಚು ಜನರನ್ನು ಸನ್ಮಾನಿಸಲಾಯಿತು. ಬೆಳಿಗ್ಗೆ ಗ್ರಾಮದಲ್ಲಿ ಸಕಲ ವಾದ್ಯಗಳೊಂದಿಗೆ ನಡೆದ ವೀರರಾಣಿ ಕಿತ್ತೂರ ಚನ್ನಮ್ಮಾಜಿ ಭಾವಚಿತ್ರದ ಮೆರವಣಿಗೆಗೆ ಪೂರ್ಣಕುಂಭದೊಂದಿಗೆ ಭಾಗವಹಿಸಿದ್ದ ಸಮಾಜದ ಮಹಿಳೆಯರು ಮೆರಗು ತಂದರು.

ಕಾರ್ಯಕ್ರಮದಲ್ಲಿ ಶಿವನಗೌಡ ಭರಮಗೌಡ, ತಿರಕಪ್ಪ ಪ್ಯಾಟಿ. ಶಿವನಗೌಡ ನರಸಮ್ಮನವರ ಚಂದ್ರಶೇಖರ ಅಂಗಡಿ, ನಾಗಪ್ಪ ಅಕ್ಕೂರ, ಎಂ.ಎನ್‌.ನರಸಮ್ಮನವರ, ತಿರುಪತಿ ಅಕ್ಕೂರ, ಬಿ.ಎಂ. ಅಂಗಡಿ, ಎಸ್‌.ಬಿ. ಮತ್ತೂರ, ಜೆ.ಎಸ್‌ .ನರಸಮ್ಮನವರ, ಬಿ.ಡಿ. ಮತ್ತೂರ, ಎನ್‌. ಎನ್‌., ಸೋಮನಕಟ್ಟಿ, ಎಸ್‌.ಎನ್‌. ಭರಮಗೌಡ್ರ,ನೀಲವ್ವ ಸೋಮನಕಟ್ಟಿ, ವಿದ್ಯಾ ಅಕ್ಕೂರ, ರೇಣುಕಾ ಪಾಟೀಲ ಸೇರಿ ಸಮಾಜದ ಹಿರಿಯರು ಉಪಸ್ಥಿತರಿದ್ದರು. ಯಲ್ಲಾಪುರ ಮತ್ತು ಸುತ್ತಲಿನ ಗ್ರಾಮಗಳ ಸಮಾಜ ಬಾಂಧವರು, ಪಿ.ಬಿ. ಕಾಳಪ್ಪನವರ ಸೇರಿದಂತೆ ತಾಲೂಕು ಮತ್ತು ಗ್ರಾಮ ಘಟಕದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಯಾವ ಸಮಾಜ ತನ್ನ ಉನ್ನತಿ, ಶ್ರೇಯಸ್ಸಿಗಾಗಿ ಶ್ರಮಿಸಿರುತ್ತದೆಯೂ ಅದರ ಋಣ ತೀರಿಸುವ ನೈತಿಕ ಹೊಣೆ ಗಾರಿಕೆ ಮತ್ತು ಜವಾಬ್ದಾರಿಯನ್ನು ಅರಿತುಕೊಂಡಾಗ ಮಾತ್ರ ಸಮಾಜದ ಉನ್ನತಿ ಸಾಧ್ಯ. ಹರಿಹರ ಪೀಠ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಪಡೆಯಲು ಕೇವಲ ಪ್ರತಿಭಟನೆ, ಹೋರಾಟಕ್ಕಿಳಿಯದೇ ಸಾಂವಿಧಾನಾತ್ಮಕ, ಕಾನೂನಾತ್ಮಕವಾಗಿ ಕಾರ್ಯ ನಿರ್ವಹಿಸುತ್ತಿದೆ.
ಶ್ರೀ ಜ|ವಚನಾನಂದ ಸ್ವಾಮೀಜಿ,
ಹರಿಹರ ಪೀಠ

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.