ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಅಪರಾಧಿ ಪರಾರಿ
Team Udayavani, Mar 6, 2020, 5:33 PM IST
ಗದಗ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೆ ಶಿಕ್ಷೆಗೆ ಗುರಿಯಾದ ಅಪರಾಧಿಯೊಬ್ಬ ಕಟಕಟೆಯಿಂದ ತಪ್ಪಿಸಿಕೊಂಡಿರುವ ಘಟನೆ ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಗುರುವಾರ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಗಜೇಂದ್ರಗಡದ ಪಾಂಡುರಂಗ ಗುಡಿ ಸಮೀಪದ ನಿವಾಸಿ ಚಾಂದಲಿಂಗಪ್ಪ ಸುನಂದಾ ಬಾರಕೇರ ಎಂಬ ಅಪರಾಧಿ ತಪ್ಪಿಸಿಕೊಂಡಿದ್ದಾನೆ. ಈತನ ವಿರುದ್ಧ ಗದಗ ಪ್ರಧಾನ ದಿವಾಣಿ ಮತ್ತು ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ ಕಲಂ ೧೩೮ ಎನ್.ಐ. ಯಾಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರು, ಗುರುವಾರ ಸಂಜೆ 4 ಗಂಟೆ ಸುಮಾರಿಗೆ ತೀರ್ಪು ಪ್ರಕಟಿಸಿದ್ದರು. ನ್ಯಾಯಾಲಯದ ಆದೇಶ ಪ್ರತಿಗೆ ಆರೋಪಿಯಿಂದ ಸಹಿ ಪಡೆದು, ಆದೇಶದ ಪ್ರತಿ ನೀಡಿ, ಕಟಕಟೆಯಲ್ಲಿ ನಿಲ್ಲುವಂತೆ ಸೂಚಿಸಿದಾಗ ಚಾಂದಲಿಂಗಪ್ಪ ಎಸ್.ಬಾರಕೇರ ನ್ಯಾಯಾಲಯದಿಂದ ಪರಾರಿಯಾಗಿದ್ದಾನೆ.
ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ