ಒಂದೇ ವಾರದಲ್ಲಿ 70ಕ್ಕೂ ಹೆಚ್ಚು ಕುರಿಗಳ ಸಾವು
Team Udayavani, Aug 10, 2019, 4:11 PM IST
ಶಿರಹಟ್ಟಿ: ಮಳೆಯಿಂದ ತಾಲೂಕಿನ ದೇವಿಹಾಳ ಗ್ರಾಮದ ಹತ್ತಿರ ಬೀರಪ್ಪ ವಿಟ್ಟಪ್ಪ ಎಂಬ ಕುರಿಗಾಹಿಯ ಐದು ಕುರಿ ಮೃತಪಟ್ಟಿವೆ.
ಶಿರಹಟ್ಟಿ: ತಾಲೂಕಿನಲ್ಲಿ ಬಿಟ್ಟು ಬಿಡದೆ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ಕುರಿ ಹಾಗೂ ಮೇಕೆಗಳು ಸಾಲು ಸಾಲಾಗಿ ಸಾಯುತ್ತಿವೆ.
ತಾಲೂಕಿನ ದೇವಿಹಾಳ ಗ್ರಾಮದ ಹತ್ತಿರ ಹಾನಗಲ್ ತಾಲೂಕಿನ ಮಹರಾಜಪೇಟೆ ಗ್ರಾಮದ ಬೀರಪ್ಪ ವೀಟ್ಟಪ್ಪ ಎಂಬ ಕುರಿಗಾಹಿಯ ಐದು ಕುರಿಗಳು ಶುಕ್ರವಾರ ಮೃತಪಟ್ಟಿವೆ. ಸ್ಥಳಕ್ಕೆ ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣನವರ ನೇತೃತ್ವದಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣನವರ ಮಾತನಾಡಿ, ತಾಲೂಕಿನಾದ್ಯಂತ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ಒಂದೇ ವಾರದಲ್ಲಿ 70ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ. ಆದ್ದರಿಂದ ಕುರಿಗಾಹಿಗಳು ತಮ್ಮ ಜೀವನದ ಜೊತೆಗೆ ಕುರಿಗಳ ರಕ್ಷಣೆಗೆ ಮುಂದಾಗಬೇಕು. ಬಯಲು ಪ್ರದೇಶದಲ್ಲಿ ಬಿಡಾರ ಹುಡದೆ ಮನೆ, ಗೋದಾಮು ಸೇರಿದಂತೆ ಬೆಚ್ಚಗಿನ ಜಾಗದಲ್ಲಿ ಬಿಡಾರ ಹಾಕಬೇಕು. ಇಲ್ಲದಿದ್ದರೆ ಮಳೆ ಹಾಗೂ ಗಾಳಿಯ ರಭಸದಿಂದ ಇನ್ನಷ್ಟು ಕುರಿಗಳಿಗೆ ಸೇಡು ಹತ್ತಿ ಹಸುನಿಗಬಹುದು. ಆದ್ದರಿಂದ ಕುರಿಗಾಹಿಗಳು ಕುರಿಗಳ ರಕ್ಷಣೆಗೆ ಮುಜಾಗೃತ ಕ್ರಮ ಕೈಗೊಳ್ಳಬೇಕು. ಸತ್ತ ಕುರಿಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕಲ್ಪಿಸಲು ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಪಶು ವೈದ್ಯಾಧಿಕಾರಿ ನಿಂಗಪ್ಪ ಓಲೇಕಾರ, ಕಂದಾಯ ನಿರೀಕ್ಷಕ ಎಸ್.ಎಸ್. ಮಗದುಂ ಸೇರಿದಂತೆ ಕುರಿಗಾಯಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ
Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್
Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ