ಆರು ದಶಕಗಳಿಂದ ವೃದ್ಧೆ ಗಣೇಶ ಮೂರ್ತಿ ಸೇವೆ


Team Udayavani, Aug 30, 2019, 11:29 AM IST

gadaga-tdy-2

ನರಗುಂದ: ಪಟ್ಟಣದ 80 ವರ್ಷ ವಯಸ್ಸಿನ ವೃದ್ಧೆ ಶಂಕ್ರವ್ವ ಕಾಂಬಳೆ ಬಾಲ್ಯದಿಂದಲೇ ಗಣೇಶ ಮೂರ್ತಿ ತಯಾರಿಸುವ ಕಲೆ ರೂಢಿಸಿಕೊಂಡು ಕಳೆದ ಆರು ದಶಕಗಳಿಂದ ಇದನ್ನೇ ತಮ್ಮ ಜೀವನೋಪಾಯಕ್ಕೆ ಮುಡುಪಾಗಿರಿಸಿಕೊಂಡಿದ್ದಾರೆ.

ಶಂಕ್ರವ್ವ ಇದುವರೆಗೂ ಕೇವಲ ಮಣ್ಣಿನ ಮೂರ್ತಿಗೆ ಮಾತ್ರ ಆದ್ಯತೆ ನೀಡುವ ಮೂಲಕ ಸಾಂಪ್ರದಾಯಿಕತೆಗೆ ಹೆಚ್ಚಿನ ಒತ್ತು ಕೊಟ್ಟಿದ್ದಾರೆ.

60ಕ್ಕೂ ಹೆಚ್ಚು ವರ್ಷಗಳಿಂದ ಗಣೇಶ ಮೂರ್ತಿ ತಯಾರಿಕೆ ಶಂಕ್ರಮ್ಮಳ ಕುಟುಂಬಕ್ಕೆ ಜೀವನೋಪಾಯವಾಗಿದೆ. ಮಣ್ಣಿನ ಮೂರ್ತಿ ತಯಾರಿಕೆಗೆ ಮಾತ್ರ ಸೀಮಿತವಾದ ಅವರ ಕೈಚಳಕದಲ್ಲಿ ಅರಳಿದ ಗಣೇಶ ಮೂರ್ತಿಗಳು ಭಕ್ತರಿಂದ ಪೂಜಿಸಲ್ಪಡುತ್ತಿವೆ.ಪ್ರತಿ ವರ್ಷ ಸುಮಾರು 200ರಿಂದ 300 ಗಣೇಶ ಮೂರ್ತಿ ತಯಾರಿಸಿ ಮಾರಾಟ ಮಾಡುವ ಶಂಕ್ರಮ್ಮ ಈ ಬಾರಿ ಅತಿವೃಷ್ಠಿ ಬಾಧಿಸಿದ್ದರಿಂದ ಮಣ್ಣು ಸಿಗದೇ ವರ್ಷಕ್ಕಿಂತ ಕಡಿಮೆ ಪ್ರಮಾಣದ ಗಣೇಶ ಮೂರ್ತಿ ಸಿದ್ಧ ಮಾಡಿದ್ದಾರೆ. ಅತಿವೃಷ್ಠಿ ಹೊಡೆತಕ್ಕೆ ಹಳೆ ಮನೆ ಸೋರಿಕೆಯಿಂದ 50, 60 ಗಣೇಶ ಮೂರ್ತಿಗಳು ಹಾಳಾಗಿರುವ ನೋವು ಇವರಲ್ಲಿದೆ.

ಹಿಂದಿನಿಂದಲೂ ಪಟ್ಟಣದ ಕೆಂಪಗೇರಿ ಜಾಗದಲ್ಲಿ ಮಣ್ಣು ತಂದು ಮೂರ್ತಿ ತಯಾರಿಸುತ್ತಿದ್ದೆವು. ಅಲ್ಲಿ ಜಲಾಶಯ ನಿರ್ಮಿಸಿದ ಬಳಿಕ ಬಾದಾಮಿ ತಾಲೂಕು ಮುತ್ತಲಗೇರಿ ಗ್ರಾಮದಿಂದ ಮಣ್ಣು ತರುತ್ತಿದ್ದೇವೆ. ಈ ಬಾರಿ ಮಳೆಯಿಂದಾಗಿ ಅಲ್ಲಿಯೂ ಮಣ್ಣು ಸಿಗಲಿಲ್ಲ. ಸಿಕ್ಕ ಒಂದಷ್ಟು ಮಣ್ಣಿನಿಂದ ಮೂರ್ತಿ ತಯಾರಿಸಿದ್ದೇವೆ ಎನ್ನುತ್ತಾರೆ ವೃದ್ಧೆ ಶಂಕ್ರಮ್ಮ ಕಾಂಬಳೆ.

ಒಟ್ಟಾರೆ ಪಿಒಪಿ ಮೂರ್ತಿಗಳಿಗೆ ಮಾರುಹೋಗದೇ ಕೇವಲ ಮಣ್ಣಿನ ಗಣೇಶ ಮೂರ್ತಿ ತಯಾರಿಕೆಯನ್ನೇ ಶಂಕ್ರಮ್ಮ ಕಾಂಬಳೆ ಜೀವನಕ್ಕೆ ಆಧಾರವಾಗಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-14

ಹಬ್ಬದ ಮೂಡ್‌ನ‌ಲ್ಲಿ ಸ್ಯಾಂಡಲ್‌ವುಡ್‌ ತಾರೆಯರು

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

tdy-7

ಗಂಗಾವತಿಯಲ್ಲಿ ಪೊಲೀಸ್ ಬಂದೋಬಸ್ತಿನಲ್ಲಿ ಸಡಗರದ ಗಣೇಶ ಚತುರ್ಥಿ ಆಚರಣೆ

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.