ರೈಲು ಯೋಜನೆಗೆ ಹೋರಾಟ ಅಗತ್ಯ


Team Udayavani, Aug 2, 2020, 11:03 AM IST

ರೈಲು ಯೋಜನೆಗೆ ಹೋರಾಟ ಅಗತ್ಯ

ಗಜೇಂದ್ರಗಡ: ಈ ಭಾಗಕ್ಕೆ ರೈಲು ಯೋಜನೆ ತರುವ ನಿಟ್ಟಿನಲ್ಲಿ ಸಂಸದರು, ಸಚಿವರು, ಹಾಲಿ ಮತ್ತು ಮಾಜಿ ಶಾಸಕರ ಒಳಗೊಂಡ ಪಕ್ಷಾತೀತ ಹೋರಾಟ ಸಮಿತಿ ರಚನೆ ಮಾಡುವ ಮೂಲಕ ಮೂಲ ಗದಗ-ವಾಡಿ ರೈಲು ಯೋಜನೆ ತರುವಲ್ಲಿ ಹೋರಾಟ ಹಮ್ಮಿಕೊಳ್ಳಲು ಸನ್ನದ್ಧರಾಗಬೇಕಿದೆ ಎಂದು ಪಟ್ಟಣದ ಮೈಸೂರ ಮಠದಲ್ಲಿ ಶನಿವಾರ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.

ಗದಗ ಜಿಲ್ಲೆಯ ಕಣಗಿನಹಾಳ-ಕೋಟುಮಚಗಿ- ನರೇಗಲ್ಲ-ನಿಡಗುಂದಿ-ಗಜೇಂದ್ರಗಡ-ಹನುಮಸಾ ಗರ-ಇಲಕಲ್ಲ ಮಾರ್ಗವಾಗಿ ಹಾದು ಹೋಗಬೇಕಿದ್ದ ಗದಗ-ವಾಡಿ ರೈಲು ಮಾರ್ಗವನ್ನು ಬದಲಾಯಿಸಿ, ಕೊಪ್ಪಳ ಜಿಲ್ಲೆಯ ತಳಕಲ್‌ ಮೂಲಕ ವಾಡಿಗೆ ಸೇರ್ಪಡೆ ಮಾಡಿರುವುದು, ಈ ಭಾಗಕ್ಕೆ ಬಹುದೊಡ್ಡ ಅನ್ಯಾಯವಾಗಿದೆ. 1910ರ ಬ್ರಿಟಿಷರ ಕಾಲದಲ್ಲೇ ಜಿಲ್ಲೆಯ 5 ಪ್ರದೇಶಗಳಲ್ಲಿ ಹಾದು ಹೋಗುವ ಯೋಜನೆ ರೂಪಿಸಲಾಗಿತ್ತು. ಆದರೀಗ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ದೂರಿದರು.

ಈ ಭಾಗದ ಜನತೆಯ ಬಹುದಿನದ ಬೇಡಿಕೆಯಾದ ಗದಗ-ವಾಡಿ ರೈಲು ಯೋಜನೆಗಾಗಿ ಪಕ್ಷಾತೀತ ಹೋರಾಟಕ್ಕೆ ಅಣಿಯಾಗುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಹಾವೇರಿ ಸಂಸದ ಶಿವಕುಮಾರ ಉದಾಸಿ, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ ಹಾಗೂ ಜಿಲ್ಲೆಯ ಸಚಿವರು, ಹಾಲಿ ಮತ್ತು ಮಾಜಿ ಶಾಸಕರ ಒಳಗೊಂಡು ಮಹತ್ವ ಸಭೆ ಕರೆಯುವ ಮೂಲಕ ಪಕ್ಷಾತೀತ ಹೋರಾಟ ಸಮಿತಿ ರಚನೆ ಮಾಡಲಾಗುವುದು ಜೊತೆಗೆ ಇನ್ನೇರೆಡು ದಿನಗಳಲ್ಲಿ ತಾಲೂಕು ಸಮಿತಿ ರಚನೆ ಮಾಡುವ ಕುರಿತು ಸಭೆಯಲ್ಲಿ ಪಾಲ್ಗೊಂಡ ಎಲ್ಲರೂ ಒಮ್ಮತದ ನಿರ್ಣಯ ಕೈಗೊಂಡರು.  ಗದಗ ಮತ್ತು ಬಾಗಲಕೋಟೆ ಜಿಲ್ಲೆಯ ಜನತೆಯ ಆಶಾಕಿರಣವಾಗಿರುವ ರೈಲು ಯೋಜನೆಯಲ್ಲಿ ಯಾವುದೇ ರಾಜಕೀಯ, ಕೆಸರೆರಚಾಟ, ಪರಸ್ಪರ ಟೀಕೆಗಳನ್ನು ಮಾಡುವುದು ಕೈಬಿಡಬೇಕಿದೆ. ಇದು ನಮ್ಮ ಅಸ್ಮಿತೆಯಾಗಿದ್ದು, ನಾವೆಲ್ಲರೂ ಒಗ್ಗೂಡಿ, ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬೇಕಿದೆ ಎಂದರು.

ಬೆಟಗೇರಿ ರೇಲ್ವೆ ಹೋರಾಟ ಸಮಿತಿ ಅಧ್ಯಕ್ಷ ಗಣೇಶಸಿಂಗ್‌ ಬ್ಯಾಳಿ, ಕಾಂತಿಲಾಲ್‌ ಜೈನ್‌, ಮನೋಹರ ಬಡಿಗೇರ, ಅಶೋಕ ಬಾಗಮಾರ, ಡಾ| ಶಿವರಾಮ್‌ ದಾನಿ, ವೀರಣ್ಣ ಸೊನ್ನದ, ವೀರಣ್ಣ ಶೆಟ್ಟರ, ಶಶಿಧರ ಹೂಗಾರ, ಎಂ.ಎಸ್‌. ಹಡಪದ, ಬಿ.ಎಂ. ಸಜ್ಜನರ, ಎಚ್‌.ಎಸ್‌. ಸೋಂಪೂರ, ಅಶೋಕ ವನ್ನಾಲ, ರಾಜು ಸಾಂಗ್ಲಿಕಾರ, ರವೀಂದ್ರ ಹೊನವಾಡ, ಬಸವರಾಜ ಬಂಕದ, ಅಶೋಕ ಬೇವಿನಕಟ್ಟಿ, ಹನುಮಂತ ಅಬ್ಬಿಗೇರಿ, ವೆಂಕಟೇಶ ಮುದಗಲ್ಲ, ಮಾರುತಿ ಚಿಟಗಿ, ಬಿ.ಎಸ್‌. ಶೀಲವಂತರ, ಉಮೇಶ ರಾಠೊಡ, ಅಂಬರೀಶ ಬಳಿಗೇರ, ಪ್ರಭು ಚವಡಿ, ಬಾಲು ರಾಠೊಡ, ಮಾರುತಿ ಚಿಟಗಿ ಸೇರಿ ಇತರರಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.