ಮಲಪ್ರಭೆಗೆ-ಮಹದಾಯಿ ಜೋಡಣೆ ಆಗುವವರೆಗೂ ಹೋರಾಟ ನಿರಂತರ


Team Udayavani, Feb 22, 2020, 12:50 PM IST

gadaga-tdy-1

ಸಾಂಧರ್ಬಿಕ ಚಿತ್ರ

ನರಗುಂದ: ಜೀವ ಜಲಕ್ಕಾಗಿ ರೈತರ ಹೋರಾಟ ಕಡೆಗಣಿಸಿದ ವ್ಯಕ್ತಿಗಳಿಗೆ ಸರ್ವೋಚ್ಛ ನ್ಯಾಯಾಲಯ ಆದೇಶ ನೀತಿ ಪಾಠವಾಗಿದೆ. ಮಲಪ್ರಭೆಗೆ ತಾಯಿ ಮಹದಾಯಿ ಜೋಡಣೆಯಾಗುವವರೆಗೂ ನಮ್ಮ ಹೋರಾಟ ಅಚಲ ಎಂದು ರೈತ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಸ್ವಾಮೀಜಿ ಹೇಳಿದರು.

ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆಗೆ ಒತ್ತಾಯಿಸಿ ಶುಕ್ರವಾರ 1681ನೇ ದಿನ ನಿರಂತರ ಸತ್ಯಾಗ್ರಹ ವೇದಿಕೆಯಲ್ಲಿ ಮಾತನಾಡಿದ ಅವರು, ರೈತರ ಹೋರಾಟಕ್ಕೆ ನ್ಯಾಯಾಲಯ ನೆರವಾಗಿದೆ. ಇದನ್ನು ಸಂಪೂರ್ಣ ಸ್ವಾಗತಿಸುವುದಾಗಿ ತಿಳಿಸಿದರು. ಮಹದಾಯಿ ಯೋಜನೆ ಅನುಷ್ಠಾನಕ್ಕೆ ಇದೊಂದು ಜಯದ ಮೆಟ್ಟಿಲು. ಈ ವಿಜಯ ರೈತರಿಗೆ ಸೇರಿ ಹೋರಾಟ ಬೆಂಬಲಿಸಿದ ನಾಡಿನ ಎಲ್ಲ ಮಠಾಧಿಧೀಶರು, ಸಂಘಟನೆಗಳು, ಎಲ್ಲ ಸ್ತರದ ಸಾರ್ವಜನಿಕರು, ಅಗೋಚರವಾಗಿ ಕೈಜೋಡಿಸಿದ ನಾಡಿನ ಸಮಸ್ತ ಆರು ಕೋಟಿ ಜನರಿಗೆ ಸಲ್ಲುತ್ತದೆ ಎಂದರು. ಈಗಾಗಲೇ ಸರ್ವೋತ್ಛ ನ್ಯಾಯಾಲಯಕ್ಕೆ ಪಿಐಎಲ್‌ ಸಲ್ಲಿಸಿದ್ದೆವು. ಆದೇಶ ಪ್ರತಿ 2-3 ದಿನಗಳಲ್ಲಿ ಕೈಸೇರಲಿದೆ. ಬಳಿಕ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದೆ ಸರ್ವೋತ್ಛ ನ್ಯಾಯಾಲಯಕ್ಕೆ ಹೋಗುವ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದರು.

ಮುನವಳ್ಳಿಯ ಗುರು ರಾಯನಗೌಡ್ರ ಮಾತನಾಡಿ, ಮಹದಾಯಿ ಯೋಜನೆಯನ್ನು ರಾಜಕಾರಣಿಗಳು ಚುನಾವಣೆಗೆ ಬಳಸಿಕೊಂಡರೂ ರೈತರಿಗೆ ಯಾವುದೇ ಸಹಕಾರ ನೀಡಲಿಲ್ಲ. ಅಂತಹ ರಾಜಕಾರಣಿಗಳಿಗೆ ತಕ್ಕಪಾಠ ಕಲಿಸಲು ರೈತ ಸಂಘಟನೆಗಳು ಗಟ್ಟಿಗೊಳ್ಳಬೇಕು. ಇಂದು ಕಟಾವು ಹಂತದಲ್ಲೇ ಕಡಲೆ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಗೊಂಡಿದ್ದು, ರೈತರ ಹೋರಾಟಕ್ಕೆ ಸಂದ ಜಯ ಎಂದರು.

ಮಲಪ್ರಭೆ ಹೋರಾಟ ಸಮನ್ವಯ ಸಮಿತಿ ಉಪಾಧ್ಯಕ್ಷ ರಮೇಶ ನಾಯ್ಕರ ಮಾತನಾಡಿ, ಈ ದೇಶದ ವ್ಯವಸ್ಥೆ ಬದಲಾಯಿಸುವ ಶಕ್ತಿ ಪೆನ್ನಿಗಿದೆ. ಅಂತಹ ಪೆನ್ನು(ಮಾಧ್ಯಮ) ಈ ಹೋರಾಟಕ್ಕೆ ಶಕ್ತಿ ತುಂಬಿದ್ದು ಸ್ಮರಣೀಯ. ಒಂದು ಹೋರಾಟದಲ್ಲಿ ಗೆಲುವಿಗೆ ಸಹನೆ, ತಾಳ್ಮೆ ಅಗತ್ಯ. ಅದು ಈ ಹೋರಾಟದಲ್ಲಿದೆ ಎಂದು ಹೇಳಿದರು.

ಬಿ.ಎಸ್‌.ಉಪ್ಪಾರ, ಆನಂದ ತೊಂಡಿಹಾಳ, ಹೇಮಕ್ಕ ಗಾಳಿ, ಮಾನಂದಮ್ಮ ಹಿರೇಮಠ, ಅಣ್ಣಪ್ಪಗೌಡ ದೇಸಾಯಿ, ವೀರಬಸಪ್ಪ ಹೂಗಾರ, ಮಲ್ಲಿಕಾರ್ಜುನಯ್ಯ ಹಿರೇಮಠ, ರಾಘವೇಂದ್ರ ಗುಜಮಾಗಡಿ ಮಾತನಾಡಿದರು. ಮಲಪ್ರಭೆ ಹೋರಾಟ ಸಮನ್ವಯ ಸಮಿತಿ ಕಾರ್ಯದರ್ಶಿ ಫಕೀರಪ್ಪ ಜೋಗಣ್ಣವರ, ವೆಂಕಪ್ಪ ಹುಜರತ್ತಿ, ಶಿವಾನಂದ ಹಳಕಟ್ಟಿ,  ಮನೇನಕೊಪ್ಪ, ಕಲ್ಲಪ್ಪ ಮೊರಬದ, ಮಾರುತಿ ಬಡಿಗೇರ, ವಾಸು ಚವ್ಹಾಣ, ವಿಶ್ವನಾಥ ಗುಡಿಸಾಗರ, ಎಚ್‌.ಸಿ.ಹಿರೇಹೊಳಿ, ಹನಮಂತ ಸರನಾಯ್ಕರ ಮತ್ತಿತರರಿದ್ದರು.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.