ಮಲಪ್ರಭೆಗೆ-ಮಹದಾಯಿ ಜೋಡಣೆ ಆಗುವವರೆಗೂ ಹೋರಾಟ ನಿರಂತರ


Team Udayavani, Feb 22, 2020, 12:50 PM IST

gadaga-tdy-1

ಸಾಂಧರ್ಬಿಕ ಚಿತ್ರ

ನರಗುಂದ: ಜೀವ ಜಲಕ್ಕಾಗಿ ರೈತರ ಹೋರಾಟ ಕಡೆಗಣಿಸಿದ ವ್ಯಕ್ತಿಗಳಿಗೆ ಸರ್ವೋಚ್ಛ ನ್ಯಾಯಾಲಯ ಆದೇಶ ನೀತಿ ಪಾಠವಾಗಿದೆ. ಮಲಪ್ರಭೆಗೆ ತಾಯಿ ಮಹದಾಯಿ ಜೋಡಣೆಯಾಗುವವರೆಗೂ ನಮ್ಮ ಹೋರಾಟ ಅಚಲ ಎಂದು ರೈತ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಸ್ವಾಮೀಜಿ ಹೇಳಿದರು.

ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆಗೆ ಒತ್ತಾಯಿಸಿ ಶುಕ್ರವಾರ 1681ನೇ ದಿನ ನಿರಂತರ ಸತ್ಯಾಗ್ರಹ ವೇದಿಕೆಯಲ್ಲಿ ಮಾತನಾಡಿದ ಅವರು, ರೈತರ ಹೋರಾಟಕ್ಕೆ ನ್ಯಾಯಾಲಯ ನೆರವಾಗಿದೆ. ಇದನ್ನು ಸಂಪೂರ್ಣ ಸ್ವಾಗತಿಸುವುದಾಗಿ ತಿಳಿಸಿದರು. ಮಹದಾಯಿ ಯೋಜನೆ ಅನುಷ್ಠಾನಕ್ಕೆ ಇದೊಂದು ಜಯದ ಮೆಟ್ಟಿಲು. ಈ ವಿಜಯ ರೈತರಿಗೆ ಸೇರಿ ಹೋರಾಟ ಬೆಂಬಲಿಸಿದ ನಾಡಿನ ಎಲ್ಲ ಮಠಾಧಿಧೀಶರು, ಸಂಘಟನೆಗಳು, ಎಲ್ಲ ಸ್ತರದ ಸಾರ್ವಜನಿಕರು, ಅಗೋಚರವಾಗಿ ಕೈಜೋಡಿಸಿದ ನಾಡಿನ ಸಮಸ್ತ ಆರು ಕೋಟಿ ಜನರಿಗೆ ಸಲ್ಲುತ್ತದೆ ಎಂದರು. ಈಗಾಗಲೇ ಸರ್ವೋತ್ಛ ನ್ಯಾಯಾಲಯಕ್ಕೆ ಪಿಐಎಲ್‌ ಸಲ್ಲಿಸಿದ್ದೆವು. ಆದೇಶ ಪ್ರತಿ 2-3 ದಿನಗಳಲ್ಲಿ ಕೈಸೇರಲಿದೆ. ಬಳಿಕ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದೆ ಸರ್ವೋತ್ಛ ನ್ಯಾಯಾಲಯಕ್ಕೆ ಹೋಗುವ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದರು.

ಮುನವಳ್ಳಿಯ ಗುರು ರಾಯನಗೌಡ್ರ ಮಾತನಾಡಿ, ಮಹದಾಯಿ ಯೋಜನೆಯನ್ನು ರಾಜಕಾರಣಿಗಳು ಚುನಾವಣೆಗೆ ಬಳಸಿಕೊಂಡರೂ ರೈತರಿಗೆ ಯಾವುದೇ ಸಹಕಾರ ನೀಡಲಿಲ್ಲ. ಅಂತಹ ರಾಜಕಾರಣಿಗಳಿಗೆ ತಕ್ಕಪಾಠ ಕಲಿಸಲು ರೈತ ಸಂಘಟನೆಗಳು ಗಟ್ಟಿಗೊಳ್ಳಬೇಕು. ಇಂದು ಕಟಾವು ಹಂತದಲ್ಲೇ ಕಡಲೆ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಗೊಂಡಿದ್ದು, ರೈತರ ಹೋರಾಟಕ್ಕೆ ಸಂದ ಜಯ ಎಂದರು.

ಮಲಪ್ರಭೆ ಹೋರಾಟ ಸಮನ್ವಯ ಸಮಿತಿ ಉಪಾಧ್ಯಕ್ಷ ರಮೇಶ ನಾಯ್ಕರ ಮಾತನಾಡಿ, ಈ ದೇಶದ ವ್ಯವಸ್ಥೆ ಬದಲಾಯಿಸುವ ಶಕ್ತಿ ಪೆನ್ನಿಗಿದೆ. ಅಂತಹ ಪೆನ್ನು(ಮಾಧ್ಯಮ) ಈ ಹೋರಾಟಕ್ಕೆ ಶಕ್ತಿ ತುಂಬಿದ್ದು ಸ್ಮರಣೀಯ. ಒಂದು ಹೋರಾಟದಲ್ಲಿ ಗೆಲುವಿಗೆ ಸಹನೆ, ತಾಳ್ಮೆ ಅಗತ್ಯ. ಅದು ಈ ಹೋರಾಟದಲ್ಲಿದೆ ಎಂದು ಹೇಳಿದರು.

ಬಿ.ಎಸ್‌.ಉಪ್ಪಾರ, ಆನಂದ ತೊಂಡಿಹಾಳ, ಹೇಮಕ್ಕ ಗಾಳಿ, ಮಾನಂದಮ್ಮ ಹಿರೇಮಠ, ಅಣ್ಣಪ್ಪಗೌಡ ದೇಸಾಯಿ, ವೀರಬಸಪ್ಪ ಹೂಗಾರ, ಮಲ್ಲಿಕಾರ್ಜುನಯ್ಯ ಹಿರೇಮಠ, ರಾಘವೇಂದ್ರ ಗುಜಮಾಗಡಿ ಮಾತನಾಡಿದರು. ಮಲಪ್ರಭೆ ಹೋರಾಟ ಸಮನ್ವಯ ಸಮಿತಿ ಕಾರ್ಯದರ್ಶಿ ಫಕೀರಪ್ಪ ಜೋಗಣ್ಣವರ, ವೆಂಕಪ್ಪ ಹುಜರತ್ತಿ, ಶಿವಾನಂದ ಹಳಕಟ್ಟಿ,  ಮನೇನಕೊಪ್ಪ, ಕಲ್ಲಪ್ಪ ಮೊರಬದ, ಮಾರುತಿ ಬಡಿಗೇರ, ವಾಸು ಚವ್ಹಾಣ, ವಿಶ್ವನಾಥ ಗುಡಿಸಾಗರ, ಎಚ್‌.ಸಿ.ಹಿರೇಹೊಳಿ, ಹನಮಂತ ಸರನಾಯ್ಕರ ಮತ್ತಿತರರಿದ್ದರು.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಜಿಲ್ಲಾದ್ಯಂತ ನೀರಿಗಾಗಿ ಹಾಹಾಕಾರ ಶುರು-ಅಂತರ್ಜಲ ಮಟ್ಟ ಕುಸಿತ

ಗದಗ: ಜಿಲ್ಲಾದ್ಯಂತ ನೀರಿಗಾಗಿ ಹಾಹಾಕಾರ ಶುರು-ಅಂತರ್ಜಲ ಮಟ್ಟ ಕುಸಿತ

crime (2)

Gadag: ಜಮೀನು ಮಾರಾಟದ ಹಣಕ್ಕಾಗಿ ತಂದೆಯನ್ನೇ ಕೊಂದ ಮಕ್ಕಳು

7-gadaga

Gadaga ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕಣ್ಗಾವಲು ಯೋಜನೆ ಜಾರಿ

Mundargi; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಕೊಲೆಗೈದು ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು!

Mundargi; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಕೊಲೆಗೈದು ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು!

ಧರ್ಮ ಪಾಲನೆಯಿಂದ ಶಾಂತಿ ಸಾಧ್ಯ; ಸಂಪತ್ತಿನೊಂದಿಗೆ ಶಿವಜ್ಞಾನವು ಮುಖ್ಯ

ಧರ್ಮ ಪಾಲನೆಯಿಂದ ಶಾಂತಿ ಸಾಧ್ಯ; ಸಂಪತ್ತಿನೊಂದಿಗೆ ಶಿವಜ್ಞಾನವು ಮುಖ್ಯ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.