ಹಿಜಾಬ್-ಕೇಸರಿ ವಿವಾದ ತಡೆಗೆ ಮುಂದಾಗಿ
ಸೌಹಾರ್ಧತೆಗೆ ಭಂಗ ತರುವಂತಹ ಖಂಡನಾರ್ಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ
Team Udayavani, Feb 12, 2022, 4:10 PM IST
ಗಜೇಂದ್ರಗಡ: ರಾಜ್ಯಾದ್ಯಂತ ಶಾಲಾ, ಕಾಲೇಜು ವಿದ್ಯಾರ್ಥಿಗಳಲ್ಲಿ ಕೋಮು ವಿಭಜನೆ ಉಂಟು ಮಾಡಿರುವ ಹಿಜಾಬ್-ಕೇಸರಿ ಶಾಲು ಅನಗತ್ಯ ವಿವಾದವನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಪ್ರಾಮಾಣಿಕವಾಗಿ ಮಧ್ಯ ಪ್ರವೇಶಿಸಬೇಕೆಂದು ಆಗ್ರಹಿಸಿ ಸಿಪಿಐಎಂ ಪಕ್ಷದ ಪದಾಧಿ ಕಾರಿಗಳು ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.
ಸದ್ಯ ರಾಜ್ಯದಲ್ಲಿ ಎದ್ದಿರುವ ಈ ವಿವಾದಕ್ಕೆ ಸರಕಾರ ಹಾಗೂ ಕೋಮುವಾದಿ ಸಂಘಟನೆಗಳು ಕಾರಣಗಳಾಗಿವೆ. ರಾಜ್ಯ ಸರ್ಕಾರ ಇವುಗಳನ್ನು ಪೋಷಿಸುತ್ತಿರುವುದರಿಂದ ವಿದ್ಯಾರ್ಥಿಗಳ ನಡುವೆ ಉದ್ದೇಶ ಪೂರ್ವಕ ವಿಭಜನೆ ಸೃಷ್ಟಿಸಲಾಗುತ್ತಿದೆ.
ಅಲ್ಪಸಂಖ್ಯಾತ ವಿದ್ಯಾರ್ಥಿನಿಯರಿಗೆ ಶಿಕ್ಷಣ ನಿರಾಕರಿಸುವಂತಹ ಮತ್ತು ವಿದ್ಯಾರ್ಥಿ ಸಮುದಾಯವನ್ನು ಕೋಮುವಾದಿ ನೆಲೆಯಲ್ಲಿ ವಿಭಜನೆ ಮಾಡುವ ದುರುದ್ದೇಶದಿಂದ ಮುಸ್ಲಿಂ ವಿದ್ಯಾರ್ಥಿನಿಯರು ಧರಿಸುವ ತಲೆ ವಸ್ತ್ರಕ್ಕೆ ವಿರುದ್ಧವಾಗಿ ಕೇಸರಿ ಶಾಲು ಧರಿಸುವಂತೆ ಹಿಂದೂ ವಿದ್ಯಾರ್ಥಿಗಳನ್ನು ಎತ್ತಿಕಟ್ಟುವ ಕೆಲಸವನ್ನು ಕೆಲವು ಹಿಂದುತ್ವದ ಮತೀಯ ವಾದಿ ಸಂಘಟನೆಗಳು ಮಾಡುತ್ತಿವೆ ಎಂದು ಟೀಕಿಸಿದರು.
ಇನ್ನು ಮುಸ್ಲಿಂ ಅಲ್ಪಸಂಖ್ಯಾತರಲ್ಲಿ ಹಿಂದುತ್ವ ಕೋಮುವಾದಿಗಳು ಮತ್ತು ರಾಜ್ಯ ಸರ್ಕಾರ ಸೃಷ್ಟಿಸಿರುವ ಆತಂಕದ ಪರಿಸ್ಥಿತಿ ಬಳಸಿಕೊಂಡು ವಿದ್ಯಾರ್ಥಿಗಳನ್ನು ಮತ್ತು ಜನತೆಯನ್ನು ಕೋಮುವಾದಿ ನೆಲೆಯಲ್ಲಿ ಕ್ರೋಢೀಕರಿಸಲು ಕೆಲವು ಮತಾಂಧ ಸಂಘಟನೆಗಳು ಪ್ರಯತ್ನಿಸುತ್ತಿವೆ. ಇದರಿಂದ ಸಮಾಜದಲ್ಲಿ ಕೋಮು ಸೌಹಾರ್ಧತೆಗೆ ತೀವ್ರ ಧಕ್ಕೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರವೇ ಸಂವಿಧಾನ ವಿರೋಧಿಯಾದ ಮತಾಂಧತೆಗೆ ಕುಮ್ಮಕ್ಕು ನೀಡುವ ಕಾಯ್ದೆಗಳ ಪರ ಕ್ರಮ ವಹಿಸುವ ಮೂಲಕ ಮತಾಂಧ ಶಕ್ತಿಗಳಿಗೆ ಕುಮ್ಮಕ್ಕು ನೀಡುತ್ತಿದೆ. ಅಲ್ಲದೇ, ವಿದ್ಯಾರ್ಥಿಗಳ ನಡುವೆ ಕೋಮು ವಿಭಜನೆಯನ್ನು ತೀವ್ರಗೊಳಿಸುವ ಉದ್ದೇಶದಿಂದ ಕೆಲವು ಸಚಿವರು ಮತ್ತು ಶಾಸಕರು ಸೌಹಾರ್ಧತೆಗೆ ಭಂಗ ತರುವಂತಹ ಖಂಡನಾರ್ಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೂಡಲೇ ಸರ್ಕಾರ ಇವುಗಳನ್ನು ತಡೆಗಟ್ಟಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಗ್ರೇಡ್-2 ತಹಶೀಲ್ದಾರ್ ಎಂ.ಆರ್. ಷಣ್ಮುಖ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಎಂ.ಎಸ್. ಹಡಪದ, ಫಯಜ್ ತೋಟದ, ಮಾರುತಿ ಚಿಟಗಿ, ಪೀರು ರಾಠೊಡ, ಬಾಲು ರಾಠೊಡ, ಮೈಬುಸಾಬ ಹವಾಲ್ದಾರ್, ಚನ್ನಪ್ಪ ಗುಗಲೋತ್ತರ, ನಜೀರ ಮಾಲ್ದಾರ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?