ಬಿಜೆಪಿಯಿಂದ ಜನರ ಬದುಕು ಬರ್ಬರ

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಜಿ.ಎಸ್‌.ಪಾಟೀಲ್‌ ಆರೋಪ

Team Udayavani, May 30, 2022, 2:33 PM IST

13

ಮುಂಡರಗಿ: ರೈತರು, ಯುವಕರು, ಕೂಲಿಕಾರ್ಮಿಕರಿಗೆ ಹಾಗೂ ಎಲ್ಲಾ ವರ್ಗದ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವುದರ ಜೊತೆಗೆ ಅಂಬೇಡ್ಕರ್‌ ಬರೆದ ಸಂವಿಧಾನಕ್ಕೆ ಚ್ಯುತಿ ಬಾರದಂತೆ ದೇಶ ಕಟ್ಟುವ ಕೆಲಸವನ್ನು ಕಾಂಗ್ರೆಸ್‌ ಪಕ್ಷ ಮಾಡಿದೆ. ಆದರೆ, ಬಿಜೆಪಿ ಸಂವಿಧಾನ ವಿರೋಧಿ ಕೃತ್ಯಗಳಲ್ಲಿ ತೊಡಗಿ ಸಮಾಜದಲ್ಲಿನ ಸಾಮರಸ್ಯಕ್ಕೆ ಧಕ್ಕೆ ತರುತ್ತಿದೆ. ಬಿಜೆಪಿ ದುಬಾರಿ ಜೀವನಕ್ಕೆ ಎಡೆ ಮಾಡಿಕೊಟ್ಟು ಜನಸಾಮಾನ್ಯರ ಬದುಕು ಬರ್ಬರವಾಗುವಂತೆ ಮಾಡಿದೆ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಜಿ.ಎಸ್‌ .ಪಾಟೀಲ್‌ ಆರೋಪಿಸಿದರು.

ತಾಲೂಕಿನ ಡಂಬಳ ಗ್ರಾಮದ ತೋಂಟದಾರ್ಯ ಕಲಾಭವನದ ಆವರಣದಲ್ಲಿ ಮುಂಡರಗಿ ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಮುಂಚೂಣಿ ಘಟಕಗಳ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯದಲ್ಲಿ ಪಕ್ಷ 75 ಲಕ್ಷ ಸದಸ್ಯರ ಸದಸ್ಯತ್ವ ಹೊಂದಿದೆ. ಪ್ರತಿ ಬೂತ್‌ ಮಟ್ಟದಲ್ಲಿ ಜೂ.10ರೊಗಳಗೆ ಪದಾಧಿಕಾರಿಗಳು 25 ಸದಸ್ಯರನ್ನು ನೇಮಕ ಮಾಡಬೇಕು. ಹಿಂದೂ, ಮುಸ್ಲಿ ಎನ್ನದೆ ಯಾವುದೇ ಸಮಾಜಕ್ಕೆ ಧಕ್ಕೆ ಬಂದಾಗ ಅವರ ಪರ ಕಾಂಗ್ರೆಸ್‌ ಪಕ್ಷ ಗಟ್ಟಿಯಾಗಿ ನಿಲ್ಲುವುದರ ಮೂಲಕ ದೇಶದಲ್ಲಿ ಸಮಾನತೆಗಾಗಿ ಶ್ರಮಿಸುತ್ತಿದೆ ಎಂದು ಹೇಳಿದರು.

ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಮಾತನಾಡಿ, ದೇಶದಲ್ಲಿ ಕಾಂಗ್ರೆಸ್‌ ಪಕ್ಷ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿದೆ. ಸಿಂಗಟಾಲೂರ ಏತ ನೀರಾವರಿಯೊಂದಿಗೆ ಪ್ರತಿ ಹಳ್ಳಿಯ ಕೆರೆಗಳನ್ನು ತುಂಬಿಸುವುದರ ಮೂಲಕ ಈ ಭಾಗದ ರೈತರನ್ನು ಆರ್ಥಿಕವಾಗಿ ಸ್ಥಿತಿವಂತರನ್ನಾಗಿ ಮಾಡಿದ ಶ್ರೇಯಸ್ಸು ಕಾಂಗ್ರೆಸ್‌ ಪಕ್ಷದ್ದಾಗಿದೆ. ಆದರೆ, 2 ಕೋಟಿ ಯುವಕರಿಗೆ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿದ್ದ ಬಿಜೆಪಿ, ಇವತ್ತು ಆಡಳಿತದ ವೈಫಲ್ಯದಿಂದಾಗಿ ಶೇ.35 ರಷ್ಟು ಉದ್ಯೋಗವನ್ನು ಕಳೆಕೊಳ್ಳುವಂತಾಗಿದೆ. ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗೀಕರಣ, ಗ್ಯಾಸ್‌, ಪೆಟ್ರೋಲ್‌, ಡೀಸೆಲ್‌, ಮನೆ ಬಳಕೆ ವಸ್ತುಗಳು ಗಗನಕ್ಕೇರುವಂತೆ ಮಾಡಿರುವುದೇ ಬಿಜೆಪಿ ಪಕ್ಷದ ಸಾಧನೆಯಾಗಿದೆ ಎಂದು ದೂರಿದರು.

ಸಹಕಾರ ವಿಭಾಗದ ಕೋ-ಚೇರ್ಮನ್‌ ಶಿವಕುಮಾರಗೌಡ ಪಾಟೀಲ್‌ ಮಾತನಾಡಿ, ಬಿಜೆಪಿ ಆಡಳಿತದ ವಿಫಲತೆಯಿಂದ ಪ್ರತಿಯೊಂದು ವಸ್ತುಗಳ ಬೆಲೆ ಗಗನಕ್ಕೇರುವಂತಾಗಿ, ಜನಸಾಮಾನ್ಯರ ಬದುಕು ದುಸ್ತರವಾಗಿದೆ. ನಿಜವಾದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವ ಹಾಗೆ ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ, ವಿಶ್ವವಿದ್ಯಾಲಯ ನೇಮಕಾತಿಯಲ್ಲಿ ಭ್ರಷ್ಟಾಚಾರ, ಗುತ್ತಿಗೆದಾರರಿಂದ ಕಮಿಷನ್‌ ಹಣಕ್ಕಾಗಿ ಬೇಡಿಕೆ ಹೀಗೆ ಭ್ರಷ್ಟಾಚಾರವನ್ನೇ ಹೊದ್ದು ಮಲಗಿರುವುದು ಬಿಜೆಪಿ ಸಾಧನೆಯಾಗಿದೆ. ಇದನ್ನು ನೋಡುತ್ತಿರುವ ಜನತೆ ಮುಂದಿನ ದಿನಮಾನಗಳಲ್ಲಿ ಬಿಜೆಪಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.

ಸುಜಾತಾ ದೊಡ್ಡಮನಿ, ನಾಗರಾಜ ಗುರಿಕಾರ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿ.ಆರ್‌. ಗುಡಿಸಾಗರ, ರಾಮಚಂದ್ರ ಕಲಾಲ, ಐ.ಎಸ್‌ .ಪೂಜಾರ, ಬಸವರಾಜ ಮುಂಡವಾಡ, ರುದ್ರಗೌಡ ಪಾಟೀಲ್‌, ಎಸ್‌.ಡಿ.ಮಕಾಂದಾರ, ನೀಲಮ್ಮ ಬೋಳನ್ನವರ, ಕುಮಾರಸ್ವಾಮಿ ಹಿರೇಮಠ, ಜ್ಯೋತಿ ಕುರಿಯವರ, ಶೋಭಾ ಮೇಟಿ, ಮಹೇಶ ಕೋರ್ಲಹಳ್ಳಿ, ಹೇಮಂತಗೌಡ ಪಾಟೀಲ್‌, ವಿ.ಟಿ.ಮೇಟಿ, ಮರಿಯಪ್ಪ ಸಿದ್ದಣ್ಣವರ, ಜಾಕೀರ ಮೂಲಿಮನಿ, ಬಸುರಡ್ಡಿ ಬಂಡಿಹಾಳ, ಅಶೋಕ ಹಡಪದ, ಪುಲಿಕೇಶಗೌಡ, ಮಹೇಶ ಹೋಳೆಯಾಚಿ, ಅಮರಗೋಳ ಹಾಲನಗೌಡ, ಅಮರೇಶ ಹಿರೇಮಠ, ಯಲ್ಲಪ್ಪಗೌಡ ಕರಿಮುಡಿ, ಸತ್ಯಪ್ಪ ಪೂಜಾರ, ಪ್ರಕಾಶ ಸಜ್ಜನರ, ನಾಗರಾಜ ಸಜ್ಜನರ, ಕಬೇರ ನಾಯಕ, ಗಣೇಶ ರಾಠೊಡ, ರವಿ ಜವಿ, ಪಕ್ಷದ ಕಾರ್ಯಕರ್ತರು ಇದ್ದರು. ವಿಶ್ವನಾಥ ಪಾಟೀಲ ನಿರೂಪಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.