ಮಧುವಣಗಿತ್ತಿಯಂತೆ ಶೃಂಗಾರಗೊಂಡ ಮಾದರಿ ಮತಗಟ್ಟೆ


Team Udayavani, Apr 23, 2019, 2:06 PM IST

gad-4

ಅಕ್ಕಿಆಲೂರು: ಏ. 23ರಂದು ನಡೆಯಲಿರುವ ಲೋಕಸಭೆ ಚುನಾವಣೆ ನಿಮಿತ್ತ ಮತದಾರರನ್ನು ಮತದಾನ ಕೇಂದ್ರಗಳತ್ತ ಸೆಳೆಯುವ ಉದ್ಧೇಶದಿಂದ ಇಲ್ಲಿನ ಗ್ರಾಪಂ ಮತಗಟ್ಟೆ ಮಾದರಿ ಮತಗಟ್ಟೆಯಾಗಿ ಆಯ್ಕೆಯಾಗಿದ್ದು, ಗ್ರಾಪಂ ಆವರಣದಲ್ಲಿ ಮಾದರಿ ಮತಗಟ್ಟೆ ನಿರ್ಮಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಲಯ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ.

ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ಮತ್ತು ವಿಕಲಚೇತನರ ಕೊಠಡಿ, ವಿಶ್ರಾಂತಿ ಕೊಠಡಿ, ಮತಗಟ್ಟೆ ಅಧಿಕಾರಿಗಳ ಕೊಠಡಿಗಳು ಕೈಬೀಸಿ ಕರೆಯುವಂತೆ ಸಿಂಗಾರಗೊಂಡಿರುವ ಗ್ರಾಪಂ ಆವರಣ, ವಿಶೇಷ ಆಸನಗಳ ವ್ಯವಸ್ಥೆ ಸೇರಿದಂತೆ ಇನ್ನಿತರ ವಿಶೇಷ ಸೌಲಭ್ಯಗಳನ್ನು ಮಾದರಿ ಮತಗಟ್ಟೆ ಒಳಗೊಂಡಿದ್ದು, ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಸದ್ಯ ಮತದಾರರನ್ನು ತನ್ನತ್ತ ಆಕರ್ಷಿಸುತ್ತಿದೆ.

ಗ್ರಾಮ ಪಂಚಾಯಿತಿ ಆಡಳಿತ ವರ್ಗ ಮತ್ತು ಸಿಬ್ಬಂದಿ ವರ್ಗದವರು ತಮ್ಮ ಇಚ್ಛಾಶಕ್ತಿಯಿಂದ ನಿರ್ಮಿಸಿರುವ ಈ ಮಾದರಿ ಮತಗಟ್ಟೆ ಮತ ಚಲಾವಣೆ ಮಾಡಲು ಹಿಂದೇಟು ಹಾಕುವ ಮತದಾರರಿಗೆ ಮತದಾನದ ಮಹತ್ವ ತಿಳಿಸಲು ಸನ್ನದ್ಧವಾಗಿ ನಿಂತಿದೆ. ತಾಲೂಕಿಗೆ ಒಂದರಂತೆ ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಇಲ್ಲಿನ ಗ್ರಾಪಂ ಕಾರ್ಯಾಲಯ ವಿಶೇಷ ಮತಗಟ್ಟೆಯಾಗಿ ನಿರ್ಮಾಣಗೊಂಡಿದೆ.

ಮಾದರಿ ಮತಗಟ್ಟೆಯಲ್ಲಿ ಎಲ್ಲ ಸೌಕರ್ಯಗಳೂ ಶಿಸ್ತುಬದ್ಧವಾಗಿ ನಿರ್ಮಾಣಗೊಂಡಿದ್ದು, ಮತದಾನದ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಆಕರ್ಷಣೆಯಾಗಿದೆ. ಗ್ರಾಪಂ ಕಾರ್ಯಾಲಯವೂ ಕೂಡ ಮದುವೆ ಮನೆಯಂತೆ ಸಿಂಗಾರಗೊಂಡಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಂಪೂರ್ಣವಾಗಿ ಬಿಳಿ ಬಟ್ಟೆ, ಬಲೂನ್‌, ಪ್ರತ್ಯೇಕ ಆಸನಗಳ ವ್ಯವಸ್ಥೆ, ಫ್ಯಾನ್‌ ಸೇರಿದಂತೆ ಆಕರ್ಷಣೆಗೆ ಪ್ರಾಮುಖ್ಯತೆ ನೀಡಲಾಗಿದೆ.

ಗಾರ್ಡನ್‌ ಪ್ರಮುಖ ಆಕರ್ಷಣೆ: ತಾಲೂಕಿನಲ್ಲಿ ಅತ್ಯಂತ ಸುಂದರವಾದ ಗ್ರಾಪಂ ಕಾರ್ಯಾಲಯವಾಗಿ ಅಕ್ಕಿಆಲೂರು ಗ್ರಾಪಂ ರೂಪುಗೊಂಡಿದ್ದು, ಇಲ್ಲಿ ಸುತ್ತಲೂ ನಿರ್ಮಿಸಲಾಗಿರುವ ಗಾರ್ಡನ್‌ನಿಂದಾಗಿ ಮಾದರಿ ಮತಗಟ್ಟೆಯನ್ನು ಇಲ್ಲಿಯೆ ಸ್ಥಾಪಿಸಿಲಾಗಿದ್ದು ಮತದಾರರನ್ನು ಆಕರ್ಷಿಸುತ್ತಿದೆ. ಮತದಾನಕ್ಕಾಗಿ ಬರುವ ಮತದಾರರಿಗೆ ಬಿಸಿಲು ಕಾಡದಂತೆ ಪೆಂಡಾಲ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಒಟ್ಟಾರೆ ಮತದಾನದ ಜಾಗೃತಿ ಮತ್ತು ಮತದಾನದ ಪ್ರಮಾಣದಲ್ಲಿ ಹೆಚ್ಚಳ ತರುವುದು ಮಾದರಿ ಮತಗಟ್ಟೆಯ ಪ್ರಮುಖ ಉದ್ಧೇಶವಾಗಿದೆ.

ಮಾದರಿ ಮತಗಟ್ಟೆಯಾಗಿ ಅಕ್ಕಿಆಲೂರು ಗ್ರಾಪಂ ಕಾರ್ಯಾಲಯ ಆಯ್ಕೆಗೊಂಡಿರುವುದು ಸಂತಸ ತಂದಿದೆ. ಇಲ್ಲಿನ ಗಾರ್ಡನ್‌ ವ್ಯವಸ್ಥೆ, ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ, ಹಾಲ್ ವ್ಯವಸ್ಥೆ ಎಲ್ಲವನ್ನು ಪರಿಗಣಿಸಿ ಜಿಲ್ಲಾಡಳಿತ ಮಾದರಿ ಮತಗಟ್ಟೆ ಸ್ಥಾಪಿಸಲು ಅನುವು ಮಾಡಿಕೊಟ್ಟಿದೆ. ಮತದಾರರು ತಮ್ಮ ಹಕ್ಕು ಚಲಾಯಿಸುವ ಮೂಲಕ ಮತದಾನ ಪ್ರಮಾಣ ಹೆಚ್ಚಿಸಬೇಕಿದೆ.
• ಪಿ.ಎಸ್‌.ಬಿಜ್ಜೂರ, ಗ್ರಾಪಂ ಪಿಡಿಒ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.