ನಾಲ್ಕಕ್ಕೇರಿದ ಸೋಂಕಿತರ ಸಂಖ್ಯೆ


Team Udayavani, Apr 21, 2020, 3:52 PM IST

gadaga-tdy-1

ಗದಗ: ನಗರದಲ್ಲಿ ಮತ್ತೂಂದು ಕೋವಿಡ್ 19 ಪಾಸಿಟಿವ್‌ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ ನಾಲ್ಕಕ್ಕೆ ಏರಿದೆ. ಇಲ್ಲಿನ ರಂಗನವಾಡ ಗಲ್ಲಿಯಲ್ಲಿ ದಿನಕಳೆದಂತೆ ಸೋಂಕಿತ ಸಂಖ್ಯೆ ಹೆಚ್ಚುತ್ತಿದ್ದು, ಜಿಲ್ಲೆಯ ಹಾಟ್‌ ಸ್ಪಾಟ್‌ ಆಗುವತ್ತ ಸಾಗಿದೆ. ಪರಿಣಾಮ ಜಿಲ್ಲೆಯ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಮೂಡಿಸಿದೆ.

ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ವಾರ್ಡ್‌ ನಂ.31ರ ವ್ಯಾಪ್ತಿಯ ರಂಗನವಾಡ ಓಣಿಯ ನಿವಾಸಿ 24 ವರ್ಷದ ಯುವಕನಿಗೆ (ಪಿ.396) ಕೋವಿಡ್‌-19 ಸೋಂಕು ದೃಢಪಟ್ಟಿದೆ. ಇವರಿಗೆ ಪಿ-370 ಪ್ರಕರಣದ ದ್ವಿತೀಯ ಸಂಪರ್ಕದಿಂದ ಸೋಂಕು ಹರಡಿರಬಹುದು. ಈತನ ಮನೆಯಲ್ಲಿ ಒಟ್ಟು 8 ಜನರಿದ್ದು, ಅವರೆಲ್ಲರನ್ನೂ ಮುಂಜಾಗ್ರತಾ ಕ್ರಮವಾಗಿ ನಿಗಾದಲ್ಲಿರಿಸಲಾಗಿದೆ. ಈಗಾಗಲೇ ಅವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಸಿದಂತೆ ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರದ ಕೋವಿಡ-19 ನಿರ್ವಹಣೆ ನಿಯಮಗಳನ್ವಯ ಎಲ್ಲ ಮುನ್ನೆಚ್ಚರಿಕೆ ಕ್ರಮ ಜರುಗಿಸಿ ವ್ಯಕ್ತಿ (ಪಿ.396) ಇದ್ದ ಪ್ರದೇಶವನ್ನು ನಿಯಂತ್ರಿತ ಪ್ರದೇಶವಾಗಿ ಘೋಷಿಸಿ ಸಾರ್ವಜನಿಕರಿಗೆ ಆ ಪ್ರದೇಶದಿಂದ ಹೊರಗೆ ಅಥವಾ ಒಳಗೆ ಪ್ರವೇಶಿಸಿವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ದ್ವಿತೀಯ ಸಂಪರ್ಕದವರಿಗೆ ಸೋಂಕು : ನಗರದಲ್ಲಿ ಕಂಡುಬರುತ್ತಿರುವ ಕೊರೊನಾ ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕಕ್ಕಿಂತ ಹೆಚ್ಚು ದ್ವಿತೀಯ ಸಂಪರ್ಕದಲ್ಲಿದ್ದವರಿಗೆ ಹೆಚ್ಚು ಅಪಾಯಕಾರಿ ಎನಿಸಿದೆ. ಸತತ ಮೂರೂ ಪ್ರಕರಣಗಳಲ್ಲಿ ದ್ವಿತೀಯ ಸಂಪರ್ಕದಲ್ಲಿದ್ದವರಲ್ಲಿ ಸೋಂಕು ಕಂಡು ಬಂದಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

ಜಿಲ್ಲೆಯಲ್ಲಿ ಮೊದಲ ಬಾರಿಗೆ ಎ.7 ರಂದು ಮೊದಲ ಕೋವಿಡ್ 19 ಸೋಂಕು ಪತ್ತೆಯಾಗಿತ್ತು. ರಂಗನವಾಡದ 80 ವರ್ಷದ ವೃದ್ಧೆ (ಪಿ. 166) ಗೆ ದೃಢ ಪಟ್ಟಿತ್ತು. ದ್ವಿತೀಯ ಪ್ರಕರಣ ಏ.16ರಂದು 52 ವರ್ಷದ ಮಹಿಳೆ(ಪಿ.304) ಗೆ ಸೋಂಕು ಖಚಿತವಾಗಿತ್ತು. ಈಕೆಗೆ ಎದುರು ಮನೆಯ ಗೆಳತಿಯಾಗಿದ್ದ 80 ವರ್ಷದ ವೃದ್ಧೆ(ಪಿ.166) ಯಿಂದ ಹರಡಿತ್ತು.

ಎರಡನೇ ಪ್ರಕರಣದ ಮಹಿಳೆಯೊಂದಿಗೆ ದ್ವಿತೀಯ ಸಂಪರ್ಕದಲ್ಲಿದ್ದ 42 ವರ್ಷ (ಪಿ.370) ವ್ಯಕ್ತಿಗೆ ಸೋಂಕು ದೃಢವಾಗಿತ್ತು. ಇದೀಗ ಸೋಮವಾರ ಖಚಿತವಾಗಿರುವ ಯುವಕನಿಗೂ ದ್ವಿತೀಯ ಸಂಪರ್ಕದಿಂದ ಬಂದಿದೆ ಎನ್ನಲಾಗಿದೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ 82 ವರ್ಷದ ವೃದ್ಧೆಗೆ (ಪಿ.166) ಸೋಂಕು ಕಾಣಿಸಿಕೊಂಡಿತ್ತು. ಆದೇ, ಆ ಅಜ್ಜಿಗೆ ಸೋಂಕು ತಗುಲಿದ್ದು, ಯಾರಿಂದ ನಿಗೂಢವಾಗಿದೆ. ಇಲ್ಲಿನ ರಂಗನವಾಡಿಯ ಸೋಂಕಿತರಿಗೆ ಯಾವುದೇ ರೀತಿಯಲ್ಲಿ ಟ್ರಾವೆಲ್‌ ಇಸ್ಟರಿ ಇಲ್ಲ. ದೇಶ-ವಿದೇಶದಿಂದ ಆಗಮಿಸಿದವರೊಂದಿಗೂ ಸಂಪರ್ಕವಿಲ್ಲ. ಆದರೂ, ದಿನಕಳೆದಂತೆ ಕೊರೊನಾ ಪ್ರಕರಣಗಳು ದೃಢಪಡುತ್ತಿರುವುದು ನಾಗರಿಕರಲ್ಲಿ ಆತಂಕದ ಛಾಯೆ ಆವರಿಸಿದೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.