ವಾಸ್ತವದ ಅಂಶ ಜನಮನದಲ್ಲಿ ತುಂಬಿದ ನಿಜ ಶರಣ: ಯರನಾಳ
ಅಂಬಿಗರ ಚೌಡಯ್ಯ ಹೊಡೆದೋಡಿಸುತ್ತಲೇ ವಿಚಾರ ಪರವಾದ ವಾಸ್ತವದ ಅಂಶಗಳನ್ನು ಜನಮನದಲ್ಲಿ ಮೂಡಿಸಿದ್ದರು.
Team Udayavani, Jan 22, 2022, 5:56 PM IST
ಗದಗ: ಜಿಲ್ಲಾ ನಿಜಶರಣ ಅಂಬಿಗರ ಚೌಡಯ್ಯನವರ ಸೇವಾ ಟ್ರಸ್ಟ್, ಉಡಚಮ್ಮದೇವಿ ಯುವಕ ಸಂಘ ಸಂಯುಕ್ತಾಶ್ರಯದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ 902ನೇ ಜಯಂತ್ಯುತ್ಸವ ಕಾರ್ಯಕ್ರಮ ಜರುಗಿತು.
ಉಪನ್ಯಾಸ ನೀಡಿದ ಡಾ| ಗಣೇಶ ಸುಲ್ತಾನಪುರ, 12ನೇ ಶತಮಾನದ ಬಸವಣ್ಣವರ ಅನುಯಾಯಿ ಶರಣ ಸಾವಿರಾರು ವರ್ಷಗಳಿಂದ ಧರ್ಮ ದೇವರುಗಳ ಬಗ್ಗೆ ಜನ ಸಮೂಹದಲ್ಲಿದ್ದ ಮೂಢನಂಬಿಕೆಗಳನ್ನು ಅಂಬಿಗರ ಚೌಡಯ್ಯ ಹೊಡೆದೋಡಿಸುತ್ತಲೇ ವಿಚಾರ ಪರವಾದ ವಾಸ್ತವದ ಅಂಶಗಳನ್ನು ಜನಮನದಲ್ಲಿ ಮೂಡಿಸಿದ್ದರು.
ಜಿಲ್ಲಾಧ್ಯಕ್ಷ ಬಿ.ಎನ್.ಯರನಾಳ ಮಾತನಾಡಿ, ಜಿಲ್ಲೆಯಲ್ಲಿ ಸಮುದಾಯ ಭವನ ನಿರ್ಮಿಸಲಾಗುತ್ತಿದೆ. ವಿಧ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಮಾಡಲಾಗುವುದು. ಸಮುದಾಯದ ಜನರು ಕಟ್ಟಡ ನಿರ್ಮಾಣಕ್ಕೆ ನೆರವಾಗಬೇಕು ಎಂದು ಮನವಿ ಮಾಡಿದರು. ಉಪಾಧ್ಯಕ್ಷ ಸಿ.ಬಿ.ಬಾರಕೇರ ಮಾತನಾಡಿ, ನಮ್ಮ ಸಮುದಾಯ ಶಿಕ್ಷಣದಲ್ಲಿ ಸ್ವದ್ಯೋಗದಲ್ಲಿ ಮುಂದುವರೆಯಬೇಕು. ಆ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯ ಬಳಸಿಕೊಳ್ಳಲು ಜಾಗೃತರಾಗಬೇಕು ಎಂದು ಹೇಳಿದರು.
ಪ್ರಧಾನ ಕಾರ್ಯದರ್ಶಿ ಜೆ.ಬಿ.ಗಾರವಾಡ ಮಾತನಾಡಿ, ಜಿಲ್ಲಾ ಸಂಘಟನೆಯಿಂದ ಈಗಾಗಲೇ ಸಾಕಷ್ಟು ಕಾರ್ಯ ಚಟುವಟಿಕೆಗಳನ್ನು ಮಾಡಲಾಗಿದ್ದು, ಮಹಿಳಾ ಘಟಕ, ಯುವ ಘಟಕ ಹಾಗೂ ನೌಕರರ ಘಟಕಗಳನ್ನು ಸಂಘಟಿಸಲಾಗುವುದು ಎಂದು ತಿಳಿಸಿದರು.
ಈ ಸಂರ್ದರ್ಭದಲ್ಲಿ ಚಂದ್ರಶೇಖರ ಪೂಜಾರ, ಕೆ.ಎನ್ ಸುಣಗಾರ, ರವಿಕುಮಾರ ಸವಣ್ಣೂರ, ವಾಸಣ್ಣ ಲಕ್ಷೆಶ್ವರ, ಉಮೇಶ ಪೂಜಾರ, ಸುಭಾಷ ಕದಡಿ, ಸಂತೋಷ ಪೂಜಾರ, ರಾಮಣ್ಣ ಲಕ್ಷೆಶ್ವರ, ಅರ್ಜುನ ಪೂಜಾರ, ಮಾಲತೇಶ ಬಾರ್ಕಿ, ನಾಗರಾಜ ಗುಡಿಸಾಗರ, ರವಿ ಬಾರಕೇರ, ಶರಣಪ್ಪ ಅಬ್ಬಿಗೇರಿ, ವಿ.ಜಿ. ಬಾರಕೇರ, ಫಕ್ಕೀರಪ್ಪ ಲಕ್ಷೆಶ್ವರ, ಚಾಮರಾಜ ಪೂಜಾರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ