ಶಾಂತಗೇರಿ ಗ್ರಂಥಾಲಯಕ್ಕಿಲ್ಲ ಸ್ವಂತ ಕಟ್ಟಡ


Team Udayavani, Nov 29, 2019, 12:38 PM IST

gadaga-tdy-1

ಗಜೇಂದ್ರಗಡ: ಓದುಗರಿಗೆ ಅಕ್ಷರ ಜ್ಞಾನ ನೀಡಬೇಕಾಗಿದ್ದ ಗ್ರಂಥಾಲಯಕ್ಕೆ ಸ್ವಂತ ಕಟ್ಟಡವಿಲ್ಲದ ಪರಿಣಾಮ ದಿನಪತ್ರಿಕೆಗಳು ಹಾಗೂ ಪುಸ್ತಕಗಳನ್ನು ಬೇರೆ, ಬೇರೆ ಕಟ್ಟಡಗಳಲ್ಲಿ ಇರಿಸಲಾಗಿದ್ದು ಕಿರಿಕಿರಿಯನ್ನುಂಟು ಮಾಡಿದೆ.

ಇದು ಸಮೀಪದ ಶಾಂತಗೇರಿ ಗ್ರಾಮದಲ್ಲಿನ ಗ್ರಂಥಾಲಯದ ಪರಿಸ್ಥಿತಿ. ಈ ವಾಚನಾಲಯ 2007ರಲ್ಲಿ ಆರಂಭವಾಗಿದ್ದು, ಈ ಮೊದಲು ಗ್ರಾಮದ ಸಮಾಜ ಮಂದಿರದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಬಳಿಕ ಗ್ರಾಪಂನ ಮಳಿಗೆಗೆ ಸ್ಥಳಾಂತರಿಸಲಾಯಿತು.ಆದರೆ ಗ್ರಂಥಾಲಯಕ್ಕೆ ಈವರೆಗೂ ವಿಶಾಲವಾದ ಕಟ್ಟಡವಿಲ್ಲದ ಪರಿಣಾಮ ಗ್ರಾಪಂ ನೀಡಿರುವ ಸಣ್ಣ ಕೊಠಡಿಯಲ್ಲಿಯೇ ಗ್ರಂಥಾಲಯ ಸೇವೆನೀಡುತ್ತಿರುವುದರಿಂದ ಸ್ಥಳಾವಕಾಶ ಕೊರತೆಯಿಂದ ಓದುಗರು ತೊಂದರೆ ಅನುಭವಿಸುವಂತಾಗಿದೆ.

ಇಕ್ಕಟ್ಟಾದ ಜಾಗ: ಆರು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಈ ಗ್ರಾಮದಲ್ಲಿನ ಗ್ರಂಥಾಲಯದಲ್ಲಿ ಎರಡು ಸಾವಿರ ಪುಸ್ತಕಗಳಿವೆ. ಆದರೆ ಓದುಗರಿಗೆ ಮಾತ್ರ ಸಮರ್ಪಕ ರೀತಿಯಲ್ಲಿ ದೊರೆಯುತ್ತಿಲ್ಲ. ಓದುಗರು ಕುಳಿತುಕೊಳ್ಳಲು ಇಕ್ಕಟ್ಟಾದ ಜಾಗೆ,ಆಸನಗಳ ಕೊರತೆ, ಕುಡಿಯುವ ನೀರು ಸೇರಿ ಮೂಲ ಸೌಲಭ್ಯಗಳು ಮರೀಚಿಕೆಯಾಗಿದ್ದು, ಗ್ರಾಮೀಣ ಭಾಗದಲ್ಲಿನ ಗ್ರಂಥಾಲಯಗಳಿಗೆ ಇಷ್ಟೊಂದು ತಾತ್ಸಾರವೇಕೆ ಎನ್ನುವುದು ಗ್ರಾಮಸ್ಥರ ಪ್ರಶ್ನೆ.

ಪತ್ರಿಕೆ ಓದಲು ದೂರದ ಕೊಠಡಿಗೆ ತೆರಳುವ ಸ್ಥಿತಿ: ಗ್ರಂಥಾಲಯವೆಂದರೆ ಪುಸ್ತಕಗಳು, ಪತ್ರಿಕೆಗಳು ಒಂದೆಡೆ ಇರುವುದು ಸಾಮಾನ್ಯ. ಆದರೆ ಶಾಂತಗೇರಿ ಗ್ರಾಮದಲ್ಲಿನ ಗ್ರಂಥಾಲಯದ ಚಿತ್ರಣವೇ ಬೇರೆಯಾಗಿದೆ. ಜನರು ಪತ್ರಿಕೆಗಳನ್ನು ಓದಲು ಗ್ರಂಥಾಲಯದ ಪುಸ್ತಕಗಳ ಕೊಠಡಿ ಬಿಟ್ಟು 200 ಮೀ. ದೂರದ ಮತ್ತೂಂದು ಕೊಠಡಿಗೆ ತೆರಳಬೇಕಾದ ಪರಿಸ್ಥಿತಿ ಉದ್ಭವವಾಗಿದೆ. ಇವೆರಡನ್ನೂ ಒಂದೆಡೆ ಸೇರಿಸಿ ಎಂದು ಗ್ರಾಮಸ್ಥರು ಗ್ರಾಪಂಗೆ ಹಲವಾರು ಬಾರಿ ಮನವಿ ಮಾಡಿದರೂ ಸ್ಪಂದಿಸದಿರುವುದು ಓದುಗರ ಆಕ್ರೋಶಕ್ಕೆ ಕಾರಣವಾಗಿದೆ.

ಬಿರಕು ಬಿಟ್ಟ ಕೊಠಡಿ: ಗ್ರಂಥಾಲಯದ ಪುಸ್ತಕಗಳನ್ನು ಸಂಗ್ರಹಿಸಿಟ್ಟ ಕೊಠಡಿ ಈಗಾಗಲೇ ಬಿರುಕು ಬಿಟ್ಟಿದೆ. ಜೊತೆಗೆ ಮಳೆಗಾಲದಲ್ಲಿ ಸೋರುತ್ತದೆ. ಗ್ರಂಥಾಲಯಕ್ಕೆ ಸೂಕ್ತ ಕಟ್ಟಡ ನೀಡುವಲ್ಲಿ ಸ್ಥಳೀಯ ಆಡಳಿತ ಸಂಪೂರ್ಣ ನಿರ್ಲಕ್ಷಿಸಿರುವುದರಿಂದ ಗ್ರಂಥಾಲಯದ ಸದುಪಯೋಗ ಗ್ರಾಮಸ್ಥರಿಗೆ ಸಮರ್ಪಕ ರೀತಿಯಿಲ್ಲಿ ದೊರೆಯದಂತಾಗಿದೆ. ಕೇವಲ ಮೂರು ದಿನಪತ್ರಿಕೆಗಳನ್ನು ಹೊರತು ಪಡಿಸಿದರೆ, ಮಾಸ ಪತ್ರಿಕೆ, ವಾರ ಪತ್ರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳು ಮರೀಚಿಕೆಯಾಗಿವೆ. ಹೀಗಾಗಿ ಯುವಕರು ಪಟ್ಟಣದ ಗ್ರಂಥಾಲಯಕ್ಕೆ ಬಂದು ಓದುವ ಪರಿಸ್ಥಿತಿ ಎದುರಾಗಿದೆ.

ಮಾದರಿ ಗ್ರಂಥಾಲು ಮಾಡಿ: ಸ್ಥಳೀಯ ಆಡಳಿತ ಇಚ್ಛಾಶಕ್ತಿ ಪ್ರದರ್ಶಿಸಿ ಗ್ರಂಥಾಲಯಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗುವ ಪುಸ್ತಕಗಳು ಮತ್ತುಹೆಚ್ಚು ದಿನಪತ್ರಿಕೆಗಳಿಗೆ ಹಣ ನೀಡಲು ಮುಂದಾಗಿ ಗ್ರಾಮದ ಗ್ರಂಥಾಲಯವನ್ನು ಮಾದರಿಯಾಗಿ ಮಾಡಲು ಮುಂದಾಗಬೇಕೆನ್ನುವುದು ಗ್ರಾಮಸ್ಥರ ಒತ್ತಾಸೆಯಾಗಿದೆ.

ಇಲಾಖೆಯಿಂದ ಗ್ರಂಥಾಲಯಕ್ಕೆ ಸಮಯಕ್ಕೆ ಸರಿಯಾಗಿ ಅನುದಾನ ಬಿಡುಗಡೆಯಲ್ಲಿ ವಿಳಂಬವಾಗುತ್ತಿತ್ತು. ಈ ಕುರಿತು ಇಲಾಖೆ ಗಮನ ಸೆಳೆದ ಪರಿಣಾಮ ಅಕ್ಟೋಬರ್‌ ತಿಂಗಳಿಂದ ಗ್ರಂಥಪಾಲಕರ ವೇತನ ಸೇರಿ ಪತ್ರಿಕೆಗಳ ಬಿಲ್‌ನ್ನು ಸಹ ಗ್ರಾಪಂ ನೀಡಬೇಕೆಂದು ಆದೇಶ ಮಾಡಿದ್ದಾರೆ. ಹನಮಂತ ಕೊತಬಾಳ, ಗ್ರಂಥಾಲಯ ನಿರ್ವಾಹಕ

 

ಡಿ.ಜಿ. ಮೋಮಿನ್‌

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.