ದೇವಸ್ಥಾನಗಳು ಸಂಸ್ಕೃತಿ-ಪರಂಪರೆ ಪ್ರತೀಕ
•ಬಸಾಪುರ ಗ್ರಾಮದಲ್ಲಿ ನಂದಿಬಸವೇಶ್ವರ ದೇವಸ್ಥಾನ ಲೋಕಾರ್ಪಣೆ-ಸಾಮೂಹಿಕ ವಿವಾಹ
Team Udayavani, May 6, 2019, 3:54 PM IST
ಲಕ್ಷ್ಮೇಶ್ವರ: ಬಸಾಪುರದ ನಂದಿಬಸವೇಶ್ವರ ದೇವಸ್ಥಾನ ಲೋಕಾರ್ಪಣೆ ಸಮಾರಂಭವನ್ನು ಶಿರಹಟ್ಟಿಯ ಫಕ್ಕೀರ ಸಿದ್ಧರಾಮ ಶ್ರೀಗಳು ಉದ್ಘಾಟಿಸಿದರು. ನೊಣವಿನಕೆರೆ, ಮುಕ್ತಿಮಂದಿರ, ಗಂಜಿಗಟ್ಟಿ, ಮಳೆಮಲ್ಲಿಕಾರ್ಜುನ ಶ್ರೀಗಳಿದ್ದರು.
ಲಕ್ಷ್ಮೇಶ್ವರ: ದೇವಸ್ಥಾನಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆ ಪ್ರತೀಕವಾಗಿವೆ. ಮನಶಾಂತಿ, ಧರ್ಮಶಿಕ್ಷಣ, ಆಧ್ಯಾತ್ಮಿಕ ಉನ್ನತಿ, ಸನ್ಮಾರ್ಗ ಕರುಣಿಸುವ ಮತ್ತು ಸಾತ್ವಿಕ ಸಮಾಜ ನಿರ್ಮಾಣದ ಶಕ್ತಿ ಕೇಂದ್ರಗಳಾಗಿವೆ ಎಂದು ಶಿರಹಟ್ಟಿಯ ಫಕ್ಕೀರಸಿದ್ದರಾಮ ಸ್ವಾಮೀಜಿ ಹೇಳಿದರು.
ಬಸಾಪುರ ಗ್ರಾಮದಲ್ಲಿ ನಂದಿಬಸವೇಶ್ವರ ದೇವಸ್ಥಾನ ಲೋಕಾರ್ಪಣೆ, ಮೂರ್ತಿ ಪ್ರತಿಷ್ಠಾಪನೆ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮಗಳ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಕೋಟಿ ಕೋಟಿ ಸಂಪತ್ತು ಇದ್ದರೂ ದಾನ, ಧರ್ಮ, ಸಹಾಯ, ಸಹಕಾರ ಮಾಡುವುದರಿಂದ ಸಿಗುವ ಸಂತೃಪ್ತಿ ಬೇರೆಲ್ಲೂ ಲಭಿಸುವುದಿಲ್ಲ. ಮನುಷ್ಯ ಸಮಾಜಜೀವಿಯಾಗಿ ಧರ್ಮ, ಸಂಸ್ಕೃತಿ, ಪರಂಪರೆ ಉಳಿಸುವ ಕಾರ್ಯಕ್ಕೆ ಕೈ ಜೋಡಿಸಿದಾಗ ಮಾತ್ರ ಬದುಕು ಸಾರ್ಥಕತೆ ಹೊಂದುತ್ತದೆ. ಸಮಾಜ ನಮಗೇನು ಮಾಡಿದೆ ಎಂಬುದಕ್ಕಿಂತ ಸಮಾಜಕ್ಕೆ ನಮ್ಮದೇ ಆದ ಶ್ರೇಷ್ಠ ಕೊಡುಗೆ ಕೊಡುವ ವಿಶಾಲ ಮನೋಭಾವ ಹೊಂದಬೇಕು ಎಂದರು.
ಸಾನ್ನಿಧ್ಯ ವಹಿಸಿದ್ದ ಮುಕ್ತಿಮಂದಿರದ ವಿಮಲರೇಣುಕ ವೀರಮುಕ್ತಿಮುನಿ ಸ್ವಾಮೀಜಿ ಮತ್ತು ನೊಣವಿನಕೇರಿಯ ಕಾಡಸಿದ್ಧೇಶ್ವರ ಮಠದ ಕರಿವೃಷಭದೇಶಿಕೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿ, ಕಾಯಕದಲ್ಲಿ ನಿಷ್ಠೆ, ಧರ್ಮಾಚರಣೆ, ಪರೋಪಕಾರದಿಂದ ಮನಸ್ಸಿಗೆ ಶಾಂತಿ-ನೆಮ್ಮದಿ ದೊರೆತು ಸುಂದರ ಬದುಕು ನಮ್ಮದಾಗುತ್ತದೆ. ಮನುಷ್ಯ ತನ್ನ ಜೀವಿತಾವಧಿಯಲ್ಲಿ ಮಾಡುವ ಪುಣ್ಯ ಕಾರ್ಯಗಳು ಎಂದಿಗೂ ಸ್ಮರಣೀಯವಾಗಿರುತ್ತವೆ. ನೆಮ್ಮದಿಯ ಬದುಕಿಗೆ ಬೇಕಾಗಿದ್ದು ಆಹಾರ, ನಿದ್ದೆ ಮತ್ತು ಆತ್ಮ ಸಂತೋಷ. ಆದ್ದರಿಂದ ನಿತ್ಯ ಮಲಗುವಾಗ ನಾವು ಮಾಡಿದ ಕರ್ಮಗಳ ಬಗ್ಗೆ ಸ್ಮರಿಸಿಕೊಂಡು ಆತ್ಮಾವಲೋಕ್ಕೊಳಗಾಗಬೇಕು. ಪ್ರತಿಯೊಂದು ಸಾಂಪ್ರದಾಯಿಕ ಆಚರಣೆಗಳ ಹಿಂದೆ ವೈಜ್ಞಾನಿಕ ಸತ್ಯ ಅಡಗಿದೆ. ಆದ್ದರಿಂದ ನಮ್ಮ ಸಂಪ್ರದಾಯ, ಸಂಸ್ಕೃತಿ ಆಚರಣೆ ಮರೆಯಬಾರದು ಎಂದರು.
ಗಂಜಿಗಟ್ಟಿಯ ವೈಜನಾಥ ಶಿವಲಿಂಗೇಶ್ವರ ಸ್ವಾಮಿಗಳು, ಲಕ್ಷ್ಮೇಶ್ವರದ ಮಳೆ ಮಲ್ಲಿಕಾರ್ಜುನ ಸ್ವಾಮಿಗಳು ಉಪಸ್ಥಿತರಿದ್ದರು. ಬೆಳಗ್ಗೆ ದೇವಸ್ಥಾನದಲ್ಲಿ ಹೋಮ ಹವನ, ವಿಶೇಷ ಪೂಜೆ, ಕಳಸಾರೋಹಣ, ದೇವಿ ಮತ್ತು ಮಾರುತಿ ದೇವರ ಮೂರ್ತಿ ಪ್ರತಿಷ್ಠಾಪನೆ ನೆರವೇರಿಸಲಾಯಿತು. ಉಪಸ್ಥಿತರಿದ್ದ ಎಲ್ಲ ಶ್ರೀಗಳಿಗೂ ಏಕಕಾಲಕ್ಕೆ ಧನ, ದವಸ-ಧಾನ್ಯ, ಫಲ-ಪುಷ್ಪಗಳಿಂದ ಗ್ರಾಮಸ್ಥರು ತುಲಾಭಾರ ಸೇವೆ ಮಾಡಿದರು. 7 ಜೋಡಿ ಸಾಮೂಹಿಕ ಮದುವೆ ಮತ್ತು ದಾನಿಗಳಿಗೆ ಸನ್ಮಾನ ಮಾಡಲಾಯಿತು.
ಬಸವರಾಜ ಕೊಟಗಿ ಅಧ್ಯಕ್ಷತೆ ವಹಿಸಿದ್ದರು. ಫಕ್ಕೀರಯ್ಯ ಮುಳಗುಂದಮಠ, ಬಸವರಾಜ ಗಾಂಜಿ, ಬಸವರಾಜ ಹತ್ತಿಕಾಳ, ಡಾ| ಮುರುಗೆಪ್ಪ ಬಿಂಕದಕಟ್ಟಿ, ಕೆ.ಎಸ್. ಪಾಟೀಲ, ಡಿ.ಎಂ. ಕೋಡಳ್ಳಿ, ಬಸಣ್ಣ ಗಾಂಜಿ, ಎಫ್.ಟಿ. ಕಮಡೊಳ್ಳಿ, ಶಿವಪ್ಪ ಕಾಡಣ್ಣವರ, ಸಿದ್ದಪ್ಪ, ಬಸವಣ್ಣೆಪ್ಪ ತುಂಬಣ್ಣನವರ, ನಿಂಗಪ್ಪ ವಾಲಿಕಾರ, ದುಂಡಪ್ಪ ಹುಲಿಗೆಮ್ಮನವರ, ಮಹೇಶ ಲಮಾಣಿ, ಎಸ್.ಪಿ. ಬಳಿಗಾರ, ಬಸಣ್ಣ ಬೆಟಗೇರಿ, ಶಂಕ್ರಣ್ಣ ಕಾಳೆ, ಬಸಮ್ಮ ತಾಂಮ್ರಗುಂಡಿಮಠ, ಬಸವಣ್ಣೆಪ್ಪ ದೊಡ್ಡಮನಿ ಇನ್ನಿತರರಿದ್ದರು. ಮಲ್ಲಯ್ಯ ಭಕ್ತಿಮಠ, ಈಶ್ವರ ಮೆಡ್ಲೇರಿ, ಜಿ.ಎಸ್. ಗುಡಗೇರಿ, ರತ್ನಾ ಕುಂಬಾರ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ