ವಿಶ್ವಗುರು ಬಸವೇಶ್ವರರ ಮೌಲ್ಯಗಳು ಸಾರ್ವಕಾಲಿಕ

 ಕಾಯಕ-ದಾಸೋಹ ತತ್ವ ಜೀವನದಲ್ಲಿ ಅಳವಡಿಸಿಕೊಳ್ಳಿ : ಮೇಲ್ಮನೆ ಸದಸ್ಯ ಎಸ್‌.ವಿ.ಸಂಕನೂರ

Team Udayavani, May 4, 2022, 3:42 PM IST

16

ಗದಗ: ಸಮಾನತೆಯ ಹರಿಕಾರ ವಿಶ್ವಗುರು ಬಸವೇಶ್ವರರ ತತ್ವ, ಜೀವನ ಮೌಲ್ಯಗಳು ಸಾರ್ವಕಾಲಿಕ. ಅವರು ಸಾರಿದ ಕಾಯಕ ಮತ್ತು ದಾಸೋಹ ತತ್ವವನ್ನು ಪ್ರತಿಯೊಬ್ಬರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು, ಮೌಲ್ಯಯುತ ಬದುಕು ಕಟ್ಟಿಕೊಳ್ಳಬೇಕೆಂದು ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ ಕರೆ ನೀಡಿದರು.

ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಗರದ ಜ|ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಜರುಗಿದ ಜಗಜ್ಯೋತಿ ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನವರು 12ನೇ ಶತಮಾನದಲ್ಲಿಯೇ ಜಾತಿ, ಧರ್ಮ, ವರ್ಣ, ಲಿಂಗ ಭೇದವಿಲ್ಲದ ಸಮಾನತೆಯ ಸಮಾಜ ಸ್ಥಾಪಿಸಲು ಶ್ರಮಿಸಿದ್ದರು. ಜಾತಿ ಪದ್ಧತಿ ಮತ್ತು ಮೇಲು-ಕೀಳು ಎಂಬ ಭೇದಭಾವಗಳನ್ನು ಕಿತ್ತೂಗೆಯಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದರು.

ಬಸವೇಶ್ವರರು ಕಾಯಕ ಹಾಗೂ ದಾಸೋಹ ತತ್ವಗಳಲ್ಲಿ ಬಲವಾಗಿ ನಂಬಿಕೆ ಇಟ್ಟು, ಅದನ್ನು ಆಚರಣೆಗೆ ತಂದವರಲ್ಲಿ ಮೊದಲಿಗರು. ಸಮಾಜದಲ್ಲಿ ಯಾವುದೇ ಕೆಲಸ ಮೇಲು, ಕೀಳಿಲ್ಲ. ಕಾಯಕವೇ ಕೈಲಾಸ ಎಂದು ಕಾಯಕದ ಮಹತ್ವ ಸಾರಿದವರು. ನ್ಯಾಯಯುತವಾಗಿ ಕಾಯಕ ವೃತ್ತಿಯಲ್ಲಿ ಶ್ರಮವಹಿಸಿ ದುಡಿದು ಅದರಲ್ಲಿ ದಾನ, ದಾಸೋಹ ಮಾಡಬೇಕೆಂಬುದು ಅವರ ತತ್ವವಾಗಿತ್ತು. ಹಾಗಾಗಿ, ಇಂದಿನ ಯುವ ಪೀಳಿಗೆ ಕಾಯಕ ಮತ್ತು ದಾಸೋಹ ತತ್ವವನ್ನು ಜೀವನದಲ್ಲಿ ಅಳವಡಿಸೊಳ್ಳಬೇಕೆಂದು ಕರೆ ನೀಡಿದರು.

ಸ್ವರ್ಗ ನರಕಗಳು ಎಲ್ಲೂ ಇಲ್ಲ. ಅವು ನಾವು ಮಾಡುವ ಕಾಯಕದಲ್ಲೇ ಅಡಗಿವೆ. ಆಚಾರವೇ ಸ್ವರ್ಗ ಅನಾಚಾರವೇ ನರಕ ಎಂದು 12ನೇ ಶತಮಾನದಲ್ಲಿಯೇ ಸಮಾಜಕ್ಕೆ ತಿಳಿಸಿದ್ದಾರೆ. ಸತ್ಯ ಮತ್ತು ಅಹಿಂಸಾ ಮಾರ್ಗದಲ್ಲಿ ನಡೆಯಬೇಕು. ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ಒಳಿತನ್ನೇ ಮಾಡಬೇಕೆಂದರು.

ಬಸವೇಶ್ವರರು ಸಮಾಜದಲ್ಲಿ ಸಮಾನತೆ ಜಾರಿಗೊಳಿಸಲು ಅನುಭವ ಮಂಟಪ ಅನುಷ್ಠಾನಗೊಳಿಸಿದರು. ಜಗತ್ತಿಗೆ ಮಾದರಿಯಾಗಿಗೆ ಅಂದಿನ ಅನುಭವ ಮಂಟಪ ಪರಿಕಲ್ಪನೆ ಹಾಗೂ ಪ್ರಜಾಪ್ರಭುತ್ವದ ತಳಹದಿಯೇ ಈ ಅನುಭವ ಮಂಟಪ. ಬಲಿಷ್ಠ ಸಮಾಜ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಬಸವಣ್ಣನವರ ಸಂದೇಶಗಳು ಪೂರಕವಾಗಿವೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಮಾತನಾಡಿ, 800 ವರ್ಷಗಳ ಹಿಂದೆಯೇ ಬಾಳಿ ಬದುಕಿದವರು ಬಸವಣ್ಣನವರು. ಸಮಾನತೆ ಕುರಿತು ನಿರಂತರ ಹೋರಾಡಿದ ಮಹಾತ್ಮರು. ಬಸವೇಶ್ವರರ ವಚನಗಳನ್ನು ಓದುವ ಮೂಲಕ ಅವರನ್ನು ಅರ್ಥೈಸಿಕೊಳ್ಳಬೇಕು. ಇಂದಿನ ಯುವಕರು ಬಸವೇಶ್ವರರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಬಸವಣ್ಣನವರು ತೋರಿದ ಮಾರ್ಗದಲ್ಲಿ ನಡೆದು, ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕೆಂದರು.

ಎಫ್‌.ಎಂ.ಡಬಾಲಿ ಪದವಿ ಪೂರ್ವ ಕಾಲೇಜು ಉಪನ್ಯಾಸಕಿ ಸುಧಾ ಹುಚ್ಚಣ್ಣವರ ಉಪನ್ಯಾಸ ನೀಡಿದರು. ವೇದಿಕೆ ಮೇಲೆ ರಾಜ್ಯ ದ್ರಾಕ್ಷಾರಸ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾಂತಿಲಾಲ್‌ ಬನ್ಸಾಲಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ಉಪವಿಭಾಗಾ ಧಿಕಾರಿ ರಾಯಪ್ಪ ಹುಣಸಗಿ, ತೋಂಟದಾರ್ಯ ಮಠದ ಜಾತ್ರಾ ಸಮಿತಿ ಅಧ್ಯಕ್ಷ ಅಮರೇಶ್‌ ಅಂಗಡಿ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ ಇದ್ದರು.

ಬಸವೇಶ್ವರ ಭಾವಚಿತ್ರದ ಅದ್ಧೂರಿ ಮೆರವಣಿಗೆ: ಇದಕ್ಕೂ ಮುನ್ನ ಬಸವೇಶ್ವರ ಪುತ್ಥಳಿ ಆವರಣದಲ್ಲಿ ಜಗಜ್ಯೋತಿ ಬಸವೇಶ್ವರ ಭಾವಚಿತ್ರದ ಮೆರವಣಿಗೆಗೆ ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ ಚಾಲನೆ ನೀಡಿದರು. ಯಡಿಯೂರು ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದ ಡಾ|ತೋಂಟದ ಸಿದ್ಧರಾಮ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಆರಂಭವಾದ ಮೆರವಣಿಗೆ ಭೂಮರಡ್ಡಿ ಸರ್ಕಲ್‌, ಕೆ.ಎಚ್‌.ಪಾಟೀಲ ಸರ್ಕಲ್‌, ಬಸವೇಶ್ವರ ಸರ್ಕಲ್‌, ಟಾಂಗಾ ಕೂಟ ಸರ್ಕಲ್‌, ಮಹೇಂದ್ರಕರ ಸರ್ಕಲ್‌ ಮಾರ್ಗವಾಗಿ ಜ|ತೋಂಟದಾರ್ಯ ಕಲ್ಯಾಣ ಕೆಂದ್ರಕ್ಕೆ ಬಂದು ತಲುಪಿತು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.