ಪುಸ್ತಕಗಳಿಲ್ಲದ ಜಗತ್ತು ಅಂಧಕಾರದಲ್ಲಿರುತ್ತಿತ್ತು: ಸ್ವಾಮೀಜಿ

ಮಹಾಭಾರತ-ರಾಮಾಯಣಗಳು, 12ನೇ ಶತಮಾನದ ವಚನ ಸಾಹಿತ್ಯ ಇಂದಿಗೂ ಸ್ಫೂರ್ತಿಯ ಸೆಲೆಯಾಗಿವೆ

Team Udayavani, Apr 29, 2022, 6:43 PM IST

ಪುಸ್ತಕಗಳಿಲ್ಲದ ಜಗತ್ತು ಅಂಧಕಾರದಲ್ಲಿರುತ್ತಿತ್ತು: ಸ್ವಾಮೀಜಿ

ಗದಗ: ಎಷ್ಟು ಬಳಸಿದರೂ ನಶಿಸದ, ಬಳಸಿದಂತೆಲ್ಲಾ ಹೆಚ್ಚುವ ವಸ್ತು ಜ್ಞಾನ. ಅಂಥ ಜ್ಞಾನವನ್ನು ನೀಡುವ ಪುಸ್ತಕಗಳು ಇರದಿದ್ದರೆ, ಈ ಜಗತ್ತು ಇನ್ನೂ ಅಂಧಕಾರದಲ್ಲಿ ಇರುತ್ತಿತ್ತು ಎಂದು ಡಾ| ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.

ಲಿಂಗಾಯತ ಪ್ರಗತಿಶೀಲ ಸಂಘದ ಆಶ್ರಯದಲ್ಲಿ ನಗರದ ತೋಂಟದಾರ್ಯ ಮಠದಲ್ಲಿ 2586ನೇ ಶಿವಾನುಭವದಲ್ಲಿ “ವಿಶ್ವ ಪುಸ್ತಕ ದಿನ’ದ ಅಂಗವಾಗಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ಅನೇಕ ಸಾಧಕರು ಪುಸ್ತಕಗಳನ್ನು ಓದಿ ಜ್ಞಾನ ಸಂಪಾದಿಸಿ ಜಗತ್ತಿಗೆ ಬೆಳಕು ನೀಡಿದ್ದಾರೆ. ಜಗತ್ತು ಕಂಡ ಶ್ರೇಷ್ಠ ವ್ಯಕ್ತಿಗಳು ಪುಸ್ತಕಗಳಿಂದ ಪ್ರೇರೇಪಿತರಾಗಿದ್ದಾರೆ.

ಸಾವಿರಾರು ವರ್ಷಗಳ ಹಿಂದೆ ರಚಿಸಲ್ಪಟ್ಟ ಮಹಾಭಾರತ-ರಾಮಾಯಣಗಳು, 12ನೇ ಶತಮಾನದ ವಚನ ಸಾಹಿತ್ಯ ಇಂದಿಗೂ ಸ್ಫೂರ್ತಿಯ ಸೆಲೆಯಾಗಿವೆ. ವ್ಯಕ್ತಿತ್ವ ಗಟ್ಟಿಗೊಳಿಸಲು, ಬದುಕು ಕಟ್ಟಿಕೊಳ್ಳಲು ಓದುವುದು ಅವಶ್ಯಕ ಎಂದರು.

ಪ್ರಾಧ್ಯಾಪಕ ಡಾ| ದತ್ತಪ್ರಸನ್ನ ಪಾಟೀಲ ಉಪನ್ಯಾಸ ನೀಡಿ, ಆಂಗ್ಲ ಭಾಷೆಯ ಖ್ಯಾತ ಲೇಖಕ ವಿಲಿಯಂ ಶೇಕ್ಸ್‌ಪಿಯರ್‌ ನಿಧನ ಹೊಂದಿದ ದಿನವಾದ ಏ.23ನ್ನು 1995 ರಿಂದ ವಿಶ್ವ ಪುಸ್ತಕ ದಿನವೆಂದು ಆಚರಿಸುತ್ತಾ ಬರಲಾಗಿದೆ. ಯುನಿಸೆಫ್‌-ಯುನೆಸ್ಕೂಗಳು ಸಹ ಈ ಆಚರಣೆಗೆ ಒತ್ತು ಕೊಟ್ಟಿವೆ. ಮಸ್ತಕದ ಜ್ಞಾನವನ್ನು ಹೆಚ್ಚಿಸುವ ಪುಸ್ತಕಗಳು ವ್ಯಕ್ತಿತ್ವ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದರು. ಕನ್ನಡ ವಿಶ್ವ ವಿದ್ಯಾಲಯದಿಂದ ಪಿಎಚ್‌ಡಿ ಪದವಿ ಪಡೆದ ಉಪನ್ಯಾಸಕ ದತ್ತಪ್ರಸನ್ನ ಪಾಟೀಲರನ್ನು ಸನ್ಮಾನಿಸಲಾಯಿತು.

ಮೃತ್ಯುಂಜಯ ಹಿರೇಮಠ ಹಾಗೂ ಗುರುನಾಥ ಸುತಾರ ವಚನ ಸಂಗೀತ ನಡೆಸಿಕೊಟ್ಟರು. ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ದಾನಯ್ಯ ಗಣಾಚಾರಿ, ಪದಾಧಿಕಾರಿಗಳಾದ ಮುರುಘೇಶ ಬಡ್ನಿ, ರತ್ನಕ್ಕ ಪಾಟೀಲ, ವೀರೇಶ ಬುಳ್ಳಾ, ಸೋಮು ಪುರಾಣಿಕ, ಮಲ್ಲಿಕಾರ್ಜುನ ಖಂಡೆಮ್ಮನವರ, ಶಿವಬಸಪ್ಪ ಯಂಡಿಗೇರಿ, ಶಿವಾನುಭವ ಸಮಿತಿ ಚೇರಮನ್‌ ವಿವೇಕಾನಂದಗೌಡ ಪಾಟೀಲ ಇದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.