ವರ್ಷವಾದರೂ ದುರಸ್ತಿಯಾಗದ ನೀರಿನ ಘಟಕ


Team Udayavani, May 4, 2019, 2:17 PM IST

gad-4

ರೋಣ: ಪಟ್ಟಣದ ಹೃದಯ ಭಾಗವೆಂದು ಕರೆಯಿಸಿಕೊಳ್ಳುವ ಪೋತರಾಜನಕಟ್ಟೆಯ ಪಕ್ಕದಲ್ಲಿರುವ ಶುದ್ಧ ನೀರಿನ ಘಟಕ ಬಂದಾಗಿ ವರ್ಷ ಕಳೆದರೂ ಇಲ್ಲಿನ ಪುರಸಭೆ ಅದರ ರಿಪೇರಿಗೆ ಮುಂದಾಗಿಲ್ಲ. ಇದು ಇಲ್ಲಿನ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈಗ ಪಟ್ಟಣಕ್ಕೆ ಎಂಟು ದಿನಗಳಿಗೊಮ್ಮೆ ನೀರು ಪೂರೈಕೆಯಾಗುತ್ತಿದ್ದು, ನೀರಿಗಾಗಿ ಪಟ್ಟಣದ ಜನತೆ ಬೀದಿಗಿಳಿದು ಪ್ರತಿಭಟಿಸುವ ಸ್ಥಿತಿ ಬಂದೊದಗಿದೆ.

ಸದ್ಯ ಪಟ್ಟಣಕ್ಕೆ ಮಲಪ್ರಭಾ ನದಿಯಿಂದ ನೀರು ಪೂರೈಕೆಯಾಗುತ್ತಿದ್ದು, ಬಾದಾಮಿ ತಾಲೂಕಿನ ಚೊಳಚಗುಡ್ಡ ಗ್ರಾಮದ ಹತ್ತಿರವಿರುವ ಜಾಕ್‌ವೆಲ್ ಮೂಲಕ ಪಟ್ಟಣಕ್ಕೆ ನೀರನ್ನು ತಂದು ಇಲ್ಲಿ ಶುದ್ಧಿಕರಿಸಿ ನಂತರ ವಾರ್ಡ್‌ಗಳಿಗೆ ಪೂರೈಕೆ ಮಾಡಲಾಗುತ್ತದೆ. ಅಲ್ಲದೆ ಪಟ್ಟಣದಲ್ಲಿ ಒಟ್ಟು 42 ಬೋರ್‌ವೆಲ್ಗಳಿದ್ದು, ಅವುಗಳಲ್ಲಿ 31 ಚಾಲ್ತಿಯಲ್ಲಿವೆ.

ಕುಡಿಯುವ ನೀರಿನ ಇಲಾಖೆಯ ತಜ್ಞರು ಹೇಳುವಂತೆ ಒಂದು ಬೋರ್‌ವೆಲ್ನಿಂದ ಒಂದು ತಾಸಿಗೆ 4 ಸಾವಿರ ಲೀಟರ್‌ ನೀರು ಹೊರ ಬರುತ್ತದೆ. ಒಂದು ಬೋರ್‌ವೆಲ್ ದಿನಕ್ಕೆ 8 ಗಂಟೆ ಕೆಲಸ ಮಾಡುವ ಸಾಮರ್ಥ್ಯ ಹೊಂದಿದ್ದು, ಒಂದು ಬೋರ್‌ವೆಲ್ ದಿನಕ್ಕೆ 32 ಸಾವಿರ ಲೀಟರ್‌ ನೀರನ್ನು ಒದಗಿಸುತ್ತವೆ. ಒಟ್ಟು 31 ಬೋರ್‌ವೆಲ್ ಸೇರಿದರೆ ದಿನವೊಂದಕ್ಕೆ 10,24,000 ಲೀಟರ್‌ ನೀರು ಪೂರೈಕೆ ಮಾಡುವ ಸಾಮರ್ಥ್ಯ ಹೊಂದಿವೆ. ಇದು ಪಟ್ಟಣದ ಬೋರ್‌ವೆಲ್ಗಳಿಂದ ಸಿಗುವ ನೀರಿನ ಅಂಕಿ ಅಂಶವಾದರೆ, ಇನ್ನು ಚೊಳಚಗುಡ್ಡ ಜಾಕ್ವೆಲ್ನಲ್ಲಿ 50 ಎಚ್ಪಿ ಯಂತ್ರದ ಮೂಲಕ ನದಿಯಲ್ಲಿ ನೀರಿನ ಸಂಪನ್ಮೂಲ ಸರಿಯಾಗಿ ಇದ್ದರೆ ದಿನಕ್ಕೆ 10 ಲಕ್ಷ ಲೀಟರ್‌ ನೀರು ಪೂರೈಕೆ ಮಾಡ ಬಹುದಾಗಿದೆ.

ಪುರಸಭೆ ಮೇಲೆ ಸಂಶಯ: ಪಟ್ಟಣದ 23 ವಾರ್ಡ್‌ಗಳು ಸೇರಿ 25,500 ಜನಸಂಖ್ಯೆ ಹೊಂದಿದೆ. ನಗರ ಪ್ರದೇಶದಲ್ಲಿ ಒಬ್ಬ ಮನುಷ್ಯನಿಗೆ ದಿನ ಬಳಕೆಗೆ 100 ಲೀಟರ್‌ ಅಂದರೆ, ಒಟ್ಟು ಜನಸಂಖ್ಯೆಗೆ ಅನುಗುಣವಾಗಿ 26 ಲಕ್ಷ ಲೀಟರ್‌ ನೀರಿನ ಅವಶ್ಯಕತೆಯಿದ್ದು, ಸದ್ಯ 20 ಲಕ್ಷ ಲೀಟರ್‌ಗೂ ಹೆಚ್ಚು ನೀರು ದೊರೆಯುತ್ತದೆ. ಇದರಿಂದ ಕನಿಷ್ಠ 2-3 ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಬಹುದಾಗಿದೆ. ಆದರೆ ಈಗ ಪಟ್ಟಣಕ್ಕೆ 8 ದಿನಗಳಿಗೊಮ್ಮೆ ನೀರು ಪೂರೈಕೆ ಮಾಡುತ್ತಿದ್ದಾರೆ. ಇದರಿಂದ ಪಟ್ಟಣದ ಜನತೆಗೆ ಪೂರೈಸಬೇಕಾದ ನೀರನ್ನು ಪುರಸಭೆ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಎಲ್ಲಿ ಹರಿಸುತ್ತಿದ್ದಾರೆ ಎಂಬ ಸಂಶಯ ಜನರಿಗೆ ಕಾಡುತ್ತಿದೆ.

ರೋಣ: ಪಟ್ಟಣದ ಪೋತರಾಜನಕಟ್ಟೆಯ ಬಳಿ ಸ್ಥಗಿತಗೊಂಡಿರುವ ಶುದ್ಧನೀರಿನ ಘಟಕ.

ಶೀಘ್ರ ರಿಪೇರಿಗೆ ಸೂಚನೆ

ತಕ್ಷಣವೇ 4ನೇ ವಾರ್ಡ್‌ನಲ್ಲಿ ಬರುವ ಪೋತರಾಜನಕಟ್ಟೆಯ ಪಕ್ಕದಲ್ಲಿರುವ ಶುದ್ಧ ನೀರಿನ ಘಟಕವನ್ನು ರಿಪೇರಿ ಮಾಡಿ ಅಲ್ಲಿನ ಸಾರ್ವಜನಿಕರಿಗೆ ಶುದ್ಧ ನೀರನ್ನು ನೀಡುವಂತೆ ಕೂಡಲೆ ರೋಣ ಪುರಸಭೆ ಮುಖ್ಯಾಧಿಕಾರಿಗೆ ಸೂಚನೆ ನೀಡುತ್ತೇನೆ.
•ಕಳಕಪ್ಪ ಬಂಡಿ, ರೋಣ ಶಾಸಕ

ಸ್ಥಗಿತಗೊಂಡು ವರ್ಷ ಕಳೆಯಿತು

ಪಟ್ಟಣದ ಹೃದಯವೆಂದು ಕರೆಯಿಸಿಕೊಳ್ಳುವ ಹಾಗೂ ಹೆಚ್ಚು ಕೃಷಿ ಕೂಲಿಕಾರ್ಮಿಕನ್ನು ಹೊಂದಿರುವ ಪೋತರಾಜನಕಟ್ಟೆಯ ಪಕ್ಕದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡು ವರ್ಷ ಕಳೆಯಿತು. ಆದರೂ ರಿಪೇರಿಯಾಗಿಲ್ಲ. ಇದರಿಂದ ಇಲ್ಲಿನ ಜನತೆ ದೂರದ ವಾರ್ಡ್‌ನಿಂದ ನೀರನ್ನು ತರಬೇಕಾಗಿದೆ.
•ವಿಜಯಕುಮಾರ ಸಜ್ಜನ್‌, ಸ್ಥಳೀಯ ನಿವಾಸಿ

ಕುಡಿಯುವ ನೀರಿಗೆ ಹಾಹಾಕಾರ

ಎಲ್ಲ ಕಾಲದಲ್ಲೂ ಪಟ್ಟಣದ ಜನರಿಗೆ ಮಾತ್ರ ಕುಡಿಯುವ ನೀರಿನ ಸಮಸ್ಯೆ ಸದಾ ಕಾಡುತ್ತಿರುತ್ತದೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಆದಷ್ಟು ಬೇಗನೆ ಈ ಸಮಸ್ಯೆಗೆ ಪರಿಹಾರ ಹುಡಕಿ ಪಟ್ಟಣದ ಜನರಿಗೆ ಸಮರ್ಪಕ ನೀರನ್ನು ಒದಗಿಸಲು ಮುಂದಾದರೆ ಸಾಕು.
•ಜಯಪ್ರಕಾಶ ಬಳಗಾನೂರ, ಯುವ ಮುಖಂಡ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.