ಆವಾಸ್‌ ಯೋಜನೆಗೆ ಅರ್ಜಿಯೇ ಇಲ್ಲ


Team Udayavani, Jan 12, 2020, 1:09 PM IST

gadaga-tdy-3

ಗಜೇಂದ್ರಗಡ: ಬಡ ಹಾಗೂ ಮಧ್ಯಮ ವರ್ಗದವರು ಸ್ವಂತ ಸೂರು ಹೊಂದಬೇಕೆನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನಮಂತ್ರಿ ಆವಾಸ್‌ ಯೋಜನೆ ಸಮರ್ಪಕ ಜಾರಿಗೆ ಬರುತ್ತಿಲ್ಲ. ಅಧಿಕಾರಿಗಳ ನಿರುತ್ಸಾಹದಿಂದಾಗಿ ಮಹತ್ವಾಕಾಂಕ್ಷೆ ಯೋಜನೆ ಲಾಭ ಜನ ಪಡೆಯುತ್ತಿಲ್ಲ.

ದೇಶದ ಪ್ರತಿಯೊಂದು ಕುಟುಂಬ ಸ್ವಂತ ಸೂರು ಹೊಂದಬೇಕು ಎನ್ನುವ ಮಹದಾಸೆಯಿಂದ ಕೇಂದ್ರ ಸರ್ಕಾರ ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮನೆ ಕಟ್ಟಿಕೊಳ್ಳಲು ಆರ್ಥಿಕವಾಗಿ ಸಹಕಾರಿಯಾಗುವ ಪ್ರಧಾನಮಂತ್ರಿ ಆವಾಸ್‌ ಯೋಜನೆಯ ಕ್ರೆಡಿಟ್‌ ಲಿಂಕ್ಡ್ ಸಬ್ಸಿಡಿ ಸ್ಕಿಂ ಜಾರಿಗೆ ತಂದಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿರಲ್ಲಿ ಜಾಗೃತಿ ಮೂಡಿಸದ ಪರಿಣಾಮ ಹಲವಾರು ಕುಟುಂಬಗಳು ಈ ಯೋಜನೆಯಿಂದ ವಂಚಿತರಾಗಿದ್ದಾರೆ.

ಏನಿದು ಯೋಜನೆ?: ಪ್ರಧಾನಮಂತ್ರಿ ಆವಾಸ್‌ ಯೋಜನೆಯಲ್ಲಿ ನಗರ, ಪಟ್ಟಣ ಮಧ್ಯಮ ವರ್ಗದ ಜನತೆಗೆ ಸಾಲ ಆಧಾರಿತ ಸಬ್ಸಿಡಿ ಯೋಜನೆ ಇದಾಗಿದೆ. ಯೋಜನೆಯ ಉಪ ಘಟಕವಾದ ಕ್ರೆಡಿಟ್‌ ಲಿಂಕ್ಡ್ ಸಬ್ಸಿಡಿ ಸ್ಕಿಂ ಅಡಿಯಲ್ಲಿ ಬಹುತೇಕ ಎಲ್ಲ ನಗರ, ಪಟ್ಟಣ ಪ್ರದೇಶಗಳಲ್ಲಿ ವಾಸಿಸುತ್ತಿರುವ ಮಧ್ಯಮ ವರ್ಗದ ಕುಟುಂಬಗಳು ವಾರ್ಷಿಕ 18 ಲಕ್ಷ ರೂ. ವರೆಗೆ ಆದಾಯ ಹೊಂದಿದವರು ಬಡ್ಡಿ ಸಬ್ಸಿಡಿ ಪಡೆಯಬಹುದು. ಸ್ವಂತ ನಿವೇಶನದಲ್ಲಿ ಮನೆ ನಿರ್ಮಿಸುವವರಿಗೆ ಅಥವಾ ಫ್ಲಾಟ್‌ ಖರೀದಿಯ ಸಾಲಕ್ಕೂ ಈ ಯೋಜನೆ ಅನ್ವಯವಾಗುತ್ತದೆ. ಈ ಯೋಜನೆಯಲ್ಲಿ ಪತಿ, ಪತ್ನಿ ಮತ್ತು ಅವಿವಾಹಿತ ಮಕ್ಕಳು, ಅವಿವಾಹಿತರಾಗಿದ್ದರೂ ಸಂಪಾದನೆ ಮಾಡುತ್ತಿರುವ ವಯಸ್ಕ ವ್ಯಕ್ತಿ ಇದ್ದರೆ ಅವರನ್ನೂ ಪ್ರತ್ಯೇಕ ಕುಟುಂಬ ಎಂದು ಪರಿಗಣಿಸಿ ಸೌಲಭ್ಯ ನೀಡಲಾಗುತ್ತಿದೆ.

ಸ್ವಂತ ಮನೆ ಇಲ್ಲದವರು ಈ ಯೋಜನೆ ಪ್ರಯೋಜನ ಪಡೆಯಬಹುದು. ಪತಿ-ಪತ್ನಿ ಜಂಟಿಯಾಗಿಯೂ ಅರ್ಜಿ ಸಲ್ಲಿಸಬಹುದು. ಯಾವುದೇ ಇತರ ಸರಕಾರಿ ಹೌಸಿಂಗ್‌ ಯೋಜನೆಯ ನೆರವು ಹೊಂದಿರುವಂತಿಲ್ಲ. ಇದರಲ್ಲಿ ಆದಾಯವನ್ನು ಅವಲಂಬಿಸಿ 6 ಲಕ್ಷದಿಂದ 18 ಲಕ್ಷ ರೂ. ವರೆಗೆ ಸಾಲ ಪಡೆಯಬಹುದಾಗಿದೆ.

16 ಫಲಾನುಭವಿಗಳಿಗೆ ಮಾತ್ರ ಯೋಜನೆ ಲಾಭ : ಕೇಂದ್ರ ಸರ್ಕಾರ 2015ರಲ್ಲಿಯೇ ಈ ಯೋಜನೆ ಜಾರಿಗೊಳಿಸಲಾಗಿದೆ. ಆದರೆ ಗಜೇಂದ್ರಗಡ ಪುರಸಭೆ ವ್ಯಾಪ್ತಿಯಲ್ಲಿ ನಾಲ್ಕು ವರ್ಷದಲ್ಲಿ 70ಕ್ಕೂ ಹೆಚ್ಚು ಜನ ಅರ್ಜಿ ಸಲ್ಲಿಸಿದ್ದಾರೆ. ಕೇವಲ 16 ಫಲಾನುಭವಿಗಳಿಗೆ ಮಾತ್ರ ಯೋಜನೆಯ ಲಾಭ ದೊರೆತಿದೆ. ಎಷ್ಟು ಜನರು ಅರ್ಜಿ ಸಲ್ಲಿಸುತ್ತಾರೋ ಅವರೆಲ್ಲರೂ ಸ್ಕಿಂ ಪ್ರಯೋಜನ ಪಡೆದುಕೊಳ್ಳಬಹುದು. ಆದರೆ ಸಮರ್ಪಕ ದಾಖಲೆಗಳು ಮತ್ತು ಬ್ಯಾಂಕಿನೊಂದಿಗಿನ ವಹಿವಾಟಿನ ಆಧಾರದ ಮೇಲೆ ಈ ಸೌಲಭ್ಯ ದೊರೆಯಲಿದೆ. ಆದರೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಯೋಜನೆ ಬಗ್ಗೆ ಸಾರ್ವಜನಿರಿಗೆ ಸರಿಯಾಗಿ ಮಾಹಿತಿ ನೀಡದಿರುವುದೇ ಮಹತ್ವಾಕಾಂಕ್ಷೆ ಯೋಜನೆ ಬಡ ಕುಟುಂಬಗಳಿಗೆ ತಲುಪುತ್ತಿಲ್ಲ ಎನ್ನುವುದು ಜನಸಾಮಾನ್ಯರ ಅಳಲಾಗಿದೆ.

ಪ್ರಧಾನಮಂತ್ರಿ ಆವಾಸ್‌ ಯೋಜನೆಯ ಕ್ರೆಡಿಟ್‌ ಲಿಂಕ್ಡ್ ಸಬ್ಸಿಡಿ ಸ್ಕಿಂ ಸಮರ್ಪಕವಾಗಿ ಅನುಷ್ಠಾನಗೊಳಿಸದೇ ಕೆಲ ಅಧಿಕಾರಿಗಳು ನಿರುತ್ಸಾಹ ತೋರಿದ ಬಗ್ಗೆ ಗಮನಕ್ಕೆ ಬಂದಿದೆ. ಯೋಜನೆ ಕುರಿತು ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ ಮತ್ತು ಬ್ಯಾಂಕ್‌ ಅಧಿಕಾರಿಗಳಿಗೆ ತರಬೇತಿ ನೀಡಿ ಯೋಜನೆ ಬಗ್ಗೆ ಸಮರ್ಪಕ ಮಾಹಿತಿ ನೀಡಲಾಗುವುದು. ಜೊತೆಗೆ ಜಿಲ್ಲೆಯ ಲೀಡ್‌ ಬ್ಯಾಂಕ್‌ ಅಧಿಕಾರಿಗಳ ಸಭೆ ಕರೆದು ಯೋಜನೆ ಜಾರಿಗೆ ಸಹಕರಿಸಲು ಮನವಿ ಮಾಡಲಾಗುವುದು.  ಎನ್‌. ರುದ್ರೇಶ, ಜಿಲ್ಲಾ ಯೋಜನಾ ನಿರ್ದೇಶಕ

 

-ಡಿ.ಜಿ. ಮೋಮಿನ್‌

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಕಾರ್ಗಿಲ್ ವಿಜಯೋತ್ಸವವನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಬೇಕು: ಬಸಲಿಂಗಪ್ಪ ಮುಂಡರಗಿ

Gadag; ಕಾರ್ಗಿಲ್ ವಿಜಯೋತ್ಸವವನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಬೇಕು: ಬಸಲಿಂಗಪ್ಪ ಮುಂಡರಗಿ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಗದಗ: ಏಕೀಕರಣ ಚಳವಳಿಗೆ ಹೊಸ ರೂಪ ನೀಡಿದ ವೆಂಕಟರಾಯರು-ಬಿ.ಎಲ್‌. ಪತ್ತಾರ

ಗದಗ: ಏಕೀಕರಣ ಚಳವಳಿಗೆ ಹೊಸ ರೂಪ ನೀಡಿದ ವೆಂಕಟರಾಯರು-ಬಿ.ಎಲ್‌. ಪತ್ತಾರ

ಗದಗ: ಬಿಪಿಸಿಎಲ್‌ ಕಾಮಗಾರಿ ಬಗ್ಗೆ ಹಲವು ದೂರು

ಗದಗ: ಬಿಪಿಸಿಎಲ್‌ ಕಾಮಗಾರಿ ಬಗ್ಗೆ ಹಲವು ದೂರು

ಲಕ್ಷ್ಮೇಶ್ವರ: ಹೆಸರಿಗೆ ಕೊಂಬಿನ ಹುಳು ಕೀಟಬಾಧೆ

ಲಕ್ಷ್ಮೇಶ್ವರ: ಹೆಸರಿಗೆ ಕೊಂಬಿನ ಹುಳು ಕೀಟಬಾಧೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.