ವೀರಾಪುರದಲ್ಲಿ ರುದ್ರಭೂಮಿಯೇ ಇಲ್ಲ


Team Udayavani, Jan 15, 2020, 3:36 PM IST

gadaga-tdy-3

ಗಜೇಂದ್ರಗಡ: ಬಹುತೇಕ ಹಿಂದುಗಳೇ ವಾಸಿಸುವ ತಾಲೂಕಿನ ವೀರಾಪುರ ಗ್ರಾಮದಲ್ಲಿ ರುದ್ರಭೂಮಿಯೇ ಇಲ್ಲ. ಇದರಿಂದ ಗ್ರಾಮದ ಜನರು ಅಂತ್ಯಸಂಸ್ಕಾರದ ಸಂದರ್ಭದಲ್ಲಿ ತಾಲೂಕಾಡಳಿತಕ್ಕೆ ಹಿಡಿಶಾಪ ಹಾಕುವುದು ತಪ್ಪಿಲ್ಲ.

ಸಮೀಪದ ರಾಮಾಪುರ ಗ್ರಾಪಂ ವ್ಯಾಪ್ತಿಗೆ ಒಳಪಡುವ ವೀರಾಪುರ ಗ್ರಾಮದಲ್ಲಿ ಎರಡು ಸಾವಿರಕ್ಕೂ ಅಧಿಕ ಜನಸಂಖ್ಯೆಯಿದೆ. ಮೂಲ ಸೌಲಭ್ಯಗಳ ಜೊತೆ ಸ್ಮಶಾನದ ಸಮಸ್ಯೆ ದಶಕಗಳಿಂದ ಕಾಡುತ್ತಿದೆ. ಈ ಕುರಿತು ಪ್ರತಿಯೊಂದು ಸಭೆಯಲ್ಲಿ ಗ್ರಾಮಸ್ಥರು ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಅಲ್ಲದೇ ಗ್ರಾಪಂ ಆಡಳಿತ ಮಂಡಳಿ ಸಭೆಯಲ್ಲಿಯೂ ಮೌಖೀಕ ಮತ್ತು ಲಿಖೀತವಾಗಿ ಒತ್ತಾಯಿಸಿದರೂ ತಾಲೂಕಾಡಳಿತವಾಗಲಿ, ಗ್ರಾಮ ಪಂಚಾಯತಿಯಾಗಲಿ ಈವರೆಗೂ ಸರ್ಕಾರಿ ರುದ್ರಭೂಮಿ ಸಮಸ್ಯೆ ನಿವಾರಿಸಿಲ್ಲ

ಶವ ಸಂಸ್ಕಾರ ಕಷ್ಟ: ಗ್ರಾಮದಲ್ಲಿ ಯಾರಾದರೂ ಮರಣ ಹೊಂದಿದರೆ ಅವರನ್ನು ಗ್ರಾಮದ ಹೊರ ವಲಯದ ಹಳ್ಳದಲ್ಲಿ ಸುಡುವ ಮೂಲಕ ಶವ ಸಂಸ್ಕಾರ ಮಾಡಬೇಕಾಗುತ್ತದೆ. ಒಂದು ವೇಳೆ ಮಳೆ ಬಂತೆಂದರೆ ಆ ಸಂದರ್ಭ ಸ್ಥಿತಿ ಹೇಳ ತೀರದಾಗುತ್ತದೆ. ಇದರಿಂದ ಈ ಗ್ರಾಮದ ಜನರಿಗೆ ರುದ್ರಭೂಮಿ ಇಲ್ಲದೇ ನರಕಯಾತನೆ ಪಡುವಂತಾಗಿದೆ.

ಮುಸ್ಲಿಮರ ಪಾಡಂತೂ ಹೇಳತೀರದು: ಗ್ರಾಮದಲ್ಲಿ ಬೆರಳೆಣಿಕೆಯಲ್ಲಿ ಮುಸ್ಲಿಂ ಸಮುದಾಯವಿದ್ದರೂ ಅವರಲ್ಲಿ ಮರಣ ಹೊಂದಿದಾಗ ಅವರ ಶವ ಸಂಸ್ಕಾರ ಮಾಡಬೇಕಾದರೆ ಖಬರಸ್ಥಾನ ಇಲ್ಲದ ಪರಿಣಾಮ ಅವರ ದುಸ್ಥಿತಿ ಹೇಳತೀರದು. ಇದು ಒಂದು ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ.

ಹೀಗೆ ರುದ್ರಭೂಮಿ ಹಾಗೂ ಖಬರಸ್ಥಾನಕ್ಕೆ ಜಾಗೆ ನೀಡಲು ಖಾಸಗಿಯವರು ಮುಂದಾಗಿದ್ದರು. ಅದರಂತೆಯೇ ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳ ಪರಿಶೀಲಿಸಿ, ತಾಲೂಕಾಡಳಿತಕ್ಕೆ ವರದಿ ಸಲ್ಲಿಸಲಾಗುವುದು ಎಂದು ನೀಡಿದ ಭರವಸೆ ಈ ವರೆಗೂ ಈಡೇರಿಲ್ಲ. ಈವರೆಗೂ ಆಡಳಿತ ನಡೆಸುತ್ತಿರುವ ಸರ್ಕಾರಗಳು ಕೇವಲ ರಸ್ತೆ, ಕುಡಿಯುವ ನೀರು ಸೇರಿ ಮೂಲ ಸೌಲಭ್ಯಕ್ಕಾಗಿ ಕೋಟ್ಯಂತರ ಅನುದಾನ ಬಿಡುಗಡೆಗೊಳಿಸಿ ನೀರಿನಂತೆ ಹಣವನ್ನು ವ್ಯಯಿಸುತ್ತಾರೆ. ಆದರೆ ಮನುಷ್ಯನ ಕನಿಷ್ಠ ಮೂಲ ಸೌಲಭ್ಯಗಳಲ್ಲಿ ರುದ್ರಭೂಮಿಯೂ ಒಂದಾಗಿದ್ದು, ಇದರ ಬಗೆಗೆ ಸರ್ಕಾರಗಳು ಏಕೆ ಗಂಭೀರ ಚಿಂತನೆಗೆ ಮುಂದಾಗುತ್ತಿಲ್ಲ ಎನ್ನುವುದು ಜನಸಾಮಾನ್ಯರನ್ನು ಕಾಡುತ್ತಿರುವ ಪ್ರಶ್ನೆಯಾಗಿದೆ.

ವೀರಾಪುರ ಗ್ರಾಮದಲ್ಲಿ ಸರ್ಕಾರಿ ರುದ್ರಭೂಮಿಗಾಗಿ ಹಲವಾರು ವರ್ಷಗಳಿಂದ ಗ್ರಾಪಂ ಹಾಗೂ ಕಂದಾಯ ಇಲಾಖೆಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಭೂಮಿ ನೀಡಲು ಖಾಸಗಿಯವರು ಮುಂದಾದರೂ ಕೊಂಡುಕೊಳ್ಳಲು ಸರ್ಕಾರ ಇಚ್ಛಾಶಕ್ತಿ ಪ್ರದರ್ಶಿಸದೇ ಬೇಜವಾಬ್ದಾರಿಕೆ ಪ್ರದರ್ಶಿಸುತ್ತಿದೆ. ಇದರಿಂದ ಸ್ಮಶಾನ ಸಮಸ್ಯೆ ಗ್ರಾಮದಲ್ಲಿ ತೀವ್ರವಾಗಿ ಕಾಡುತ್ತಿದೆ. -ಎಂ.ವೈ. ಅವಧೂತ್‌, ಗ್ರಾಪಂ ಸದಸ್ಯ

 

-ಡಿ.ಜಿ. ಮೋಮಿನ್‌

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.