ಲಖಮಾಪುರ ಗ್ರಾಮ ಸ್ಥಳಾಂತರಕ್ಕೆ ಚಿಂತನೆ

ನಿಶ್ಚಿತವಾಗಿ ಪ್ರವೇಶಿಸಲಿರುವ ಕೊರೊನಾ ಮೂರನೇ ಅಲೆ ಭೀಕರವಾಗಿದೆ

Team Udayavani, Jan 6, 2022, 12:22 PM IST

ಲಖಮಾಪುರ ಗ್ರಾಮ ಸ್ಥಳಾಂತರಕ್ಕೆ ಚಿಂತನೆ

ನರಗುಂದ: ಸಣ್ಣ ಗ್ರಾಮ ಲಖಮಾಪುರ ಸ್ಥಳಾಂತರಕ್ಕೆ ಇನ್ನೂ ಕಾಲ ಕೂಡಿ ಬಂದಂತಿಲ್ಲ. ಕಂದಾಯ ವ್ಯಾಪ್ತಿಯ ತೊಡಕಿನಿಂದಾಗಿ ಈ ಗ್ರಾಮ ಬೇರೆ ಜಿಲ್ಲೆಗೆ ಹೋಗದಂತೆ ಸ್ಥಳಾಂತರ ಮಾಡುವ ಬಗ್ಗೆ ಸಾಕಷ್ಟು ಚಿಂತನೆ ನಡೆಸಲಾಗಿದೆ ಎಂದು ಲೋಕೋಪಯೋಗಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದರು.

ತಾಲೂಕಿನ ಗಡಿ ಗ್ರಾಮ ಲಖಮಾಪುರ ಗ್ರಾಮದ 2 ಕಿಮೀ ಮುಖ್ಯರಸ್ತೆಯನ್ನು ಲೋಕೋಪಯೋಗಿ ಇಲಾಖೆ 3054 ಅತಿವೃಷ್ಟಿ ಅನುದಾನದಡಿ 1.5 ಕೋಟಿ ರೂ. ವೆಚ್ಚದಲ್ಲಿ ಸಿಡಿಗಳನ್ನು ಒಳಗೊಂಡ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ನಂತರ ನಡೆದ ಸಮಾರಂಭದಲ್ಲಿ ಸಚಿವರು ಮಾತನಾಡಿದರು.

ಸದ್ಯಕ್ಕೆ ಈ ಗ್ರಾಮದ ಜನರು ಪ್ರವಾಹ ಸಂದರ್ಭದಲ್ಲಿ ಸುರಕ್ಷಿತವಾಗಿ ಹೊರಗೆ ಬರುವಂತೆ ಅಗತ್ಯ ರಸ್ತೆ ಸುಧಾರಣೆಗೆ ಚಾಲನೆ ನೀಡಿದ್ದು, ಪ್ರವಾಹ ಸಂದರ್ಭದಲ್ಲಿ ಹಿನ್ನೀರು ಸರಾಗವಾಗಿ ಸಾಗುವಂತೆ ಎತ್ತರದಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಒಂದೂವರೆ ಕೋಟಿ ವೆಚ್ಚದಲ್ಲಿ ರಸ್ತೆ ಹಾಗೂ ಗ್ರಾಮದ ಒಳಗಿನ ಸಿಸಿ ರಸ್ತೆ ನಿರ್ಮಾಣ ಮಾಡಲಾಗುವುದು ಎಂದರು.

ವೇಗವಾಗಿ ಹರಡುತ್ತಿದೆ 3ನೇ ಅಲೆ: ನಿಶ್ಚಿತವಾಗಿ ಪ್ರವೇಶಿಸಲಿರುವ ಕೊರೊನಾ ಮೂರನೇ ಅಲೆ ಭೀಕರವಾಗಿದೆ. ಈಗಾಗಲೇ ತಜ್ಞರ ಮಾಹಿತಿಯಂತೆ ಅದರ ಹರಡುವಿಕೆ ವೇಗವಾಗಿದೆ. ಸರ್ಕಾರ ಯಾವುದೇ ಕ್ಷಣ ಕಠಿಣ ನಿರ್ಧಾರ ತೆಗೆದುಕೊಳ್ಳುವುದು ಅನಿವಾರ್ಯ ಆಗುತ್ತದೆ. ಇದರಿಂದ ದುಡಿಯುವ ಜನರಿಗೆ ಬಹಳಷ್ಟು ತೊಂದರೆ ಜೊತೆಗೆ ಸರ್ಕಾರಕ್ಕೂ ಆರ್ಥಿಕ ಹೊರೆಯಾಗಲಿದೆ. ಫೆಬ್ರವರಿ ಅಂತ್ಯಕ್ಕೆ ಇದು ತಾರಕಕ್ಕೇರಲಿದೆ. ಆದ್ದರಿಂದ 2, 3 ತಿಂಗಳು ಮುಂಜಾಗ್ರತೆ ವಹಿಸಬೇಕಿದೆ. ಎಲ್ಲರೂ ಕಡ್ಡಾಯವಾಗಿ ಎರಡನೇ ಡೋಸ್‌ ಲಸಿಕೆ ಹಾಕಿಸಿಕೊಂಡು ಕೊರೊನಾ ವಿರುದ್ಧದ ಸರ್ಕಾರದ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಸಚಿವ ಸಿ.ಸಿ.ಪಾಟೀಲ ಮನವಿ ಮಾಡಿದರು.

ಗೋಪಾಲಜ್ಜ ಪೂಜಾರ, ವಾಸನ ಗ್ರಾಪಂ ಅಧ್ಯಕ್ಷೆ ಕಾಶವ್ವ ನೀಲರಡ್ಡಿ, ಉಪಾಧ್ಯಕ್ಷೆ ರುಕುಮವ್ವ ತಳವಾರ, ಸದಸ್ಯೆ ಯಲ್ಲಮ್ಮ ಮಾದರ, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಎಂ.ಎಸ್‌ .ಪಾಟೀಲ, ಶಂಕರಗೌಡ ನಡಮನಿ, ಗುರಪ್ಪ ಆದೆಪ್ಪನವರ, ತಿಪ್ಪಣ್ಣ ಹಿರ್ಲವರ, ಬಾಬು  ಹಿರೇಹೊಳಿ, ವಿ.ಬಿ.ಕರಬಸಣ್ಣವರ, ಚಂದ್ರು ದಂಡಿನ, ಬಿ.ಬಿ.ಐನಾಪೂರ, ಮಲ್ಲಪ್ಪ ಮೇಟಿ, ನಿಂಗಪ್ಪ ಸೋಮಾಪೂರ ಮುಂತಾದವರಿದ್ದರು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.