ಕಪ್ಪತಗುಡ್ಡ ಹೋರಾಟ ಅಸ್ವಸ್ಥರಾದ ಮೂವರು
Team Udayavani, Feb 16, 2017, 3:45 AM IST
ಗದಗ: ಕಪ್ಪತಗುಡ್ಡ ಸಂರಕ್ಷಣೆಗೆ ಒತ್ತಾಯಿಸಿ ನಗರದ ಗಾಂಧಿವೃತ್ತದಲ್ಲಿ ನಡೆಯುತ್ತಿರುವ ಅಹೋರಾತ್ರಿ ಉಪವಾಸ ಸತ್ಯಾಗ್ರಹ ಮೂರನೇ ದಿನ ಪೂರೈಸಿದ್ದು, ಉಪವಾಸನಿರತ 20 ಜನರಲ್ಲಿ ಮೂವರು ಅಸ್ವಸ್ಥರಾಗಿದ್ದಾರೆ. ಈ ಪೈಕಿ ಒಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಅಸ್ವಸ್ಥಗೊಂಡ ಪ್ರಭುಗೌಡ ಪಾಟೀಲ್ರನ್ನು ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಸಲಾಗಿದೆ. ಕೊಪ್ಪಳದ ಪರಿಸರವಾದಿ ಲಿಂಗರಾಜ ನಡುವಿಮನಿ ಮತ್ತು ಪ್ರತಿಮಾ ನಾಯಕ್ ಎಂಬುವರ ಆರೋಗ್ಯವೂ ಏರುಪೇರಾಗಿದ್ದು, ಗ್ಲೂಕೋಸ್ಕೊಡಲಾಗಿದೆ. ಆದರೆ ಇವರಿಬ್ಬರು ಆಸ್ಪತ್ರೆಗೆ ದಾಖಲಾಗಿಲ್ಲ.
ಪ್ರತಿಮಾ ನಾಯಕ ಅವರಿಗೆ ರಕ್ತದೊತ್ತಡ ಕಡಿಮೆಯಾಗಿದ್ದು,ಸದ್ಯ ನಿತ್ರಾಣರಾಗಿದ್ದಾರೆ. ಕಪ್ಪತಗುಡ್ಡ ಸಂರಕ್ಷಣೆಗೆ ಒತ್ತಾಯಿಸಿ ಎಸ್.ಆರ್.ಹಿರೇಮಠ, ರವಿಕಾಂತ ಅಂಗಡಿ, ನಾರಾಯಣ ಸ್ವಾಮಿ, ಸುನೀತಾ ಎಂಬುವರು ಸೇರಿದಂತೆ ಒಟ್ಟು 20 ಜನರು ಅಹೋರಾತ್ರಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಡಾ| ಬಿ.ಎಸ್.ಪಾಟೀಲ ನೇತೃತ್ವದ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪವಾಸ ನಿರತರ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ