
ಟಿಕೆಟ್ ಹಂಚಿಕೆ ಹೈಕಮಾಂಡ್ ಮಾಡುತ್ತೆ: ಬಿಎಸ್ವೈ
Team Udayavani, Mar 16, 2023, 7:43 AM IST

ಗಜೇಂದ್ರಗಡ: ಟಿಕೆಟ್ ಕೊಡುವುದು ಬಿಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ. ಟಿಕೆಟ್ ಹಂಚಿಕೆ ಹೈಕಮಾಂಡ್ ಮಾಡುತ್ತೆ. ಯಾರು ಒಳ್ಳೆಯ ಕೆಲಸ ಮಾಡಿದ್ದಾರೋ, ಜನಾಭಿಪ್ರಾಯ ಯಾರಿಗಿದೆಯೋ ಅಂಥವರಿಗೆ ಅವಕಾಶ ಸಿಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಪಟ್ಟಣದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಯಾರು ಕ್ಷೇತ್ರದಲ್ಲಿ ಉತ್ತಮ ಅಭಿಪ್ರಾಯ ಹೊಂದಿರುತ್ತಾರೋ ಅಂಥವರಿಗೆ ಹೈಕಮಾಂಡ್ ಮನ್ನಣೆ ನೀಡುತ್ತದೆ. ಉತ್ತಮ ಕೆಲಸ ಮಾಡುವವರಿಗೆ ಪಕ್ಷದಲ್ಲಿ ಆದ್ಯತೆ ನೀಡಲಾಗುತ್ತದೆ. ಜನಾಭಿಪ್ರಾಯದ ಆಧಾರದ ಮೇಲೆಯೇ ಟಿಕೆಟ್ ನಿರ್ಧಾರವಾಗುತ್ತದೆ ಎಂದರು.
ಪಕ್ಷದ ಕೆಲ ಹಾಲಿ ಶಾಸಕರಿಗೆ ಮತ್ತೆ ಟಿಕೆಟ್ ಸಿಗದಿರುವ ಕುರಿತು ಹೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಟಿಕೆಟ್ ಹಂಚಿಕೆ ನಿರ್ಧಾರ ಪಕ್ಷದ ನಾಯಕರದ್ದು. ಆ ಬಗ್ಗೆ ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ. ಶಾಸಕ ಕಳಕಪ್ಪ ಬಂಡಿ ಉತ್ತಮ ಕೆಲಸ ಮಾಡಿದ್ದಾರೆ. ಅವರ ಬಗ್ಗೆ ಹೈಕಮಾಂಡ್ ಚುನಾವಣೆ ಸಮೀಪ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
ಸಚಿವ ವಿ. ಸೋಮಣ್ಣ ಪಕ್ಷ ಬಿಡುವ ಪ್ರಮೆಯವೇ ಇಲ್ಲ. ಅವರು ಎಲ್ಲಿಯೂ ಹೋಗಲ್ಲ. ದೆಹಲಿಗೆ ಹೋಗಿದ್ದಾರೆ. ಬಿಜೆಪಿಯಲ್ಲಿಯೇ ಉಳಿಯಲಿದ್ದಾರೆ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
ಹೊಸ ಸೇರ್ಪಡೆ

ChatGPT: ಪ್ರಧಾನಿ ಮೋದಿ ಭೇಟಿಯಾದ ಚಾಟ್ ಜಿಪಿಟಿ ಸೃಷ್ಟಿಕರ್ತ ಸ್ಯಾಮ್ ಆಲ್ಟ್ಮನ್

Singer arrested : ಅಪ್ರಾಪ್ತೆ ಮೇಲೆ ಅತ್ಯಾಚಾರಗೈದು,ಆಕ್ಷೇಪಾರ್ಹ ಫೋಟೋ ಪೋಸ್ಟ್; ಗಾಯಕ ಬಂಧನ

HUNSUR: ಜಿಂಕೆಯನ್ನು ಬೇಟೆಯಾಡಿ ಮಾಂಸ ತಿನ್ನುತ್ತಿರುವ ಚಿರತೆ; ವಿಡಿಯೋ

ಟಿಕೆಟ್ ಖಚಿತ, ಕಾಮಿಡಿ ಉಚಿತ, ಖುಷಿ ನಿಶ್ಚಿತ!: ‘ದರ್ಬಾರ್’ ಸಿನಿಮಾ ಇಂದು ಬಿಡುಗಡೆ

ಹೊಸಬರ ಗದಾಯುದ್ಧ ಬಿಡುಗಡೆ