ಶೌಚಾಲಯಕ್ಕಿಲ್ಲ ಉದ್ಘಾಟನೆ ಭಾಗ್ಯ

•ಜನರಿಗೆ ಬಯಲು ಶೌಚವೇ ಗತಿ•ಸರ್ಕಾರದ ಹಣ ಪೋಲು •ಸಾಂಕ್ರಾಮಿಕ ರೋಗದ ಭೀತಿ

Team Udayavani, Aug 17, 2019, 10:49 AM IST

GADAGA-TDY-1

ನರೇಗಲ್ಲ: ದೇಶದ ಎಲ್ಲೆಡೆ ಶೌಚಾಲಯ ನಿರ್ಮಾಣದ ದೊಡ್ಡ ಅಭಿಯಾನ ನಡೆಯುತ್ತಿದೆ. ಆದರೆ, ಪಪಂ ಯೋಜನೆಯೊಂದರಲ್ಲಿ ಸುಮಾರು 85.98 ಲಕ್ಷಕ್ಕೂ ಹೆಚ್ಚು ರೂ. ಖರ್ಚು ಮಾಡಿ ಅನೇಕ ಸಾರ್ವಜನಿಕ ಶೌಚಾಲಯ ನಿರ್ಮಿಸಿ ವರ್ಷ ಕಳೆದರೂ ಉದ್ಘಾಟನೆ ಭಾಗ್ಯ ಕಂಡಿಲ್ಲ. ಜನರಿಗೆ ಬಯಲು ಶೌಚವೇ ಗತಿಯಾಗಿದೆ.

ಪಟ್ಟಣದ ಮಜರೆ ಗ್ರಾಮವಾದ ಮಲ್ಲಾಪುರದಲ್ಲಿ ನಿರ್ಮಿಸಿರುವ ಸಾರ್ವಜನಿಕ ಶೌಚಾಲಯಕ್ಕೆ 11 ಲಕ್ಷ ರೂ., ದ್ಯಾಂಪುರ ಗ್ರಾಮದಲ್ಲಿ ನಿರ್ಮಿಸಿರುವ ಸಾರ್ವಜನಿಕ ಶೌಚಾಲಯಕ್ಕೆ 11.46 ಲಕ್ಷ ರೂ., ಅಬ್ಬಿಗೇರಿ ರಸ್ತೆಯಲ್ಲಿರುವ ಅನ್ನದಾನೇಶ್ವರ ಕಾಲೇಜಿನ ಹತ್ತಿರ ನಿರ್ಮಿಸಿರುವ ಸಾರ್ವಜನಿಕ ಶೌಚಾಲಯಕ್ಕೆ 14.60 ಲಕ್ಷ ರೂ., ಕೊಂತಿ ಮಲ್ಲೇಶ್ವರ ದೇವಸ್ಥಾನದ ಹಿಂದೆ ನಿರ್ಮಿಸಿರುವ ಸಾರ್ವಜನಿಕ ಶೌಚಾಲಯಕ್ಕೆ 11.46 ಲಕ್ಷ ರೂ., ಹಿರೇಭಾವಿ ಹತ್ತಿರ ನಿರ್ಮಿಸಿರುವ ಹೈಟೆಕ್‌ ಸಾರ್ವಜನಿಕ ಶೌಚಾಲಯಕ್ಕೆ 15.46 ಲಕ್ಷ ರೂ., ಕೆ.ಎಸ್‌.ಎಸ್‌. ಕಾಲೇಜಿನ ಆವರಣದಲ್ಲಿ ನಿರ್ಮಿಸಿರುವ ಸಾರ್ವಜನಿಕ ಶೌಚಾಲಯಕ್ಕೆ 11 ಲಕ್ಷ ರೂ., ಅನ್ನದಾನೇಶ್ವರ ಕಾಲೇಜಿನ ಆವರಣದಲ್ಲಿ ನಿರ್ಮಿಸಿರುವ ಶೌಚಾಲಯಕ್ಕೆ 11 ಲಕ್ಷ ರೂ.ಗಳನ್ನು ಖರ್ಚು ಮಾಡಿ ಶೌಚಾಲಯ ನಿರ್ಮಿಸಿದ್ದಾರೆ. ಅನುದಾನ ಕೊರತೆಯಿಂದ ಮೂಲ ಸೌಲಭ್ಯಗಳ ಸಮಸ್ಯೆಯಿಂದ ಶೌಚಾಲಯಗಳು ಅರ್ಧಕ್ಕೆ ನಿಂತು ಪಟ್ಟಣದ ಸಾರ್ವಜನಿಕರಿಗಾಗಿ ನಿರ್ಮಿಸಲಾದ ಶೌಚಾಲಯ ಬಳಕೆಗೆ ಬರುತ್ತಿಲ್ಲ.

ಹೊಸ ಕಟ್ಟಡ ನಿರ್ವಹಣೆ ಇಲ್ಲದೆ ಕಿಟಕಿ, ಬಾಗಿಲುಗಳಿಗೆ ಬಳಸಿದ ಸರಳುಗಳು ತುಕ್ಕು ಹಿಡಿಯಲಾರಂಭಿಸಿವೆ. ಉದ್ಘಾಟನೆಗೂ ಮುನ್ನವೇ ಗೋಡೆಗಳು ಬಿರುಕು ಬಿಟ್ಟು ನಿಂತಿವೆ. ಕಟ್ಟಡಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಾಲಿ ಕಂಟಿಗಳು ಬೆಳೆದಿವೆ. ಅಲ್ಲೊಂದು ಇಲ್ಲೊಂದು ಕಸದ ತಿಪ್ಪೆ ಹಾಕಿರುವುದರಿಂದ ಜನರು ಮೂಗು ಮುಚ್ಚಿಕೊಂಡು ತಿರುಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಶೌಚಾಲಯಕ್ಕೆ ಯಾವಾಗಲೂ ಬೀಗ ಹಾಕೇ ಇರುತ್ತದೆ.

ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಮಾತ್ರ ಇದ್ಯಾವುದೂ ಕಾಣುತ್ತಿಲ್ಲ. ಪಟ್ಟಣದಲ್ಲಿ ಬೆರಳೆಣಿಕೆಯಷ್ಟು ಸಾರ್ವಜನಿಕ ಶೌಚಾಲಯಗಳಿವೆ. ಅವುಗಳು ಸಹ ನೀರಿನ ಸಮಸ್ಯೆಯಿಂದ ನಿರುಪಯುಕ್ತವಾಗುತ್ತಿವೆ. ಶೌಚಾಲಯಗಳಿಗೆ ನೀರಿನ ಸಂಪರ್ಕ ಕಲ್ಪಿಸುವ ಗೋಜಿಗೆ ಅಧಿಕಾರಿಗಳು ಹೋಗಿಲ್ಲ. ಹೀಗಾಗಿ ಅದಕ್ಕಿನ್ನೂ ಉದ್ಘಾಟನೆ ಭಾಗ್ಯ ದೊರೆತ್ತಿಲ್ಲ. ಕಾಟಾಚಾರಕ್ಕೆ ಎನ್ನುವಂತೆ ಇಲ್ಲಿ ಶೌಚಾಲಯ ನಿರ್ಮಿಸಿ ಕೈತೊಳೆದುಕೊಳ್ಳಲಾಗಿದೆ ಎಂಬ ಆರೋಪ ಸಾರ್ವಜನಿಕರದ್ದಾಗಿದೆ.

ಸರ್ಕಾರಿ ಆಸ್ಪತ್ರೆಗೆ ನಿತ್ಯ 25ರಿಂದ 30 ರೋಗಿಗಳು ಜ್ವರ, ತೆಲೆ ನೋವು, ಕೆಮ್ಮು ಸೇರಿದಂತೆ ಅನೇಕ ಸಾಂಕ್ರಾಮಿಕ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಬರುತ್ತಿದ್ದಾರೆ. ಇದರಲ್ಲಿ ಕನಿಷ್ಠ 4ರಿಂದ 5 ಜನ ಡೆಂಘೀ, ಚಿಕೂನ್‌ಗುನ್ಯಾ ರೋಗಿಗಳು ಈಗಾಗಲೇ ಚಿಕಿತ್ಸೆ ಪಡೆಯಲು ಬರುತ್ತಿದ್ದಾರೆ.•ಡಾ| ಎ.ಡಿ. ಸಾಮುದ್ರಿ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ

ಸಾರ್ವಜನಿಕರ ಉಪಯೋಗಕ್ಕೆಂದು ಶೌಚಾಲಯ ನಿರ್ಮಿಸಲಾಗಿದೆ. ಆದರೆ, ಅವುಗಳು ಉದ್ಘಾಟನೆಗೊಳ್ಳದೇ ಇರುವುದರಿಂದ ಸಾರ್ವಜನಿಕರು ಬಯಲು ಶೌಚಾಲಯಕ್ಕೆ ಹೋಗುತ್ತಿದ್ದಾರೆ. ಹೊಸ ಕಟ್ಟಡ ಬೀಗ ಹಾಕಿದ ಸ್ಥಿತಿಯಲ್ಲೇ ಇದೆ. ವರ್ಷ ಕಳೆಯುತ್ತ ಬಂದರೂ ಪಪಂ ಅಧಿಕಾರಿಗಳು, ಜನಪ್ರತಿನಿಧಿಗಳು ಕೂಡಲೇ ನಿರ್ಮಿಸಿರುವ ಶೌಚಾಲಯಗಳಿಗೆ ನೀರಿನ ಹಾಗೂ ಮೂಲ ಸೌಲಭ್ಯವನ್ನು ಕಲ್ಪಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಬೇಕು.•ಪಟ್ಟಣದ ನಿವಾಸಿಗಳು

 

•ಸಿಕಂದರ ಎಂ. ಆರಿ

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.