ನಾಳೆ ಅಂಚೆ ವಿಂಗಡಣಾ ನೌಕರರ ಸಮಾವೇಶ 


Team Udayavani, Oct 5, 2018, 3:57 PM IST

5-october-19.gif

ಗದಗ: ಅಂಚೆ ಇಲಾಖೆಯ ಅಂಚೆ ವಿಂಗಡನಾ ನೌಕರರ(ಆರ್‌ಎಂಎಸ್‌) ಹುಬ್ಬಳ್ಳಿ ವಿಭಾಗೀಯ ಮಟ್ಟದ ಕಾರ್ಯಕಾರಿಣಿ ಹಾಗೂ ಬಹಿರಂಗ ಸಮಾವೇಶವನ್ನು ಅ.6 ರಿಂದ ಎರಡು ದಿನಗಳ ಕಾಲ ನಗರದಲ್ಲಿ ಏರ್ಪಡಿಸಲಾಗಿದೆ ಎಂದು ಸಮಾವೇಶದ ಸ್ವಾಗತ ಸಮಿತಿ ಗೌರವ ಅಧ್ಯಕ್ಷರೂ ಆಗಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರವಿ ಗುಂಜೀಕರ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಮುಳಗುಂದ ರಸ್ತೆಯ ಕನಕ ಭವನದಲ್ಲಿ ಅ.7 ರಂದು ಬೆಳಗ್ಗೆ 10 ಗಂಟೆಗೆ ಆಯೋಜಿಸಿರುವ ಬಹಿರಂಗ ಸಮಾವೇಶದಲ್ಲಿ ದಕ್ಷಿಣ-ಪಶ್ಚಿಮ ರೈಲ್ವೆ ಮಜ್ದೂರ್‌ ಯೂನಿಯನ್‌ ವಿಭಾಗೀಯ ಕಾರ್ಯದರ್ಶಿ ಎಸ್‌ .ಎ.ಅಲ್ಬರ್ಟ್‌ ಡಿಕ್ರೂಜ್‌, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಗದಗ ವಿಭಾಗೀಯ ನಿಯಂತ್ರಣಾಧಿಕಾರಿ ಎಫ್‌.ಸಿ. ಹಿರೇಮಠ, ಆರ್‌.ಎಂ.ಎಸ್‌. ಹುಬ್ಬಳ್ಳಿ ವಿಭಾಗೀಯ ಅಧೀಕ್ಷಕಿ ಜಿ.ಎಸ್‌. ಸುಜಾತಾ ಮುಖ್ಯ ತಿಥಿಗಳಾಗಿ ಪಾಲ್ಗೊಳ್ಳುವರು.

ವಿಡಿಎಸ್‌ ಬಾಲಕರ ಪಿಯು ಕಾಲೇಜಿನ ಉಪನ್ಯಾಸಕ ದತ್ತ ಪ್ರಸನ್ನ ಪಾಟೀಲ ಅವರು ಗದಗ ವಿಭಾಗದ ಅಂಚೆ ವಿಂಗಡಣಾ ಕಾರ್ಯಾಲಯದ ಇತಿಹಾಸ, ಗದಗ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳು ಮತ್ತು ಅಂಚೆ ಹಾಗೂ ನಾಗರಿಕರ ಸೌಹಾರ್ದ ಸಂಬಂಧದ ಬಗ್ಗೆ ಉಪನ್ಯಾಸ ನೀಡುವರು. 

ವಕೀಲ ಪಿ.ಕಮಲೇಶನ್‌, ಎ.ಶ್ರೀನಿವಾಸ, ಉದಯ ಶಂಕರರಾವ್‌, ಕೆ.ಬಿ.ರೂಗಿಶೆಟ್ಟರ, ಎಚ್‌. ಎಸ್‌. ಬಸವರಾಜ, ಎಂ.ಬಿ. ಹುಲ್ಯಾಳ, ಎಸ್‌.ಎಂ. ಕುಲಕರ್ಣಿ ಸೇರಿ ಅನೇಕರು ಆಗಮಿಸಲಿದ್ದು, ಅಂಚೆ ವಿಂಗಡಣೆ ನೌಕರರ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವರು ಎಂದರು.

ಗದಗ ಅಂಚೆ ವಿಂಗಡಣಾ ನೌಕರರ ಸಂಘದ ಅಧ್ಯಕ್ಷ ಸಿ.ಎಫ್‌. ಪಾಟೀಲ ಮಾತನಾಡಿ, ಅಂಚೆ ಸೇವೆ ಎಂದಾಕ್ಷಣ ಎಲ್ಲರಿಗೂ ಅಂಚೆ ಕಚೇರಿ ಸಿಬ್ಬಂದಿ, ಪೋಸ್ಟ್‌ಮನ್‌ ನೆನಪಾಗುತ್ತಾರೆ. ಆದರೆ, ಸಾರ್ವಜನಿಕರು ತಮ್ಮ ಪತ್ರಗಳನ್ನು ಸಂಬಂಧಿಸಿದವರಿಗೆ ಕಳುಹಿಸಿದಾಗ ಅದನ್ನು ಸಾರ್ಟಿಂಗ್‌ ಸೇರಿ ಹಲವು ಕಾರ್ಯಗಳನ್ನು ಆರ್‌ಎಂಎಸ್‌ ಸಿಬ್ಬಂದಿ ಎಲೆಮರೆ ಕಾಯಿಯಂತೆ ಶ್ರಮಿಸುತ್ತಾರೆ. ಅವರನ್ನು ಬೆಳಕಿಗೆ ತರುವುದರೊಂದಿಗೆ ಸಾರ್ವಜನಿಕರಿಗೆ ಇನ್ನಷ್ಟು ಉತ್ತಮ ಸೇವೆ ಒದಗಿಸುವುದು ಹಾಗೂ ಮಾಡಿಕೊಳ್ಳಬಹುದಾದ ಬದಲಾವಣೆಗಳ ಕುರಿತು ಸಮಾವೇಶದಲ್ಲಿ ಚರ್ಚಿಸಲಾಗುತ್ತದೆ. ಪ್ರತಿ ಎರಡು ವರ್ಷಕ್ಕೊಮ್ಮೆ ಕಾರ್ಯಕಾರಿಣಿ ನಡೆಯುತ್ತದೆ. ಮಹಾರಾಷ್ಟ್ರದ ಸೊಲ್ಲಾಪುರ ಒಳಗೊಂಡಂತೆ ಉತ್ತರ ಕರ್ನಾಟಕದ 11 ಜಿಲ್ಲೆಗಳು ಹುಬ್ಬಳ್ಳಿ ವಿಭಾಗಕ್ಕೆ ಒಳಪಡುತ್ತವೆ. ಈ ಸಮಾವೇಶದಲ್ಲಿ ಒಂದು ಸಾವಿರಕ್ಕೂ ಅಧಿಕ ನೌಕರರು ಭಾಗವಹಿಸಲಿದ್ದಾರೆ. ಅ.6 ರಂದು ಹುಬ್ಬಳ್ಳಿ ವಿಭಾಗೀಯ ಮಟ್ಟದ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ವಿವರಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಎಸ್‌.ಲ್‌. ಕುಲಕರ್ಣಿ, ಸಿ.ವೈ. ನದಾಫ್‌, ಆರ್‌.ಬಿ. ಒಡೆಯರ, ಎ.ಪಿ. ಇಟಗಿ, ಎಚ್‌. ಯಲ್ಲಪ್ಪ, ಎಂ.ಎಸ್‌. ಶಿರಹಟ್ಟಿ, ವಿ.ಆರ್‌. ಚವಡಿ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.