ಕಾಲಕಾಲೇಶ್ವರ ಸನ್ನಿಧಿಯಲ್ಲಿ ನಾಳೆ ವಿಸ್ಮಯ!


Team Udayavani, Apr 5, 2019, 2:13 PM IST

gada
ಗಜೇಂದ್ರಗಡ: ನಾಡಿನ ಆರಾಧ್ಯ ದೈವ ಎನಿಸಿರುವ ದಕ್ಷಿಣ ಕಾಶಿ ಪ್ರಸಿದ್ಧಿ ಕಾಲಕಾಲೇಶ್ವರನ ಸನ್ನಿಧಾನದಲ್ಲಿ ಇಂದಿನ ಆಧುನಿಕ ವೈಜ್ಞಾನಿಕ ಯುಗದಲ್ಲೂ ಅಚ್ಚರಿ ಮೂಡಿಸುವಂತಹ ಹಲವು ವಿಸ್ಮಯಗಳ ಗೋಚರಿಕೆಗೆ ಯುಗಾದಿ ಮುನ್ನುಡಿಯಾಗಲಿದೆ.
ಜೀವನದಲ್ಲಿ ಹೊಸ ಭರವಸೆ ಮತ್ತು ಸಂತಸ ತರುವ ನಿರೀಕ್ಷೆಯೊಂದಿಗೆ ಪ್ರತಿಯೊಬ್ಬರೂ ಯುಗಾದಿ ಆಚರಿಸುತ್ತಾರೆ. ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಎನ್ನುವ ಕವಿ ವಾಣಿಯಂತೆ ಯುಗಾದಿ ಮತ್ತೂಮ್ಮೆ ಮರಳಿದೆ. ಸಕಲ ಜೀವರಾಶಿಗಳ ಬದುಕಿನಲ್ಲಿ ಹೊಸತನ್ನು ತರುತಿದೆ. ಈ ಯುಗಾದಿಯು ಕಾಲಕಾಲೇಶ್ವರ ಜಾತ್ರೆಗೆ ಚಾಲನೆ ದೊರೆಯಲಿದೆ.
ಸುಣ್ಣ-ಸುರುಮಗಳ ಲೀಲೆ, ಮಳೆ ಮುನ್ಸೂಚನೆಯಂತಹ ಹಲವು ವಿಸ್ಮಯ, ವೈಶಿಷ್ಟತೆ ಸೃಷ್ಟಿಸುವುದನ್ನು ಕಾಣಲು ಅಪಾರ ಭಕ್ತ ಸಮೂಹ ಕಾತರರಾಗಿದ್ದಾರೆ. ಹಿಂದು ಪಂಚಾಂಗದ ನೂತನ ವರ್ಷಾರಂಭವಾದ ಯುಗಾದಿಯಂದು ಕಾಲಭೈರವನ ಸನ್ನಿಧಾನದಲ್ಲಿ ನಡೆಯುವ ಚಮತ್ಕಾರ ಬೆರಗುಗೊಳಿಸಿದೆ. ಇಂತಹ ವಿಸ್ಮಯಕಾರಿ ಘಟನೆ ನಡೆಯುವುದನ್ನು ವೀಕ್ಷಿಸಲು ಜನ ಕಾತರರಾಗಿದ್ದಾರೆ.
ಪ್ರತಿ ವರ್ಷ ದವನದ ಹುಣ್ಣಿಮೆ ದಿನ ನಡೆಯುವ ಕಾಲಕಾಲೇಶ್ವರ ಜಾತ್ರೆಯ ಚಟುವಟಿಕೆಗಳು ಆರಂಭಗೊಳ್ಳುವುದು ಯುಗಾದಿ ಪಾಡೆಯಿಂದ. ಹೀಗಾಗಿ ಯುಗಾದಿ ದಿನದಂದು ಅಪಾರ ಸಂಖ್ಯೆಯ ಭಕ್ತರು ದೇಗುಲಕ್ಕೆ ಬಂದು ಕಾಲಕಾಲೇಶ್ವರನ ದರ್ಶನ ಪಡೆದುಕೊಳ್ಳುತ್ತಾರೆ.
ಯುಗಾದಿಯಂದು ಮಳೆಯ ಕುರುಹು ಲಭಿಸಲಿದೆ. ಪ್ರತಿ ವರ್ಷ ಚಂದ್ರಮಾನ ಯುಗಾದಿ ದಿನ ಸುರ್ಯೋದಯದ ನಂತರ ದೇವಸ್ಥಾನದ ಅಂತರಗಂಗೆಯ ಸನಿಹ ವರ್ತುಲಾಕಾರದಲ್ಲಿರುವ ಒಂದು ಪುಟ್ಟ ಸ್ಥಳದಲ್ಲಿ ತನ್ನಿಂದ ತಾನೇ ನೀರು ಹರಿದು ಬರುತ್ತದೆ. ಅದರ ಆಧಾರದ ಮೇಲೆ ಆ ವರ್ಷದ ಮಳೆಯ ಪ್ರಮಾಣ ಅಂದಾಜಿಸಲಾಗುತ್ತದೆ. ಇನ್ನು ಆ ಪುಟ್ಟ ಸ್ಥಳದಿಂದ ನೀರು ಹರಿದು ಬಂದರೇ ಉತ್ತಮ ಮಳೆಗಾಲ. ಇಲ್ಲದಿದ್ದಲ್ಲಿ ಬರಗಾಲ ಎಂಬ ನಂಬಿಕೆ ರೈತ ಸಮೂಹದ್ದಾಗಿದೆ.
ಸುಣ್ಣ-ಸುರುಮಗಳ ಲೀಲೆ: ದೇಗುಲದ ಅಂತರ ಗಂಗೆಯ ಮೇಲ್ಭಾಗದ ಅತ್ಯಂತ ರೋಮಾಂಚನ ಜತೆ ಯಾರೂ
ಹತ್ತಲಾಗದಂತ ಸ್ಥಳದಲ್ಲಿ ಆಶ್ಚರ್ಯಕರ ರೀತಿಯಲ್ಲಿ ಸುಣ್ಣ-ಸುರುಮ ತಾನೇ ಹಚ್ಚಿಕೊಳ್ಳುತ್ತದೆ ಎಂಬ ನಂಬಿಕೆ ಇಲ್ಲಿನ ಭಕ್ತರದ್ದಾಗಿದೆ.
ಹೀಗಾಗಿ ಯುಗಾದಿ ದಿನದ ಸಂಜೆ ದೇವಸ್ಥಾನದ ಒಂದೆಡೆ ಸುಣ್ಣ ಸುರುಮ ಇಟ್ಟು ಬರುತ್ತಾರೆ. ಬೆಳಗಾಗುವಷ್ಟರಲ್ಲಿ ಗುಡ್ಡದ ಪಡಿಯಲ್ಲಿ ಸುಣ್ಣ ಸುರುಮದ ಕುರುಹು ಕಾಣಿಸುತ್ತದೆ. ಸುಣ್ಣ ಸುರುಮ ಕಾಣಿಸುವ ಆಧಾರದ ಮೇಲೆ ವರ್ಷದ ಬೆಳೆ ಬರುವ ಅಂದಾಜನ್ನು ರೈತರು ಮಾಡುತ್ತಾರೆ.
ಬೆಳೆಗಳ ಅಂದಾಜು: ಸುಣ್ಣ ಬಹಳ ಲೇಪನವಾಗಿದ್ದರೆ ಎರೆ ಭೂಮಿಯಲ್ಲಿ ಉತ್ತಮ ಬೆಳೆ ಮತ್ತು ಸುರುಮ ಹೆಚ್ಚು ಹತ್ತಿದ್ದರೆ ಮಸಾರಿ ಭೂಮಿಯಲ್ಲಿ ಹೆಚ್ಚು ಬೆಳೆ ಬರುತ್ತದೆನ್ನುವುದು ಭಕ್ತರು ಹೇಳುವ ಮಾತು ರಾತ್ರಿ ನಡೆಯುವ ಸುಣ್ಣ ಸುರುಮಗಳ ಲೀಲೆ ನೋಡಲು ಹೋದರೆ ಕಣ್ಣುಗಳು ಹೋಗುತ್ತವೆ ಎನ್ನುವ ಮಾತು ಕೇಳಿ ಬರುತ್ತದೆ.
ಯುಗಾದಿಗೆ ಜಾತ್ರೆ ಮುನ್ನುಡಿ: ದವನದ ಹುಣ್ಣಿಮೆಯಂದು ನಡೆಯುವ ಜಾತ್ರೆಗೆ ಯುಗಾದಿ ಹಬ್ಬದ ದಿನ ಸೂರ್ಯೋದಯದ ಮುಂಚೆ ರಥದ ಆಲಯದಿಂದ ತೇರನ್ನು ಹೊರತರಲಾಗುವುದು. ದೇವಸ್ಥಾನದಲ್ಲಿ ಅಭಿಷೇಕ. ಪೂಜೆ, ಬೇವು-ಬೆಲ್ಲ ನೈವೇದ್ಯ ಮಾಡಿ ನಂತರ ರಥದ ಪೂಜಾ ಕಾರ್ಯಕ್ರಮ ನಡೆಸುವುದು ಸಂಪ್ರದಾಯ.
ದೇಶದಲ್ಲಿ ಪ್ರಚಾರದಲ್ಲಿರುವ 12 ಜ್ಯೋತಿರ್ಲಿಂಗಗಳ ಪೈಕಿ ಅಷ್ಟೆ ಅತ್ಯಂತ ಪ್ರಚಾರದಲ್ಲಿರುವ ಉಪ ಜ್ಯೋತಿರ್ಲಿಂಗಗಳು
ಉಂಟು. ಅಂತಹುದೇ ಉಪ ಜ್ಯೋತಿರ್ಲಿಂಗಗಳ ಸಾಲಿಗೆ ಸೇರುವ ದಕ್ಷಿಣ ಕಾಶಿ ಪ್ರಸಿದ್ಧಿ ಸ್ವಯಂಭು ಲಿಂಗ ಕಾಲಕಾಲೇಶ್ವರ ಲಿಂಗವು ಒಂದಾಗಿದೆ.
„ಡಿ.ಜಿ. ಮೋಮಿನ್‌

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.