ನರಗುಂದ ಬೆಟ್ಟಕ್ಕೆ ಪ್ರವಾಸಿ ತಾಣ ಮೆರುಗು

¬20 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ,ತಿಂಗಳಲ್ಲಿ ಮುಕ್ತಗೊಳ್ಳಲಿದೆ ಸಸ್ಯೊದ್ಯಾನ ,ಸೀತಾಪೇರಲ ಸಸ್ಯಪಾಲನೆಗೆ ಮರುಜೀವ

Team Udayavani, Mar 2, 2021, 1:21 PM IST

ನರಗುಂದ ಬೆಟ್ಟಕ್ಕೆ ಪ್ರವಾಸಿ ತಾಣ ಮೆರುಗು

ನರಗುಂದ: ಪಟ್ಟಣದ ಐತಿಹಾಸಿಕ ಬೆಟ್ಟ ಇನ್ನು ಪ್ರವಾಸಿ ತಾಣವಾಗಿ ಗುರುತಿಸಿಕೊಳ್ಳಲಿದೆ. ಹೌದು. ನರಗುಂದ ಸಂಸ್ಥಾನದ ಅರಸ ಬಾಬಾಸಾಹೇಬ ಭಾವೆ ಇತಿಹಾಸದ ಪಳೆಯುಳಿಕೆ ಎಂದೇ ಗುರುತಿಸಿಕೊಂಡು, ಮಲಗಿದ ಸಿಂಹದಂತೆ ಕಾಣುವ ಈ ಬೆಟ್ಟವು ಪ್ರೇಕ್ಷಣೀಯ ಸ್ಥಳವಾಗಿ ಪರಿವರ್ತನೆ ಹೊಂದಲಿದೆ.

274 ಎಕರೆ ವಿಸ್ತೀರ್ಣ ಹೊಂದಿರುವ ಈ ಬೆಟ್ಟವನ್ನು ಪ್ರವಾಸಿ ತಾಣವಾಗಿಸಲು 20 ಕೋಟಿ ರೂ.ವೆಚ್ಚದ ಯೋಜನೆಯನ್ನು ಅರಣ್ಯ ಇಲಾಖೆಗೆ ಕೈಗೆತ್ತಿಕೊಂಡಿದೆ. ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ಕಳೆದ 6 ತಿಂಗಳಿಂದ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಇನ್ನೊಂದು ತಿಂಗಳಿಗೆ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ಸಾರ್ವಜನಿಕ ಪ್ರವೇಶಕ್ಕೆ ಮುಕ್ತವಾಗಲಿದೆ.

ಮನರಂಜನೆಗೆ ವ್ಯವಸ್ಥೆ: ಸಸ್ಯೋದ್ಯಾನದಲ್ಲಿ ಮಕ್ಕಳಿಗೆ ಮನರಂಜನೆಗಾಗಿ ಚುಕ್‌ಬುಕ್‌ ಜಾಲಿಕಾಯಿ, ಜೋಕಾಲಿ, ಜಿಗ್‌ಜಾಗ್‌, ಜಾರುಗುಂಡಿ, ವ್ಯಾಯಾಮ, ಸ್ಪ್ರಿಂಗ್‌ ಬೈಕ್‌, ತಿರುಗುವ ತೊಟ್ಟಿಲು ನಿರ್ಮಿಸಲಾಗಿದೆ. ಸಾರ್ವಜನಿಕರ ವಿಶ್ರಾಂತಿಗಾಗಿ ಗ್ರಾನೈಟ್‌ನ 20, ಸಿಮೆಂಟ್‌ನ 5 ಬೆಂಚ್‌ಗಳನ್ನು ಇಲ್ಲಿ ಹಾಕಲಾಗಿದೆ. ಸುಂದರವಾದ 2 ವಿಶ್ರಾಂತಿ ಕುಟೀರಗಳನ್ನು ನಿರ್ಮಿಸಲಾಗಿದ್ದು, ಪ್ರತ್ಯೇಕ ಶೌಚಾಲಯ ನಿರ್ಮಿಸಲಾಗಿದೆ. ಕಟ್ಟಿಗೆಯಿಂದ ತಲಾ 1 ಜೋಕಾಲಿ, ಚುಕ್‌ಬುಕ್‌ ಜಲಿಕಾಯಿ, ಜಿಗ್‌ಜಾಗ್‌, ಬೆಂಚ್‌ಗಳನ್ನು ನಿರ್ಮಿಸುತ್ತಿರುವುದು ಸಸ್ಯೋದ್ಯಾನಕ್ಕೆ ಹೊಸ ಕಳೆ ತಂದುಕೊಟ್ಟಿದೆ.

ಹಸಿರು ತೋರಣ: ಗುಡ್ಡದ ಬದಿಗೆ 40 ಎಕರೆ ಪ್ರದೇಶ ವ್ಯಾಪ್ತಿಯ ಸಸ್ಯೋದ್ಯಾನದಲ್ಲಿ ಚೆರ್ರಿ, ಹಲಸು, ತಪಸಿ, ಪೇರಲ, ಬೇವು, ಎಂಟ್ರಿ, ಆಲ, ಅರಳೆ, ಬಸರಿ, ನೇರಳೆ, ಹುಣಸೆ, ಮಾವು, ಬಾದಾಮಿ ಸೇರಿ ವಿವಿಧ ಜಾತಿ 2 ಸಾವಿರಸಸಿಗಳು ಆಳೆತ್ತರಕ್ಕೆ ಬೆಳೆದು ನಿಂತಿದ್ದು, ಹಸಿರು ತೋರಣದಂತೆ ಗೋಚರಿಸುತ್ತಿದೆ. 2 ಕೊಳವೆ ಬಾವಿ ನೀರಿನ ವ್ಯವಸ್ಥೆಯಿದೆ. ಸಸ್ಯೋದ್ಯಾನ ಒಳಗಿನ ರಸ್ತೆಗಳ ಬದಿಗೆ ಹಸಿರು ಹುಲ್ಲುಹಾಸು ನಿರ್ಮಿಸಲಾಗಿದ್ದು, ಒಂದೆಡೆ ಸುಂದರವಾಗಿ ಕಲ್ಲಿನ ಪಿಚ್ಚಿಂಗ್‌ ಮಾಡಲಾಗಿದೆ. ಉದ್ಯಾನವನವನ್ನೇ ಕಾಣದ ಬಂಡಾಯ ನಾಡು ನರಗುಂದ ಜನರಿಗೆ ಸಸ್ಯೋದ್ಯಾನ ಸಂತಸ ಇಮ್ಮಡಿಗೊಳಿಸಿದೆ

ಸೀತಾಪೇರಲಕ್ಕೆ ಮರುಜೀವ :

ಸಿದ್ದೇಶ್ವರ ಬೆಟ್ಟದಲ್ಲಿರುವ ಸಾವಿರಾರು ಸೀತಾಪೇರಲ ಗಿಡಗಳಿಗೆ ಇದೀಗ ಅರಣ್ಯ ಇಲಾಖೆ ಮರುಜೀವ ನೀಡಿದ್ದು, ಈಗಾಗಲೇ 2 ಸಾವಿರ ಸಸಿಗಳನ್ನು ನೆಟ್ಟಿದ್ದು, ಬೆಟ್ಟದ ಸುತ್ತ 50 ಸಾವಿರ ಸೀತಾಪೇರಲ ಸಸಿ ನೆಡುವ ಗುರಿ ಹೊಂದಿದೆ.

ಜಾಲಿಕಂಟಿ ತೆರವು :

ಸೀತಾಪೇರಲ ವೈಭವದಿಂದ ಕಂಗೊಳಿಸಿದ್ದ ಬೆಟ್ಟದಲ್ಲಿ ಇಂದಿಗೂ ಕೆಲ ಸಸ್ಯಗಳು ಉಳಿದಿವೆ. ಇದೀಗ ಬೆಟ್ಟದ ಸುತ್ತಲೂ ಜಾಲಿಕಂಟಿ ತೆರವುಗೊಳಿಸಿ ತಂತಿಬೇಲಿ ಹಾಕಿ ರಕ್ಷಣೆಯ ಯೋಜನೆ ರೂಪಿಸಲಾಗಿದೆ. ಕೆಲವೆಡೆ ಜಾಲಿಕಂಟಿ ತೆರವು ಮಾಡಿ ಸೀತಾಪೇರಲ ಸಸಿ ನೆಡಲಾಗಿದೆ.

ನರಗುಂದ ಗುಡ್ಡದ 50 ಹೆಕ್ಟೇರ್‌ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಸಚಿವ ಸಿ.ಸಿ.ಪಾಟೀಲ ಅವರು 20 ಕೋಟಿ ರೂ. ವೆಚ್ಚದಲ್ಲಿ ಗುಡ್ಡದ ಸಮಗ್ರ ಅಭಿವೃದ್ಧಿಗೆ 2019ರಲ್ಲಿ ಸೂಚನೆ ನೀಡಿದ್ದರು. 1.5 ಕೋಟಿ ರೂ. ವೆಚ್ಚದಲ್ಲಿ ಸಸ್ಯೋದ್ಯಾನ ಸೇರಿ ವಿವಿಧ ಅಭಿವೃದ್ಧಿ ಕಾರ್ಯಗಳು ನಡೆದಿದೆ. ಇನ್ನೊಂದು ತಿಂಗಳಲ್ಲಿ ಸಾರ್ವಜನಿಕ ಪ್ರವೇಶಕ್ಕೆ ಮುಕ್ತಗೊಳಿಸಲಾಗುವುದು. – ಎ.ವಿ.ಸೂರ್ಯಸೇನ,ಡಿಸಿಎಫ್‌, ಗದಗ

 

ಸಿದ್ಧಲಿಂಗಯ್ಯ ಮಣ್ಣೂರಮಠ

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.