ಸಂಚಾರಿ ನಿಯಮ ಪಾಲಿಸಿ


Team Udayavani, Sep 13, 2019, 11:08 AM IST

gadaga-tdy-1

ಗದಗ: ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಆಯೋಜಿಸಿದ್ದ ಆಟೋ ಚಾಲಕರಿಗೆ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಎಸ್ಪಿ ಶ್ರೀನಾಥ ಜೋಶಿ ಮಾತನಾಡಿದರು.

ಗದಗ: ಕಾನೂನನ್ನು ಗೌರವಿಸಿ ಪಾಲಿಸುವವರಿಗೆ ಯಾವುದೇ ತೊಂದರೆಗಳು ಎದುರಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ವಾಹನ ಸವಾರರು ಮತ್ತು ಪಾದಚಾರಿಗಳು ರಸ್ತೆಗಳಲ್ಲಿ ಸಂಚರಿಸುವಾಗ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇದರಿಂದ ಪ್ರಯಾಣವು ಸುರಕ್ಷಿತವಾಗಿರಲಿದ್ದು, ದಂಡ ತೆರವು ಪ್ರಸಂಗವೂ ಬಾರದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಿವಾಸ ಜೋಶಿ ಕಿವಿಮಾತು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜೈಭೀಮ ಆಟೋ ರಿಕ್ಷಾ ಮಾಲಕರ, ಚಾಲಕರ ಸಂಘ ಹಾಗೂ ಜಿಲ್ಲಾ ಆಟೋ ರಿಕ್ಷಾ ಮಾಲಕರ, ಚಾಲಕರ ಸಂಘದ ಆಶ್ರಯದಲ್ಲಿ ನಗರದ ತೋಂಟದಾರ್ಯ ಸಿದ್ಧಲಿಂಗ ಕಲ್ಯಾಣ ಕೇಂದ್ರದಲ್ಲಿ ಗುರುವಾರ ಆಯೋಜಿಸಿದ್ದ ಆಟೋ ಚಾಲಕರಿಗೆ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಾಹನ ಸವಾರರು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುತ್ತಿದೆ. ಎಲ್ಲರೂ ಕಟ್ಟುನಿಟ್ಟಾಗಿ ಸಂಚಾರಿ ನಿಯಮಗಳನ್ನು ಪಾಲಿಸಬೇಕು. ಸಂಭವಿಸಬಹುದಾದ ಅಪಘಾತಗಳಿಗೆ ಕಡಿವಾಣ ಹಾಕಬೇಕು ಎಂಬ ಉದ್ದೇಶದಿಂದ ಕೇಂದ್ರ ಮತ್ತು ಸರಕಾರ ಇತ್ತೀಚೆಗೆ ದಂಡದ ಮೌಲ್ಯವನ್ನು ಹೆಚ್ಚಿಸಿದೆಯೇ ಹೊರತು, ಆದಾಯ ಗಳಿಸುವ ಉದ್ದೇಶವಲ್ಲ ಎಂದು ಸ್ಪಷ್ಟಪಡಿಸಿದರು.

ಈ ಹಿನ್ನೆಲೆಯಲ್ಲಿ ಆಟೋ ಚಾಲಕರು ಕಟ್ಟುನಿಟ್ಟಾಗಿ ಸಂಚಾರಿ ನಿಯಮ ಪಾಲಿಸಬೇಕು. ಕಡ್ಡಾಯವಾಗಿ ಖಾಕಿ ಸಮವಸ್ತ್ರ ಧರಿಸಬೇಕು. ಆ ಮೂಲಕ ಇತರರಿಗೆ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.

ಆಟೋ ಚಾಲಕರಿಗೆ ನಗರದ ಗಲ್ಲಿಗಲ್ಲಿಯ ಸಂಪೂರ್ಣ ಮಾಹಿತಿ ಇರುತ್ತದೆ. ಆ ಪೈಕಿ ಜೂಜಾಟ, ಗುಂಪು ಗಲಾಟೆ, ವೇಶ್ಯಾವಾಟಿಕೆ ಸೇರಿದಂತೆ ಯಾವುದೇ ರೀತಿಯ ಕಾನೂನು ಬಾಹಿರ ಕೃತ್ಯಗಳು ನಡೆಯುತ್ತಿದ್ದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ ಸಾಮಾಜಿಕ ಕರ್ತವ್ಯವನ್ನು ನಿರ್ವಹಿಸಬೇಕು. ಆ ಮೂಲಕ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡಲು ಪೊಲೀಸ್‌ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್‌.ಜಿ. ಸಲಗರೆ ಮಾತನಾಡಿ, ಭೂಮಿಯಲ್ಲಿರುವ ಸಕಲ ಜೀವರಾಶಿಗಳಿಗಿಂತ ಮಾನವನ ಬದುಕು ಅತ್ಯಂತ ಮಹತ್ವದ್ದಾಗಿದೆ. ಇಡೀ ಕುಟುಂಬ ನಮ್ಮನ್ನೇ ಅವಲಂಬಿಸಿರುತ್ತದೆ. ಹೀಗಾಗಿ ಸಂಚಾರಿ ನಿಯಮಗಳನ್ನು ಪಾಲಿಸುವ ಮೂಲಕ ಸುರಕ್ಷಿತವಾಗಿ ಪ್ರಯಾಣಿಸಬೇಕು ಎಂದು ಹೇಳಿದರು.

ಜಿಲ್ಲಾ ಆಟೋ ಮಾಲಕರ ಸಂಘದ ಗೌರವ ಅಧ್ಯಕ್ಷ ಎಸ್‌.ಎನ್‌. ಬಳ್ಳಾರಿ ಮಾತನಾಡಿ, ಕಾರ್ಮಿಕ ಇಲಾಖೆಯಲ್ಲಿರುವ ಹಲವಾರು ಯೋಜನೆಗಳ ಕುರಿತು ಮಾಹಿತಿ ನೀಡಲಾಗುತ್ತಿದೆ. ಸರಕಾರದ ಹಲವಾರು ಯೋಜನೆಗಳನ್ನು ಆಟೋ ರಿಕ್ಷಾದವರು ಪಡೆದುಕೊಳ್ಳಬೇಕು. ಕಾನೂನುಗಳನ್ನು ನಾವುಗಳ ಪಾಲನೆ ಮಾಡಬೇಕು ಎಂದರು.

ಸಾರಿಗೆ ಅಧಿಕಾರಿ ಬಾಲಕೃಷ್ಣ ಮಾತನಾಡಿ, ದೇಶದಲ್ಲಿ ನೂತನ ಮೋಟಾರು ಕಾಯ್ದೆ ಜಾರಿಗೆ ತರಲಾಗಿದ್ದು, ದಂಡದ ಮೊತ್ತ ದುಪ್ಪಟ್ಟಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಸಂಚಾರಿ ನಿಯಮಗಳನ್ನು ಪಾಲಿಸಿ ದಂಡದಿಂದ ಮುಕ್ತರಾಗಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಆಟೋ ಮಾಲೀಕರ ಸಂಘದ ಅಧ್ಯಕ್ಷ ವಿಜಯ ಕಲ್ಮನಿ, ಜೈ ಭೀಮ ಆಟೋ ರಿಕ್ಷಾ ಮಾಲಕರ ಸಂಘದ ಅಧ್ಯಕ್ಷ ಪರಶುರಾಮ ಪೂಜಾರ, ಮಾರುತಿ ಗುಡಿಮನಿ, ಮಂಜುನಾಥ ಅಗಸಿಮನಿ, ಎಂ.ಎ. ಧಾರವಾಡ ಇದ್ದರು.

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.