ಅಂತ್ಯಕ್ರಿಯೆಗೆ ಹೋದವರು ದುರಂತ ಅಂತ್ಯವಾದರು.! : ಕಾರು ಅಪಘಾತದಲ್ಲಿ ನಾಲ್ವರು ಸಾವು
Team Udayavani, May 12, 2021, 6:12 PM IST
ಗದಗ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ತಾಲೂಕಿನ ಹರ್ತಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ನವಲಗುಂದ ತಾಲೂಕಿನ ಆರಟ್ಟಿ ಗ್ರಾಮದ ವೀರೇಶ(26), ಶೇಖಪ್ಪ(45), ಬಾಪೂಗೌಡ (25),ಸಾವಿತ್ರಿ(50) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದರು. ಒಬ್ಬರು ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆದಲ್ಲೇ ಕೊನೆಯುಸಿರೆಳೆದರು. ಇನ್ನು, ಗದಗ ತಾಲೂಕಿನ ಲಿಂಗದಾಳ ಗ್ರಾಮದ ಶಂಕ್ರಪ್ಪ ಬುಕ್ಕಟಿಗಾರ ಅಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ : ಸುಪ್ರೀಂ ಕೋರ್ಟ್ ನ್ಯಾಯಾಧೀಶ ಡಿ.ವೈ.ಚಂದ್ರಚೂಡ್ ಗೆ ಕೋವಿಡ್ ಪಾಸಿಟಿವ್
ಇವರು ನವಲಗುಂದದಿಂದ ಗದಗ ಮರ್ಗವಾಗಿ ಲಕ್ಷ್ಮೇಶ್ವರದಲ್ಲಿ ಹತ್ತಿರದ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದರಿಂದ ಭಾಗಶ ಕಾರು ಮರಕ್ಕೆ ಸಿಲುಕಿಕೊಂಡಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ.
ಮೃತ ದೇಹಗಳು ಬಹುದೋರಕ್ಕೆ ಹೋಗಿ ಬಿದ್ದಿದ್ದವು ಎಂಬುದ ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಮೃತರ ಪೈಕಿ ಬಾಪೂಗೌಡ ಎಂಬುವವರಿಗೆ ಇದೇ 20 ರಂದು ಮದುವೆ ನಿಶ್ಚಯವಾಗಿತ್ತು ಎಂದು ತಿಳಿದು ಬಂದಿದೆ.
ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ