ಸಾರಿಗೆ ಚಾಲಕರು ಶ್ರೀಕೃಷ್ಣರಿದ್ದಂತೆ: ಶ್ರೀರಾಮುಲು

ನೂರಾರು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಮಾದರಿ ಮತಕ್ಷೇತ್ರವನ್ನಾಗಿ ಮಾಡಲಾಗುತ್ತಿದೆ

Team Udayavani, Mar 14, 2022, 6:06 PM IST

ಸಾರಿಗೆ ಚಾಲಕರು ಶ್ರೀಕೃಷ್ಣರಿದ್ದಂತೆ: ಶ್ರೀರಾಮುಲು

ಶಿರಹಟ್ಟಿ: ಮಹಾಭಾರತದಲ್ಲಿ ಅರ್ಜುನನಿಗೆ ಶ್ರೀಕೃಷ್ಣ ಪರಮಾತ್ಮ ಸಾರಥಿಯಾಗಿದ್ದರು. ಅದೇ ರೀತಿ ಈ ಕಲಿಯುಗದಲ್ಲಿ ಎದುರಾದ ಕೋವೀಡ್‌ ನಂತಹ ಕ್ಲಿಷ್ಟಕರ ಸಂದರ್ಭದಲ್ಲಿ ನಮ್ಮ ಚಾಲಕರು ತಮ್ಮ ಜೀವನದ ಹಂಗುದೊರೆದು ಜನರ ಸೇವೆಗೈದು ಶ್ರೀಕೃಷ್ಣ ಪರಮಾತ್ಮರಾಗಿದ್ದಾರೆಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.

ಪಟ್ಟಣದಲ್ಲಿ ನಿರ್ಮಾಣವಾಗಿರುವ ನೂತನ ಶಿರಹಟ್ಟಿ ಬಸ್‌ ಡಿಪೋ ಘಟಕದ ಉದ್ಘಾಟನೆ ಹಾಗೂ ಅಪಘಾತ ರಹಿತ ಚಾಲಕರಿಗೆ ಬಂಗಾರ-ಬೆಳ್ಳಿ ಪದಕ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಕೊರೊನಾ ಸಂದರ್ಭದಲ್ಲಿ ಕುಟುಂಬ ಮತ್ತು ತಮ್ಮ ಜೀವದ ಹಂಗು ತೊರೆದು ದುಡಿದ ಚಾಲಕರ ಸೇವೆ ಮರೆಯಲು ಸಾಧ್ಯವಿಲ್ಲ. ಮುಷ್ಕರದಲ್ಲಿ ಅಮಾನತಾದ ನೌಕರರ ಪೈಕಿ ಕೆಲವರನ್ನು ಮರಳಿ ಕರ್ತವ್ಯಕ್ಕೆ ನೇಮಕ ಮಾಡಲಾಗಿದೆ. ಚಾಲಕರ-ನಿರ್ವಾಹಕರ ವೇತನ ಪರಿಷ್ಕರಣೆ, ವಿವಿಧ ಬೇಡಿಕೆಗಳನ್ನು ಸಿಎಂ ಜತೆ ಮಾತನಾಡಿ ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ ಮಾತನಾಡಿ, ಶಿರಹಟ್ಟಿ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಸಾರಿಗೆ ಬಸ್‌ ಡಿಪೋ ಘಟಕದ ಕನಸು ಇಂದು ನನಸಾಗಿದೆ. ಕೊರೊನಾದಿಂದ ಸರ್ಕಾರದ ಆರ್ಥಿಕ ಪರಿಸ್ಥಿತಿ ವಿಷಮವಾದ್ದರೂ ರಾಜ್ಯ ಅಭಿವೃದ್ಧಿಯಿಂದ ಹಿಂದೆ ಸರಿದಿಲ್ಲ. ಸಾರಿಗೆ ಇಲಾಖೆಯವರು ಈ ಬಾರಿ 2 ಸಾವಿರ ನೂತನ ಬಸ್‌ ಗಳಿಗೆ ಬೇಡಿಕೆ ಇಟ್ಟಿದ್ದು, ಇದರಲ್ಲಿ 1 ಸಾವಿರ ಬಸ್‌ ಕಲ್ಪಿಸಲು ಕ್ರಮ ಜರುಗಿಸಬೇಕೆಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಶಾಸಕ ರಾಮಣ್ಣ ಲಮಾಣಿ ಮಾತನಾಡಿ, ಮತಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಅದರಲ್ಲಿ ನೂತನ ಬಸ್‌ ಡಿಪೋ ಘಟಕ ಸ್ಥಾಪನೆ, 100 ಬೆಡ್‌ ಆಸ್ಪತ್ರೆ, ಕೋರ್ಟ್‌, ನೀರಾವರಿ ಯೋಜನೆಗೆ 200 ಕೋಟಿ ರೂ. ಮಂಜೂರು, ತಾಲೂಕಿನ ಇಟಗಿ ಗ್ರಾಮದ ಹತ್ತಿರ 1 ಕೋಟಿ ರೂ. ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ ಮತಕ್ಷೇತ್ರದಲ್ಲಿ ನೂರಾರು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಮಾದರಿ ಮತಕ್ಷೇತ್ರವನ್ನಾಗಿ ಮಾಡಲಾಗುತ್ತಿದೆ ಎಂದು ಹೇಳಿದರು.

ಈ ವೇಳೆ 15 ವರ್ಷ ಅಪಘಾತ ರಹಿತ ಚಾಲನೆ ಮಾಡಿದ 9 ವಿಭಾಗಗಳ 58 ಘಟಕಗಳ 125 ಚಾಲಕರಿಗೆ ಬಂಗಾರದ ಪದಕ, 5 ವರ್ಷ ಅಪಘಾತ ರಹಿತ ಚಾಲನೆ ಮಾಡಿದ ಚಾಲಕರಿಗೆ ಬೆಳ್ಳಿ ಪದಕ ನೀಡಿ ಸಚಿವ ಶ್ರೀ ರಾಮುಲು ಗೌರವಿಸಿದರು. ವಾ.ಕ.ರ.ಸಾ.ಸಂಸ್ಥೆ ಅಧ್ಯಕ್ಷ ವಿ.ಎಸ್‌. ಪಾಟೀಲ, ಕರ್ನಾಟಕ ದ್ರಾಕ್ಷಿರಸ ಮಂಡಳಿ ಅಧ್ಯಕ್ಷ ಕಾಂತಿಲಾಲ ಬನ್ಸಾಲಿ, ವಾ.ಕ.ರ.ಸಾ. ಸಂಸ್ಥೆ ಉಪಾಧ್ಯಕ್ಷ ಬಸವರಾಜ ಕೆಲಗಾರ, ಪಪಂ ಅಧ್ಯಕ್ಷೆ ಗಂಗಮ್ಮ ಆಲೂರ, ಉಪಾಧಕ್ಷ ಇಸಾಕ ಆದ್ರಳ್ಳಿ, ತಾಲೂಕಿನ ಬಿಜೆಪಿ ಮುಖಂಡರು, ಸಾರಿಗೆ ಇಲಾಖೆ ಅಧಿಕಾರಿಗಳು, ವಿವಿಧ ಸಂಘಟನೆಗಳ ಪದಾ ಧಿಕಾರಿಗಳು, ಶಿರಹಟ್ಟಿ ಜನತೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.