ಹೆದ್ದಾರಿ ಪಕ್ಕದ ಮರಗಳಿಗೆ ಮರುಜೀವ!

•ಕಲಕೇರಿಯಿಂದ ಕೊಣ್ಣೂರವರೆಗೆ 7800 ಸಸಿ ನೆಡಲು ಚಾಲನೆ • ಎರಡೂ ಬದಿಗೆ ಮರ ಬೆಳೆಸುವ ಗುರಿ

Team Udayavani, May 26, 2019, 11:18 AM IST

gadaga-tdy-2..

ನರಗುಂದ: ಪಟ್ಟಣದ ನಂ. 218ರ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಗೆ ನಿರಂತರ ನೆರಳಿನಾಶ್ರಯ ನೀಡಿದ್ದ ದಶಕಗಳ ಇತಿಹಾಸದ ಬಹುದೊಡ್ಡ ಮರಗಳು ಹೆದ್ದಾರಿ ಅಗಲೀಕರಣಕ್ಕೆ ಬಲಿಯಾದ ನೋವು ಪರಿಸರ ಪ್ರೇಮಿಗಳಲ್ಲಿ ಕಾಡುತ್ತಿತ್ತು. ಇದೀಗ ಅದಕ್ಕೆ ಪರಿಹಾರವಾಗಿ ಅರಣ್ಯ ಇಲಾಖೆ ಮರಗಳಿಗೆ ಮರುಜೀವ ನೀಡಲು ಮುಂದಾಗಿದೆ. ಹೆದ್ದಾರಿ ಎರಡೂ ಬದಿಗೆ 7800 ಮರಗಳನ್ನು ಬೆಳೆಸಲು ಸಸಿ ನೆಡುವ ಕಾರ್ಯ ಭರದಿಂದ ಸಾಗಿದೆ.

ಅರಣ್ಯ ಇಲಾಖೆ ತಾಲೂಕಿನ ಕಲಕೇರಿ ಗ್ರಾಮದಿಂದ ಕೊಣ್ಣೂರ ಗ್ರಾಮದವರೆಗೆ 25 ಕಿಮೀ ವ್ಯಾಪ್ತಿಯುದ್ದಕ್ಕೂ ರಾಷ್ಟ್ರೀಯ ಹೆದ್ದಾರಿ ಎರಡೂ ಬದಿಗೆ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿದೆ. ಈಗಾಗಲೇ ಪಟ್ಟಣ ಹೊರಲವಯ ಅಲ್ಲಿಭಾಯಿ ನಗರದಿಂದ ಕೊಣ್ಣೂರ ಕಡೆಗೆ ಸಸಿ ನೆಡಲಾಗುತ್ತಿದೆ.

7800 ಸಸಿಗಳು:

ಕಳೆದ ಎರಡು ವರ್ಷಗಳ ಹಿಂದೆ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಬದಿಗಿದ್ದ ತಾಲೂಕಿನ ವ್ಯಾಪ್ತಿಯ 263 ಬಹುದೊಡ್ಡ ಮರಗಳನ್ನು ಕಡಿದು ಹಾಕಲಾಗಿತ್ತು. ಆ ಕೊರತೆ ನೀಗಿಸಿಕೊಳ್ಳಲು ಮುಂದಾದ ಅರಣ್ಯ ಇಲಾಖೆ ಅತ್ಯಧಿಕ 7800 ಮರಗಳನ್ನು ಬೆಳೆಸಲು ಮುಂದಾಗಿದೆ. ಹೆದ್ದಾರಿಯ ಎರಡೂ ಬದಿಗೆ 5 ಮೀಟರ್‌ಗೊಂದು ಸಸಿ ನೆಡಲಾಗುತ್ತಿದೆ. 10 ಸಸಿಗಳಿಗೆ ಒಂದು ಹೂವಿನ ಸಸಿ ನೆಡಲಾಗುತ್ತಿದೆ. ಅರಣ್ಯ ಇಲಾಖೆಯ ಕರ್ನಾಟಕ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ಈ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಹೀಗಾಗಿ ಹೆದ್ದಾರಿ ಬದಿಗೆ ನೆರಳು ನೀಡಿದ್ದ ಮರಗಳನ್ನು ಕಳೆದುಕೊಂಡ ಈ ಭಾಗದ ಜನರು ಇದೀಗ ಮತ್ತೇ ಹೆದ್ದಾರಿ ಬದಿಗೆ ಮರಗಳನ್ನು ನೋಡುವ ಅವಕಾಶ ಒದಗಿ ಬಂದಂತಾಗಿದೆ.

ಯಾವ ಮರಗಳು: ಹೆದ್ದಾರಿ ಬದಿಗೆ ಬೇವು, ಆಲ, ಅರಳೆ, ಪೋಲ್ವೋ ಫ್ಲವರ್‌, ಆಕಾಶ ಮಲ್ಲಿಗೆ, ಮಹಾಗನಿ, ನೇರಳೆ, ಚಳ್ಳೆ, ರೇನ್‌ಟ್ರೀ, ತಾಡಸಿ, ಅತ್ತಿ, ಹೊಂಗೆ ಮುಂತಾದ ಸಸಿಗಳನ್ನು ನೆ‌ಡುವ ಕಾರ್ಯ ಭರದಿಂದ ಸಾಗಿದೆ. ಈಗಾಗಲೇ ಕೊಣ್ಣೂರು ಕಡೆಗೆ ಅಲ್ಲಿಭಾಯಿ ನಗರದಿಂದ ಬಂಡೆಮ್ಮ ನಗರವರೆಗೆ ಸಸಿ ನೆಡಲಾಗಿದೆ. ಹೆದ್ದಾರಿ ಎರಡೂ ಬದಿಗೆ ಮರಗಳನ್ನು ಬೆಳೆಸಲಾಗುತ್ತಿದೆ. ಹೆದ್ದಾರಿ 13 ಮೀಟರ್‌ ಅಗಲದ ವ್ಯಾಪ್ತಿಯ ಹೊರಗಡೆಗೆ ಸಸಿ ನೆಡಬೇಕಾಗಿದೆ. ಕೆಲವೊಂದು ಕಡೆಗೆ ರೈತರ ಜಮೀನಿನ ಬದುವಿಗೆ ಸಸಿ ನೆಡಬೇಕಾಗುತ್ತಿದೆ. ಈ ಸಂದರ್ಭದಲ್ಲಿ ರೈತರು ಸಹಕರಿಸಲಿ ಎಂಬುದು ಅರಣ್ಯ ಇಲಾಖೆ ಅಧಿಕಾರಿಗಳ ಆಶಯವಾಗಿದೆ.

ಒಟ್ಟಾರೆ ಕಲಕೇರಿ ಗ್ರಾಮದಿಂದ ಕೊಣ್ಣೂರವರೆಗೆ 263 ಬೃಹತ್‌ ಮರಗಳನ್ನು ಬಲಿ ತೆಗೆದುಕೊಂಡ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಬಳಿಕ ಮತ್ತೇ ಹೆದ್ದಾರಿ ಎರಡೂ ಬದಿಗೆ ಮರಗಳನ್ನು ಬೆಳೆಸಲು ಅರಣ್ಯ ಇಲಾಖೆ ಚಾಲನೆ ನೀಡಿದ್ದು, ನೆಟ್ಟ ಸಸಿಗಳನ್ನು ಪಾಲನೆ ಪೋಷಣೆ ಮಾಡುವಲ್ಲಿ ಕೂಡ ಅರಣ್ಯ ಇಲಾಖೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕಾಗಿದೆ.

7800 ಸಸಿ ನೆಡಲು ಯೋಜನೆ:

ಹಿಂದೆ ಹೆದ್ದಾರಿ ಅಗಲೀಕರಣಕ್ಕೆ 263 ಮರಗಳನ್ನು ತೆರವು ಮಾಡಲಾಗಿತ್ತು. ಇದೀಗ ಕಲಕೇರಿ ಗ್ರಾಮದಿಂದ ಕೊಣ್ಣೂರವರೆಗೆ ಹೆದ್ದಾರಿ ಎರಡೂ ಬದಿಗೆ 7800 ಸಸಿಗಳನ್ನು ನೆಡುವ ಯೋಜನೆ ರೂಪಿಸಿ ಚಾಲನೆ ನೀಡಲಾಗಿದೆ. ಇದಕ್ಕೆ ಸಮುದಾಯದ ಸಹಕಾರವೂ ಸಿಗಲಿ. • ಸತೀಶ ಮಾಲಾಪೂರ, ಉಪ ವಲಯ ಅರಣ್ಯಾಧಿಕಾರಿ
•ಸಿದ್ಧಲಿಂಗಯ್ಯ ಮಣ್ಣೂರಮಠ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.