ರೈತರ ನಿದ್ದೆಗೆಡಿಸಿದ ಜಿಂಕೆಗಳ ಹಿಂಡು

•ಸಾಕಾಯ್ತಪ್ಪ ಕಾಟ•ಬೆಳೆ ರಕ್ಷಿಸಿಕೊಳ್ಳಲು ಹೆಣಗಾಡುತ್ತಿರುವ ರೈತರು

Team Udayavani, Jul 19, 2019, 9:44 AM IST

gadaga-tdy-1

ಲಕ್ಷ್ಮೇಶ್ವರ: ಕೃಷಿ ಜಮೀನಿನಲ್ಲಿ ಕಂಡು ಬಂದ ಜಿಂಕೆಗಳು.

ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಸೇರಿ ತಾಲೂಕಿನ ಗೋವನಾಳ, ಶಿಗ್ಲಿ, ಸೂರಣಗಿ, ಬಾಲೇಹೊಸೂರ, ಯಳವತ್ತಿ, ಯತ್ನಳ್ಳಿ, ಗೊಜನೂರ, ಅಕ್ಕಿಗುಂದ ಸೇರಿದಂತೆ ಅನೇಕ ಕಡೆಗಳ ಜಿಂಕೆಗಳ ಹಾವಳಿ ಹೆಚ್ಚಿದ್ದು, ಬೆಳೆ ರಕ್ಷಿಸಿಕೊಳ್ಳಲು ರೈತರು ಹೆಣಗಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಜಿಂಕೆಗಳ ಹಿಂಡು ಬೆಳಗಿನ ಜಾವ ಮತ್ತು ಸಂಜೆ ಹೊಲದಲ್ಲಿನ ಎಳೆಯ ಪೈರುಗಳನ್ನು ತಿನ್ನುವುದರ ಜತೆಗೆ ಬೆಳೆ ಹಾಳು ಮಾಡುತ್ತಿವೆ. ಸತತ ಬರದಿಂದ ತತ್ತರಿಸಿದ್ದ ರೈತ ಸಮುದಾಯಕ್ಕೆ ಈ ವರ್ಷ ತಡವಾದರೂ ಹದವಾದ ಮಳೆಯಾಗಿದ್ದರಿಂದ ಬಿತ್ತನೆ ಮಾಡಿದ ರೈತರು ಹೊಲದಲ್ಲಿನ ಬೆಳೆ ಕಂಡು ಹರ್ಷಿತರಾಗಿದ್ದಾರೆ. ಆದರೆ ಈಗ ಜಿಂಕೆಗಳು ಬೆಳೆ ಹಾನಿ ಮಾಡುತ್ತಿರುವುದರಿಂದ ರೈತರ ಹರ್ಷಕ್ಕೆ ಕೊಡಲಿ ಪೆಟ್ಟು ಬಿದ್ದಿದೆ.

ಇದೀಗ ತಾನೇ ಭೂ ತಾಯಿಯ ಒಡಲಿನಿಂದ ಚಿಗುರು ಮೊಳಕೆಯೊಡೆದು ಎಲ್ಲೆಡೆ ಹಸಿರು ಕಾಣ ತೊಡಗಿದೆ. ಈ ಹಸಿರನ್ನು ಮೂರ್‍ನಾಲ್ಕು ವರ್ಷಗಳಿಂದ ಕಾಣದ ಜಿಂಕೆಗಳು ಬೆಳೆಗಳಲ್ಲಿ ಚೆಲ್ಲಾಟ ವಾಡುವುದರ ಜತೆಗೆ ಎಳೆಯ ಪೈರನ್ನು ತಿನ್ನುತ್ತಿವೆ. ತಾಲೂಕೊಂದರಲ್ಲಿಯೇ 10 ಸಾವಿರಕ್ಕೂ ಹೆಚ್ಚು ಜಿಂಕೆಗಳಿವೆ ಎಂದು ಅರಣ್ಯ ಇಲಾಖೆ ಅಂದಾಜಿಸಿದ್ದು ಇದೀಗ ಜಿಂಕೆಗಳ ಹಾವಳಿಯಿಂದ ಬೆಳೆ ಹಾಳಾಗುತ್ತಿವೆ ಎಂದು ಅವಲೊತ್ತುಕೊಳ್ಳುತ್ತಿದ್ದರೆ ಅರಣ್ಯ ಅಧಿಕಾರಿಗಳು ಮಾತ್ರ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

ಇದರಿಂದಾಗಿ ರೈತರು ಬೆಳೆ ರಕ್ಷಿಸಿಕೊಳ್ಳಲು ಮಾರ್ಗೋಪಾಯ ಕಂಡುಕೊಳ್ಳುತ್ತಿದ್ದಾರೆ. ಜಮೀನುಗಳಲ್ಲಿ ಜಿಂಕೆಗಳು ಬರದಂತೆ ಪ್ಲಾಸ್ಟಿಕ್‌ ಹಾಳೆ, ಬಟ್ಟೆಗಳನ್ನು ಹಾರಾಡುವಂತೆ ಕಟ್ಟುತ್ತಿದ್ದಾರೆ. ಇನ್ನು ಕೆಲವು ಕಡೆ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷದ ಧ್ವಜಗಳೂ ಅಲ್ಲಲ್ಲಿ ಹಾರಾಡುತ್ತಿವೆ. ಬೆದರು ಬೊಂಬೆಗಳನ್ನೂ ನಿಲ್ಲಿಸುತ್ತಿದ್ದಾರೆ ಜತೆಗೆ ಸಂಜೆ ಮತ್ತು ಬೆಳಿಗ್ಗೆ ಜಮೀನುಗಳಿಗೆ ತಪ್ಪದೇ ಕಾವಲು ಕಾಯುತ್ತಿದ್ದಾರೆ. ಪಟಾಕಿ ಸಿಡಿಸುವ, ತಗಡಿನ ಡಬ್ಬಿ ಬಾರಿಸುವ ಮೂಲಕ ಜಿಂಕೆಗಳು ಜಮೀನಿನ ಹತ್ತಿರ ಸುಳಿಯದಂತೆ ಮುಂಜಾಗ್ರತ ಕ್ರಮ ಕೈಗೊಳ್ಳುತ್ತಿದ್ದಾರೆ.

ಇಷ್ಟಾಗಿಯೂ ಜಿಂಕೆಗಳ ಹಾವಳಿ ತಪ್ಪದ್ದರಿಂದ ಗೋವನಾಳ ಗ್ರಾಮದ ರೈತ ರಾಮನಗೌಡ ಕೊರಡೂರ ತನ್ನ ಒಂದು ಎಕಗೆ ಜಮೀನಿನಲ್ಲಿ ಬೆಳೆದಿರುವ ನೀರಾವರಿ ಮೆಣಸಿನಕಾಯಿ ಬೆಳೆ ರಕ್ಷಿಸಲು ಜಮೀನಿನ ಸುತ್ತಲೂ ಹತ್ತಾರು ಸಾವಿರ ರೂ ಖರ್ಚು ಮಾಡಿ ಜಾಳಗಿ ಪರದೆ ಅಳವಡಿಸುವ ಮೂಲಕ ಬೆಳೆ ರಕ್ಷಣೆಗೆ ತಾತ್ಕಾಲಿಕ ಪರಿಹಾರ ಕಂಡುಕೊಂಡಿದ್ದಾರೆ. ನೀರಾವರಿ ಇದ್ದ ರೈತರು ವರ್ಷಕ್ಕೆ ಮೂರ್‍ನಾಲ್ಕು ಬೆಳೆ ಬೆಳೆಯುವುದರಿಂದ ಅವರು ಸಾವಿರಾರು ಖರ್ಚು ಮಾಡಿ ಜಾಳಗಿ ಮತ್ತು ತಂತಿ ಬೇಲಿ ಹಾಕಿಸುತ್ತಾರೆ. ಆದರೆ ಮಳೆಯಾಧಾರಿತ ಖುಷ್ಕಿ ಜಮೀನಿನಲ್ಲಿ ಒಂದು ಬೆಳೆ ಬರುವುದೇ ಕಷ್ಟ. ಇನ್ನು ಸಾವಿರಾರೂ ಖರ್ಚು ಮಾಡಿ ಬೆಳೆ ರಕ್ಷಿಸಿಕೊಳ್ಳುವುದು ಅಸಾಧ್ಯ ಎಂದು ಅವಲೊತ್ತುಕೊಳ್ಳುತ್ತಾರೆ ರೈತರಾದ ರಾಮನಗೌಡ ಕೊರಡೂರ, ನೀಲಪ್ಪಗೌಡ ಮರಿಲಿಂಗನಗೌಡ, ಬಸಮ್ಮ ಕರೆಗೌಡ್ರ, ಶೇಖರಗೌಡ ಕೊರಡೂರ.

ಜಿಂಕೆಗಳ ಹಾವಳಿಯಿಂದ ಬೆಳೆ ಹಾನಿಯಾಗಿದ್ದರೆ ರೈತರು ಸೂಕ್ತ ದಾಖಲೆಗಳೊಂದಿಗೆ ಅರಣ್ಯ ಇಲಾಖೆಗೆ ಅರ್ಜಿ ಸಲ್ಲಿಸಬೇಕು. ಇಲಾಖೆ ಸಿಬ್ಬಂದಿ ಬೆಳೆ ಹಾನಿ ಪ್ರದೇಶ ಪರಿಶೀಲಿಸಿ ನಿಯಮಾವಳಿಯಂತೆ ಹಾನಿಗೀಡಾದ ಪ್ರಮಾಣ ಗುರುತಿಸಿ ಅರ್ಜಿ ಅಪ್‌ಲೋಡ್‌ ಮಾಡುತ್ತಾರೆ. ಬೆಳೆಹಾನಿಗೊಳಗಾದ ರೈತರ ಖಾತೆಗೆ ನೇರವಾಗಿ ಪರಿಹಾರ ಮೊತ್ತ ಜಮೆಯಾಗುತ್ತದೆ ಎನ್ನುತ್ತಾರೆ ತಾಲೂಕು ಅರಣ್ಯಾಧಿಕಾರಿ ಎಸ್‌.ಎಚ್.ಪೂಜಾರ.

• ಅಸಹಾಯಕತೆ ವ್ಯಕ್ತಪಡಿಸಿದ ಅರಣ್ಯಾಧಿಕಾರಿಗಳು

• ಬೆಳ್ಳಂಬೆಳಿಗ್ಗೆ-ಸಂಜೆ ಹೊಲಗಳಿಗೆ ಇವುಗಳ ದಾಳಿ

• ಹೊಲದಲ್ಲಿನ ಎಳೆಯ ಪೈರು ತಿಂದು ಮಾಡುತ್ತವೆ ಹಾಳು

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.