ಲಾಕ್‌ಡೌನ್‌ ಸಡಿಲಿಕೆಯೇ ತಲೆನೋವು

ಅವಳಿ ನಗರದಲ್ಲಿ ಹೆಚ್ಚಿದ ಜನಸಂದಣಿ

Team Udayavani, May 18, 2020, 4:03 PM IST

ಲಾಕ್‌ಡೌನ್‌ ಸಡಿಲಿಕೆಯೇ ತಲೆನೋವು

ಗದಗ: ಕಳೆದ ಒಂದೂವರೆ ತಿಂಗಳಲ್ಲಿ ಜಿಲ್ಲೆಯಲ್ಲಿ ಬರೋಬ್ಬರಿ 12 ಪ್ರಕರಣಗಳು ಕಂಡು ಬಂದಿದ್ದು, ಸದ್ಯ ಏಳು ಪ್ರಕರಣಗಳು ಸಕ್ರಿಯವಾಗಿವೆ. ಆದರೆ, ಜನಹಿತಕ್ಕಾಗಿ ಲಾಕ್‌ಡೌನ್‌ ಸಡಿಲಿಕೆ ನೀಡಿದೆ ಎಂಬುದನ್ನೂ ಮರೆತು ವ್ಯಾಪಾರ-ವಹಿವಾಟಿಗೆ ಜನರು ಮುಗಿಬೀಳುತ್ತಿದ್ದಾರೆ. ಕೆಲವರು ಮುಖಕ್ಕೆ ಮಾಸ್ಕ್ ಧರಿಸುವುದಕ್ಕೆ ಅಸಡ್ಡೆ ತೋರುತ್ತಿರುವುದು ಅಪಾಯಕ್ಕೆ ಆಹ್ವಾನಿಸುವಂತಿದ್ದು, ದೊಡ್ಡ ತಲೆನೋವಾಗಿದೆ.

3ನೇ ಹಂತದ ಲಾಕ್‌ಡೌನ್‌ ಅವಧಿ ಯಲ್ಲಿ ದಿನದಿಂದ ದಿನಕ್ಕೆ ಮಾರುಕಟ್ಟೆ ಪ್ರದೇಶದಲ್ಲಿ ಜನ ಸಂದಣಿ ಹೆಚ್ಚುತ್ತಿದೆ. ರವಿವಾರ ಗದಗ-ಬೆಟಗೇರಿ ಅವಳಿ ನಗರ ಹಾಗೂ ಶಿರಹಟ್ಟಿ ಪಟ್ಟಣದ ಬಸ್‌ ನಿಲ್ದಾಣದಲ್ಲಿ ನಡೆಯುತ್ತಿರುವ ಮಾರುಕಟ್ಟೆಯಲ್ಲಿ ಹೆಚ್ಚಿನ ಜನ ಸಂದಣಿ ಕಂಡುಬಂತು. ಈ ಮಧ್ಯೆ ಗದಗ-ಬೆಟಗೇರಿ ಅವಳಿ ನಗರ ಸೇರಿ ಜಿಲ್ಲೆಯ ನಗರ-ಪಟ್ಟಣಗಳಲ್ಲಿ ಜನ ಸುರಕ್ಷಿತ ಅಂತರ ಕಾಯ್ದುಕೊಳ್ಳದೇ, ಮುಖಕ್ಕೆ ಮಾಸ್ಕ್ ಧರಿಸುವುದನ್ನೂ ಮರೆತಂತಿದೆ.

ಕೋವಿಡ್ ಸೋಂಕಿನಿಂದ ಮುಕ್ತಿಯಾಗದಿದ್ದರೂ ಸರ್ಕಾರ, ಆರ್ಥಿಕ ಉತ್ತೇಜನ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಕೆಲವು ಕ್ಷೇತ್ರಗಳಿಗೆ ವಿನಾಯ್ತಿ ಘೋಷಿಸಿದ್ದರಿಂದ ಮಾರ್ಕೆಟ್‌ ಪ್ರದೇಶ ಸಂಪೂರ್ಣವಾಗಿ ತೆರೆದುಕೊಂಡಿದೆ. ಬೆಳಗ್ಗೆ 7ರಿಂದ ಮಧ್ಯಾಹ್ನ 3 ಗಂಟೆವರೆಗೆ ವ್ಯಾಪಾರಕ್ಕೆ ಅವಕಾಶ ನೀಡಿದೆ. ಆದರೆ, ಕೆಲವರು ಸಡಿಲಿಕೆಯನ್ನೇ ಸ್ವೇಚ್ಛಾಚಾರದಂತೆ ನಡೆದುಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ.

ಸಾಮಾಜಿಕ ಅಂತರ-ಮಾಸ್ಕ್ ಮರೆತ ಜನ: ಇದಾದ ಕೆಲ ದಿನಗಳ ನಂತರ ಜಿಲ್ಲೆಯಲ್ಲಿ ಮತ್ತೆ ಪ್ರಕರಣಗಳ ಸಂಖ್ಯೆ ಏರುಮುಖವಾಗಿವೆ. ಗುಜರಾತ್‌ನಿಂದ ಆಗಮಿಸಿದ ಐವರಿಗೆ ಹಾಗೂ ಗಂಜೀಬಸವೇಶ್ವರ ಸರ್ಕಲ್‌ ಭಾಗದ ಪಿ-512 ವ್ಯಕ್ತಿಯಿಂದ ಇಬ್ಬರಿಗೆ ಸೋಂಕು ಹರಡಿದ್ದರಿಂದ ಆತಂಕ ಸೃಷ್ಟಿಸಿದೆ. ಆದರೆ, ಇದೆಲ್ಲದರ ಮಧ್ಯೆಯೂ ಕೆಲವೆಡೆ ಅಂಗಡಿ-ಮುಂಗಟ್ಟುಗಳಿಗೆ ಜನ ಮುಗಿಬೀಳುವುದು, ಮಾಸ್ಕ್ ಇಲ್ಲದೇ ಮಾರುಕಟ್ಟೆ ಪ್ರದೇಶದಲ್ಲಿ ಸಂಚರಿಸುತ್ತಿದ್ದಾರೆ. ಬಿಸಿಲಿನ ಝಳ ಹೆಚ್ಚಿದೆ ಎಂಬ ನೆಪವೊಡ್ಡುವ ಮೂಲಕ ಮಾಸ್ಕ್ಗಳನ್ನು ಕುತ್ತಿಗೆ ಭಾಗದಲ್ಲಿ ಎಳೆ ಬಿಡುತ್ತಿರುವುದು ಕಳವಳಕಾರಿ ಸಂಗತಿ.

ಎಚ್ಚೆತ್ತುಕೊಳ್ಳಬೇಕಿದೆ ಜಿಲ್ಲಾಡಳಿತ: ಮೂರನೇ ಹಂತದ ಆರಂಭಿಕ ದಿನಗಳಲ್ಲಿ ಮಾಸ್ಕ್ ಇಲ್ಲದೇ ಹೊರ ಬರುವವರಿಗೆ ನಗರಸಭೆಯಿಂದ ದಂಡ ವಿಧಿ ಸಿ, ಮಾಸ್ಕ್ ವಿತರಿಸುವ ಮೂಲಕ ಸಾರ್ವಜನಿಕರಿಗೆ ಬಿಸಿ ಮುಟ್ಟಿಸುತ್ತಿತ್ತು. ಆದರೆ, ಒಂದರೆಡು ದಿನಗಳ ನಂತರ ಈ ಅಭಿಯಾನ ಬಹುತೇಕ ಸ್ಥಗಿತಗೊಂಡಂತಿದೆ. ಅಲ್ಲದೇ, ನಗರದ ಮಾರುಕಟ್ಟೆ ಪ್ರದೇಶದಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕೆಲವೆಡೆ ಬ್ಯಾರಿಕೇಡ್‌ ಅಳವಡಿಸಿದ್ದು, ಆಯಾ ಭಾಗದಲ್ಲಿ ಮಾತ್ರ ಪೊಲೀಸರು ಕಂಡು ಬರುತ್ತಿದ್ದಾರೆ. ಹೀಗಾಗಿ ಕೋವಿಡ್ ಸೋಂಕು ತಡೆಯುವ ನಿಬಂಧನೆ ಬಗ್ಗೆ ಅಸಡ್ಡೆ ತೋರುವವರಿಗೆ ಹೇಳುವರು-ಕೇಳುವವರು ಇಲ್ಲದಂತಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕಿದೆ ಎನ್ನುವುದು ಸಾರ್ವಜನಿಕರ ಒತ್ತಾಯ.

ಮಹಾಮಾರಿ ಕೋವಿಡ್ ನಿಯಂತ್ರಿಸಲು ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಮತ್ತು ಮುಖಕ್ಕೆ ಮಾಸ್ಕ್ ಧರಿಸುವುದೇ ಪ್ರಮುಖ ಅಸ್ತ್ರವಾಗಿವೆ. ಜನ ಜೀವನ ಅಸ್ತವ್ಯಸ್ತವಾಗದಿರಲಿ ಎಂದು ಜನ ಹಿತಕ್ಕಾಗಿ ಸರ್ಕಾರ ಲಾಕ್‌ ಡೌನ್‌ನಿಂದ ವ್ಯಾಪಾರ-ವಹಿವಾಟಿಗೆ ಷರತ್ತು ಬದ್ಧ ಸಡಿಲಿಕೆ ನೀಡಿವೆ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕು. –ರಾಘವೇಂದ್ರ ಯಳವತ್ತಿ, ನಗರಸಭೆ ಮಾಜಿ ಸದಸ್ಯ

ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಪಾಸಿಟಿವ್‌ ಪ್ರಕರಣಗಳು ಹೆಚ್ಚುತ್ತಿವೆ. ಸೋಂಕು ತಡೆಗೆ ಕೋವಿಡ್ ವಾರಿಯರ್ಸ್ ಹಗಲಿರುಳು ಶ್ರಮಿಸುತ್ತಿದ್ದಾರೆ. ಆದರೆ, ಕೆಲವರು ಮುಖಕ್ಕೆ ಮಾಸ್ಕ್ ಧರಿಸದೇ, ಓಡಾಡುತ್ತಿದ್ದಾರೆ. ಅಂತವರಿಗೆ ಅಧಿಕಾರಿಗಳು 500, 1000 ರೂ. ದಂಡ ಹಾಕಬೇಕು. ಮಾಸ್ಕ್ ಧರಿಸದ ಅಂಗಡಿಕಾರರ ಅಂಗಡಿ ಸೀಜ್‌ ಮಾಡಬೇಕು. -ಮಹಾಲಕ್ಷ್ಮೀ ಡಂಬಳ, ಸ್ಥಳೀಯರು

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.