ಕ್ಷಯರೋಗ ಜಾಗೃತಿ ಕಾರ್ಯಕ್ರಮ
Team Udayavani, Jul 19, 2019, 9:48 AM IST
ಮುಳಗುಂದ: ಕಣವಿ ಗ್ರಾಮದಲ್ಲಿ ಕ್ಷಯರೋಗ ಜಾಗೃತಿ ಕಾರ್ಯಕ್ರಮ ಜರುಗಿತು.
ಮುಳಗುಂದ: ಸಮೀಪದ ಕಣವಿ ಗ್ರಾಮದಲ್ಲಿ ಕ್ಷಯರೋಗದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.
ಕಣವಿ ಪ್ರಾ.ಆ.ಕೇಂದ್ರದ ಹಿರಿಯ ಆರೋಗ್ಯ ಸಹಾಯಕ ಆರ್.ವಿ.ಗುರಣ್ಣವರ ಮಾತನಾಡಿ, ಕ್ಷಯರೋಗದ ಲಕ್ಷಣಗಳಾದ 2 ವಾರಕ್ಕಿಂತ ಅಧಿಕವಾದ ಕೆಮ್ಮು, ಕಫ, ಕಫದಲ್ಲಿ ರಕ್ತ ಬೀಳುವುದು, ಸಾಯಂಕಾಲ ಜ್ವರ ಬರುವುದು, ರಾತ್ರಿ ವೇಳೆಯಲ್ಲಿ ವಿಪರೀತ ಬೆವರುವುದು. ಹಸಿವು ಕಡಿಮೆ ಆಗುವುದು. ತೂಕ ಕಡಿಮೆ ಆಗುವುದು. ಇಂತಹ ಲಕ್ಷಣಗಳುಳ್ಳ ವ್ಯಕ್ತಿಗಳನ್ನು ಗುರುತಿಸಿ, ಕಫ ಪರೀಕ್ಷೆ, ಕ್ಷ-ಕಿರಣ ಪರೀಕ್ಷೆ ಮಾಡಿಸುವ ಮೂಲಕ ಪತ್ತೆ ಹಚ್ಚಿ ಚಿಕಿತ್ಸೆ ಪಡೆಯುವಂತೆ ಮಾಡುವುದು ಎಲ್ಲರ ಕರ್ತವ್ಯ ಎಂದರು.
ನಂತರ ಮಾತನಾಡಿದ ಕ್ಷಯರೋಗ ಮೇಲ್ವಿಚಾರಕ ಗಣೇಶ ಬಾಗಡೆ, ಕ್ಷಯರೋಗವು ಮೈಕೋಬ್ಯಾಕ್ಟೀರಿಯಾದಿಂದ ಗಾಳಿಯ ಮೂಲಕ ಹರಡುವ ಒಂದು ಸಾಂಕ್ರಾಮಿಕ ರೋಗವಾಗಿದ್ದು, ಇದು ಸೋಂಕುಳ್ಳ ವ್ಯಕ್ತಿಯು ಕೆಮ್ಮಿದಾಗ ಮತ್ತು ಸೀನಿದಾಗ ಗಾಳಿಯ ಮೂಲಕ ಹರಡುತ್ತದೆ. ಚಿಕಿತ್ಸೆ ಪಡೆಯದ ಒಬ್ಬ ವ್ಯಕ್ತಿಯು ಒಂದು ವರ್ಷದಲ್ಲಿ 10 ಕ್ಕಿಂತ ಹೆಚ್ಚು ಜನರಿಗೆ ರೋಗ ಹರಡಬಲ್ಲನು. ಆದ್ದರಿಂದ ಬೇಗನೆ ರೋಗ ಗುರುತಿಸಿ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.
ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಉಮೇಶ ಕರಮುಡಿ ಮಾತನಾಡಿ, ಕ್ಷಯರೋಗದ ಚಿಕಿತ್ಸೆ ಉಚಿತವಾಗಿದ್ದು, ಎಲ್ಲ ಸರಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಲಭ್ಯವಿರುತ್ತದೆ ಎಂದು ಹೇಳಿದರು.
ಕಿರಿಯ ಆರೋಗ್ಯ ಸಹಾಯಕ ನವೀನ ಸಾವಂತ ಮಾತನಾಡಿ, ಎಸಿಎಫ್ ಕಾರ್ಯಕ್ರಮದ ಅಂಗವಾಗಿ ಜು.15 ರಿಂದ 27ರವರೆಗೆ ಆಶಾ ಹಾಗೂ ಆರೋಗ್ಯ ಕಾರ್ಯಕರ್ತರು ಮನೆ ಮನೆ ಭೇಟಿ ಮಾಡಿ ರೋಗಿಗಳನ್ನು ಗುರುತಿಸುತ್ತಿದ್ದಾರೆ. ಜನರಿಗೆ ಆರೋಗ್ಯ ಶಿಕ್ಷಣ ನೀಡುತ್ತಿದ್ದು, ಜನರು ಸ್ವಯಂಪ್ರೇರಿತರಾಗಿ ಮುಂದೆ ಬಂದು ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.
ಪ್ರವೀಣ ರಾಮಗಿರಿ, ಅಶೋಕ , ಡಿ.ಎಂ. ಬೆಟಗೇರಿ, ನಾಗಪ್ಪ ದ್ಯಾವಣ್ಣವರ ಹಾಗೂ ಗ್ರಾಮದ ಸಾರ್ವಜನಿಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…