ಭಯದ ನಡುವೆ ಮಕ್ಕಳಿಗೆ ಪಾಠ!


Team Udayavani, Mar 3, 2020, 3:34 PM IST

gadaga-tdy-1

ನರೇಗಲ್ಲ: ಡ.ಸ. ಹಡಗಲಿ ಗ್ರಾಪಂ ವ್ಯಾಪ್ತಿಯಲ್ಲಿನ ಗುಜಮಾಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿರುವ ಅಂಗನವಾಡಿ ಕೇಂದ್ರದ ಪರಿಸರದಲ್ಲಿ ದಿನೇದಿನೆ ಅಸುರಕ್ಷಿತ ವಾತಾವರಣ ನಿರ್ಮಾಣವಾಗುತ್ತಿದೆ. ಅಂಗನವಾಡಿ ಕಾರ್ಯಕತೆಯರು ಹಾಗೂ ಸಹಾಯಕಿಯರು ಭಯದ ನಡುವೆ ಪಾಠ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಒಂದೆಡೆ ಪ್ರಾಥಮಿಕ ಶಾಲೆ ಪರಿಸರ ಹಸಿರಿನಿಂದ ನಳನಳಿಸುತ್ತಿದ್ದರೆ, ಇನ್ನೊಂದೆಡೆ ಪಕ್ಕದ ಅಂಗನವಾಡಿ ಪರಿಸರ ಸಮಸ್ಯೆಗಳ ಸರಮಾಲೆಯನ್ನೇ ಹೊತ್ತು ನಿಂತಿದೆ. ಕೇಂದ್ರದಲ್ಲಿ ಒಂದು ಕಡೆ ಅನಾನುಕೂಲರ ರೀತಿಯಲ್ಲಿರುವ ಶೌಚಾಲಯ, ಹಿಂದುಗಡೆ ಚರಂಡಿ ಹಾಗೂ ಜಾಲಿ ಕಂಟಿಗಳು, ಇನ್ನೊಂದು ಬದಿ ಗಲೀಜು ವಾತಾವರಣ ಹೀಗೆ ಯಾವ ಕಡೆ ನೋಡಿದರೂ ಈ ಕೇಂದ್ರದಲ್ಲಿ ಸಮಸ್ಯೆಗಳ ದರ್ಶನವಾಗುತ್ತದೆ. ಕೇಂದ್ರದೊಳಗೆ 2-3 ಬಾರಿ ಹಾವು ಸಹ ಕಾಣಿಸಿಕೊಂಡಿದೆ.

ಶಾಲೆ ಮುಂದೆಯೇ ಇರುವ ಚರಂಡಿ, ಹೊಲಸು ನೀರು ಅಂಗನಾವಡಿ ಕೇಂದ್ರದ ಶಿಕ್ಷಕಿಯ ಪಾಲಿಗೆ ದುಸ್ವಪ್ನದಂತಾಗಿದೆ. ಮಳೆಗಾಲದಲ್ಲಿ ಗುಂಡಿಯು ನೀರಿನಿಂದ ತುಂಬಿ ದೊಡ್ಡ ಹೊಂಡವಾಗಿ ಪರಿವರ್ತನೆಯಾಗುತ್ತದೆ. ಆಗ ಶಿಕ್ಷರಿಗೆ ಮಕ್ಕಳ ಸುರಕ್ಷತೆಯದೇ ಚಿಂತೆಯಾಗುತ್ತದೆ. ಮಕ್ಕಳನ್ನು ಹೊರಗಡೆ ಕಳುಹಿಸಲು ಭಯಪಡುವ ಸ್ಥಿತಿ ನಿರ್ಮಾಣವಾಗುತ್ತದೆ. ಕೇಂದ್ರದ ಹಿಂದೆಲ್ಲ ಗಿಡಗಂಟಿಗಳು ಬೆಳೆದು ಹುಳ ಹುಪ್ಪಡಿಗಳು ಹರಿದಾಡುತ್ತವೆ. ಇದರಿಂದಾಗಿ ಮಕ್ಕಳಿಗೆ ಅಂಗನವಾಡಿಗೆ ಕಳುಹಿಸಲು ಪಾಲಕರು ಭಯಪಡುವಂತಾಗಿದೆ.

ಅಂಗನವಾಡಿ ಕೇಂದ್ರಕ್ಕಿಲ್ಲ ಕಾಂಪೌಂಡ್‌: ಅಂಗನವಾಡಿ ಕೇಂದ್ರ ಮುಂದಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸುತ್ತಲೂ ಕಾಂಪೌಂಡಿದೆ. ಆದರೆ, ಅಂಗನವಾಡಿ ಕೇಂದ್ರದ ಬಳಿ ಕಾಂಪೌಂಡಿಲ್ಲ. ಹೀಗಾಗಿ ಸ್ಥಳೀಯರು ಬಂದು ಕೇಂದ್ರದ ಆವರಣವನ್ನು ಗಲೀಜು ಮಾಡಿಹೋಗುತ್ತಿದ್ದಾರೆ. ಇದಕ್ಕೆ ತಡೆ ಹಾಕಬೇಕಾದರೆ ಕೇಂದ್ರದ ಬಳಿಯೂ ಸುತ್ತಲೂ ತಡೆ ಬೇಲಿ ನಿರ್ಮಿಸುವುದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮುಂದಾಗಬೇಕಿದೆ. ಈಗಾಗಲೇ ಈ ಅಂಗನವಾಡಿ ಸುತ್ತಲೂ ಕಾಂಪೌಂಡ್‌ ನಿರ್ಮಿಸಿ ಅಂತಾ ಗ್ರಾ.ಪಂ ಹಾಗೂ ಶಿಶು ಅಭಿವೃದ್ಧಿ ಇಲಾಖೆಗೆ ಹತ್ತು ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಂಗನಾಡಿ ಕೇಂದ್ರದಲ್ಲಿ ಒಂದು ಸೂಕ್ತ ಆಟದ ಮೈದಾನವಿಲ್ಲ. ಕೇಂದ್ರದ ಸುತ್ತಲಿನ ಪ್ರದೇಶವನ್ನು ಗ್ರಾ.ಪಂ ಹಾಗೂ ಶಿಶು ಅಭಿವೃದ್ಧಿ ಇಲಾಖೆಯಿಂದ ಕೂಡಲೇ ಸ್ವತ್ಛ ಮತ್ತು ಜಾಲಿ ಕಂಟಿಗಳನ್ನು ತೆಗೆದು ಆಟದ ಮೈದಾನ ಮಾಡಬಹುದಾಗಿದೆ.

ಬೇಕಿದೆ ಶೌಚಾಲಯ: ಸದ್ಯ ಕೇಂದ್ರದ ಎಡಭಾಗದಲ್ಲಿ ಇರುವ ಶೌಚಾಲಯವನ್ನು ಅಂಗನವಾಡಿ ಮಕ್ಕಳು ಬಳಕೆ ಮಾಡುತ್ತಿಲ್ಲ. ಆ ಶೌಚಾಲಯ ಬಳಸಬೇಕಾದರೆ ಮಕ್ಕಳು ದೊಡ್ಡ ಮೆಟ್ಟಿಲುಗಳನ್ನು ಹತ್ತಿ ಇಳಿಯಬೇಕಾಗಿದೆ. ಇದು ಚಿಕ್ಕ ಮಕ್ಕಳಿಗೆ ಕಷ್ಟ. ಆದ್ದರಿಂದ ಕೇಂದ್ರದ ಪರಿಸರದಲ್ಲಿ ಹೊಸದಾಗಿ ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಶೌಚಾಲಯ ನಿರ್ಮಿಸಬೇಕು. ಅಲ್ಲದೇ ನೀರಿನ ತೊಟ್ಟಿಗೆ ಶಾಶ್ವತವಾದ ಮುಚ್ಚಳ ಹಾಕಬೇಕಿದೆ.

ಗುಜಮಾಗಡಿ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿರುವ ಸಮಸ್ಯೆಗಳ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಕೇಂದ್ರದ ಸುತ್ತಇರುವ ಜಾಲಿ ಕಂಟಿಗಳನ್ನು ಗ್ರಾ.ಪಂ ಅಧಿಕಾರಿಗಳಿಗೆ ತಿಳಿಸಿ ಸ್ವತ್ಛ ಮಾಡಲಾಗುವುದು.-ನಾಗನಗೌಡ ಪಾಟೀಲ, ಸಿಡಿಪಿಒ

 

ಸಿಕಂದರ ಎಂ. ಆರಿ

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.