ನೀರಿನ ಪೈಪ್‌ಲೈನ್‌ ದುರಸ್ತಿಗೆ ಆಗ್ರಹಿಸಿ ಧರಣಿ


Team Udayavani, Mar 10, 2021, 6:01 PM IST

ನೀರಿನ ಪೈಪ್‌ಲೈನ್‌ ದುರಸ್ತಿಗೆ ಆಗ್ರಹಿಸಿ ಧರಣಿ

ಗದಗ: ವರ್ಷಗಳು ಕಳೆದರೂ ಕುಡಿಯುವ ನೀರಿನ ಪೈಪ್‌ಲೈನ್‌ ದುರಸ್ತಿಗೊಳಿಸದ ಲೋಕೋಪಯೋಗಿ ಇಲಾಖೆ ಅಧಿ ಕಾರಿಗಳ ಕ್ರಮವನ್ನು ಖಂಡಿಸಿ ನಗರದ ಹೊಂಬಳ ರಸ್ತೆಯಲ್ಲಿರುವ ಸರಕಾರಿ ಪಶು ವೈದ್ಯಕೀಯ ಮಹಾವಿದ್ಯಾಲಯದ ನೂರಾರು ವಿದ್ಯಾರ್ಥಿಗಳುಲೋಕೋಪಯೋಗಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ 24×7 ಕುಡಿಯುವ ನೀರಿನ ಯೋಜನೆಯಡಿ ಕಾಲೇಜಿಗೆ ನೀರಿನ ಸಂಪರ್ಕ ಕಲ್ಪಿಸಿದೆ. ಆದರೆ, ಹೊಂಬಳ ನಾಕಾ ಬಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವೇಳೆ ನೀರಿನ ಪೈಪ್‌ ಒಡೆದಿದ್ದು, ಕಳೆದಎರಡು ವರ್ಷಗಳಿಂದ ಕಾಲೇಜಿಗೆ ನೀರು ಪೂರೈಕೆಸಂಪೂರ್ಣ ಸ್ಥಗಿತಗೊಂಡಿದೆ. ಪರಿಣಾಮ ಕಾಲೇಜಿನಲ್ಲಿನೀರಿಗಾಗಿ ಹಾಹಾಕಾರ ಶುರುವಾಗಿದೆ. ಇದರಿಂದಾಗಿ,ಕಾಲೇಜಿನಲ್ಲಿರುವ 200 ವಿದ್ಯಾರ್ಥಿಗಳು,50ಕ್ಕೂ ಹೆಚ್ಚು ಸಿಬ್ಬಂದಿ ಹಾಗೂ ನೂರಾರು ಜಾನುವಾರುಗಳು ನೀರಿಗಾಗಿ ಪರದಾಡುವಂತಾಗಿದೆ.

ಕಾಲೇಜಿನಲ್ಲಿರುವ ಕೊಳವೆ ಬಾವಿಯಿಂದ ಅಲ್ಪಸ್ವಲ್ಪನೀರು ಪೂರೈಕೆಯಾಗುತ್ತಿದೆ. ಆದರೆ, ಅದು ಸಂಪೂರ್ಣ ಫ್ಲೋರೈಡ್‌ಯುಕ್ತವಾಗಿದ್ದು, ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಸುದಿಧೀರ್ಘ‌ ಅವ ಧಿಗೆ ಫ್ಲೋರೈಡ್‌ ನೀರು ಬಳಸಿದಲ್ಲಿ ಚರ್ಮ ಹಾಗೂ ಕೂದಲಿನ ಸಮಸ್ಯೆ ಎದುರಾಗುತ್ತದೆ ಎಂದು ವಿದ್ಯಾರ್ಥಿನಿಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಈ ಬಗ್ಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಸ್ಥಳೀಯ ಶಾಸಕ ಎಚ್‌.ಕೆ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲಅವರ ಗಮನಕ್ಕೆ ತಂದರೂ, ಅ ಧಿಕಾರಿಗಳು ಕ್ರಮವಹಿಸುತ್ತಿಲ್ಲ. ಸಮಸ್ಯೆಗೆ ಯಾರೂ ಸ್ಪಂದಿಸ ದಿದ್ದರೆ ಬಗೆಹರಿಯುವುದು ಹೇಗೆ ಎಂದು ಅಧಿ ಕಾರಿಗಳ ವಿರುದ್ಧ ಕಿಡಿಕಾರಿದರು.

ಅಧಿಕಾರಿಗಳ ಮಧ್ಯೆ ವಾಗ್ವಾದ: ವಿದ್ಯಾರ್ಥಿಗಳುಕಚೇರಿಗೆ ಮುತ್ತಿಗೆ ಹಾಕಿದ ವಿಚಾರವಾಗಿಪಶುವೈದ್ಯಕೀಯ ವಿಶ್ವವಿದ್ಯಾಲಯದ ಡೀನ್‌ಹಾಗೂ ಲೋಕೋಪ ಯೋಗಿ ಇಲಾಖೆ ಸಹಾಯಕಅಭಿಯಂತರ ದೇವರಾಜ್‌ ಮಧ್ಯೆ ಮಾತಿನ ಕಚಮಕಿನಡೆಯಿತು. ಪೈಪ್‌ಲೈನ್‌ ದುರಸ್ತಿಗೊಳಿಸುವುದಾಗಿಭರವಸೆ ನೀಡಿದ್ದರೂ ವಿದ್ಯಾರ್ಥಿಗಳನ್ನು ಕರೆತಂದುರಂಪ ಮಾಡುತ್ತಿದ್ದೀರಿ ಎಂದು ಕಾಲೇಜು ಅ ಧಿಕಾರಿಗಳವಿರುದ್ಧ ದೇವರಾಜ ಹರಿಹಾಯ್ದರು. ಅದಕ್ಕೆ ಉತ್ತರಿಸಿದಡೀನ್‌ ನಾಗರಾಜ್‌ ಅವರು, ಇದು ಇಂದು ನಿನ್ನೆಯಸಮಸ್ಯೆಯಲ್ಲ. ಕಳೆದ ಮೂರು ವರ್ಷಗಳಿಂದ ಇದೇಗೋಳು. ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳಸಂಖ್ಯೆಯೂ ಹೆಚ್ಚುತ್ತಿದ್ದು, ನೀರಿನದ್ದೇ ಬಹುದೊಡ್ಡಸಮಸ್ಯೆಯಾಗಿದೆ. ಈ ಬಗ್ಗೆ ಹಲವು ಬಾರಿ ತಮ್ಮಗಮನಕ್ಕೆ ತಂದರೂ, ಪ್ರಯೋಜನವಾಗುತ್ತಿಲ್ಲ. ರೈಲ್ವೆಇಲಾಖೆಯಿಂದ 20 ಲಕ್ಷ ರೂ. ನೀಡಿದ್ದರೂ, ದುರಸ್ತಿಗೆಯಾಕೆ ಮೀನಮೇಷ ಎಣಿಸುತ್ತಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡರು.

ಲೋಕೋಪಯೋಗಿಇಲಾಖೆಯಿಂದಲೇ ಕಟ್ಟಡನಿರ್ಮಿಸಿದ್ದರಿಂದ ಮೂಲ ಸೌಕರ್ಯ ಒದಗಿಸುವುದು ನಮ್ಮ ಹೊಣೆ. ಆದರೆ,ಕಾಲೇಜಿನ ಸಮಸ್ಯೆ ಗಂಭೀರವಾಗಿಕಾಡುತ್ತಿರುವ ಬಗ್ಗೆ ಈಗಷ್ಟೇ ನನ್ನಗಮನಕ್ಕೆ ಬಂದಿದೆ. ಎರಡು ದಿನಗಳಲ್ಲಿಕಾಮಗಾರಿ ಪೂರ್ಣಗೊಳಿಸಿ, ವಾರದಲ್ಲಿ ನೀರು ಸರಬರಾಜು ಮಾಡಿ, ಹಸ್ತಾಂತರ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. – ರಾಥೋಡ್‌, ಇಇ ಲೋಕೋಪಯೋಗಿ ಇಲಾಖೆ

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.